ವಾಹನ ಮಾಲಿಕರಿಗೆ ಗುಡ್​​ ನ್ಯೂಸ್​: ಹೆಚ್​​​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಅವಧಿ ವಿಸ್ತರಣೆ

ಮಾರ್ಚ್ 3, 2019ರ ಬಳಿಕ ರಸ್ತೆಗೆ ಇಳಿಯುವ ಹೊಸ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸುವುದು ಕಡ್ಡಾಯವಾಗಿದೆ. ಇನ್ನು ಇದಕ್ಕೂ ಮುನ್ನ ನೋಂದಣಿಗೊಂಡ ವಾಹನಗಳಿಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಾರಿಗೆ ಇಲಾಖೆ 2024ರ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಅವಧಿಯನ್ನೂ ವಿಸ್ತರಣೆ ಮಾಡಿದ್ದಾರೆ.

ವಾಹನ ಮಾಲಿಕರಿಗೆ ಗುಡ್​​ ನ್ಯೂಸ್​: ಹೆಚ್​​​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಅವಧಿ ವಿಸ್ತರಣೆ
ನಂಬರ್ ಪ್ಲೇಟ್​​
Follow us
| Updated By: ಆಯೇಷಾ ಬಾನು

Updated on:Feb 14, 2024 | 1:49 PM

ಬೆಂಗಳೂರು, ಫೆಬ್ರವರಿ 14: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಹೇಳಿದರು. ವಿಧಾನ್​ ಪರಿಷತ್​​ನಲ್ಲಿ (Vidhan Parishad) ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.

ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?

ಈ HSRP ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

  1. https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ಇದನ್ನೂ ಓದಿ: ಸ್ಪೀಡ್ ಕ್ಯಾಮೆರಾದಿಂದ ತಪ್ಪಿಸಿಕೊಳ್ಳಲು ಹೊಸ ಟ್ರಿಕ್ ಕಂಡುಹಿಡಿದ ಸವಾರರು: ಸಿಕ್ಕಿ ಬಿದ್ದರೆ…

HSRP ಅಳವಡಿಸುವವರು ಗಮನಿಸಬೇಕಾದ ಪ್ರಮುಖ ಅಂಶಗಳು

  1. https://transport.karnataka.gov.in www.siam.in ಮೂಲಕ ಮಾತ್ರ HSRP ಅಳವಡಿಕೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ / ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP ಒಂದೇ ರೀತಿಯ ಪ್ರೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ, ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು/ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಆಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ, HSRP ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:28 am, Wed, 14 February 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು