AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಜನರ ಮೇಲೆ ದಾಳಿ: ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿ ಸೆರೆ

ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಹುಚ್ಚು ನಾಯಿಯೊಂದು ದಾಳಿ ಮಾಡಿ 20ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದೆ. ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಿಕೆ ಅಧಿಕಾರಿಗಳು ಘಟನೆಯ ನಂತರ ನಾಯಿಯನ್ನು ಹಿಡಿದಿದ್ದಾರೆ. ಆದರೆ, ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಶುರುವಾಗಿದೆ.

30ಕ್ಕೂ ಹೆಚ್ಚು ಜನರ ಮೇಲೆ ದಾಳಿ: ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿ ಸೆರೆ
30ಕ್ಕೂ ಹೆಚ್ಚು ಜನರ ಮೇಲೆ ದಾಳಿ: ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿ ಸೆರೆ
ಶಿವಕುಮಾರ್ ಪತ್ತಾರ್
| Edited By: |

Updated on: Oct 28, 2024 | 10:08 PM

Share

ಹುಬ್ಬಳ್ಳಿ, ಅಕ್ಟೋಬರ್ 28: ಹುಚ್ಚು ನಾಯಿಯೊಂದು (dog) ಸಾರ್ವಜನಿಕರ ಮೇಲೆ ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿನಿಯರು ಸೇರಿದಂತೆ 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ನಡೆದಿದೆ. ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿಯಲ್ಲಿ ಈ ಘಟನೆ ನಡೆದಿದೆ. ಹೊಸ ಬಸ್ ನಿಲ್ದಾಣದ ಬಳಿ ಸಂಜೆ 5.30 ಸುಮಾರಿಗೆ ಸಾರ್ವಜನಿಕರು ಓಡಾಡುತ್ತಿದ್ದ ರಸ್ತೆಯಲ್ಲಿ ಬಂದ ಹುಚ್ಚು ನಾಯಿ, ಕಂಡ ಕಂಡವರ ಮೇಲೆ ದಾಳಿ ಮಾಡಿತ್ತು. ಸಿಕ್ಕ ಸಿಕ್ಕವರ ಕೈ, ಕಾಲು ಕಚ್ಚಿದೆ. ಬಹುತೇಕವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ನಾಯಿ ದಾಳಿಗೆ ಒಳಗಾಗಿದ್ದಾರೆ. ಸದ್ಯ ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಇತ್ತೀಚಿನ ನಗರದಲ್ಲಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರು ಸಾಕಷ್ಟು ಬಾರಿ ಪಾಲಿಕೆಗೆ ದೂರು ನೀಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ, ನಿರ್ಲಕ್ಷ್ಯ ಧೋರಣೆ ತೋರಿದ ಪರಿಣಾಮ, ಇಂತಹ ಘಟನೆ ಮರುಕಳಿಸುತ್ತಿದೆ ಅಂತ ಗಾಯಗಳು ಮತ್ತು ಜನ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಬೀದಿನಾಯಿಗಳ ಕಾಟ: ಟಿವಿ9 ಅಭಿಯಾನ ಬೆನ್ನಲ್ಲೇ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ

ಯಾವಾಗ 30 ಕ್ಕೂ ಹೆಚ್ಚು ಜನರಿಗೆ ನಾಯಿ ಕಡದಿರುವ ವಿಷಯ ತಿಳಿಯಿತೋ ಪಾಲಿಕೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಘಟನೆ ನಡೆದ ಮೂರು ಗಂಟೆಯಲ್ಲಿ ದಾಳಿ ಮಾಡಿದ ಹುಚ್ಚು ನಾಯಿಯನ್ನು ಪಾಲಿಕೆ ಸಿಬ್ಬಂದಿ ಹುಬ್ಬಳ್ಳಿಯ ವಾಸವಿ ನಗರದ ಬಳಿ ಹಿಡಿದಿದ್ದಾರೆ.

ಒಟ್ಟಾರೆ ಜನರ ನೆಮ್ಮದಿ ಕೆಡಿಸಿದ್ದ ಹುಚ್ಚು ನಾಯಿಯನ್ನ ಪಾಲಿಕೆ ಸಿಬ್ಬಂದಿ ಹಿಡಿದಿದ್ದಾರೆ. ಆದರೂ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳ ಹಾವಳಿಗೆ ಪಾಲಿಕೆ ಅಧಿಕಾರಿಗಳು ಕಡಿವಾಣ ಹಾಕಬೇಕಿದೆ.

ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಕೋಲಾರದ ಜನ

ಕೋಲಾರ: ಬೀದಿ ನಾಯಿಗಳ ಹಾವಳಿಗೆ ಕೋಲಾರದ ಜನ ಬೇಸತ್ತಿದ್ದಾರೆ. ದಿನೇ‌ ದಿನೇ‌ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಪ್ರತಿ ಬೀದಿಯಲ್ಲಿ ಸುಮಾರು 10 ರಿಂದ 15 ನಾಯಿಗಳ ಗುಂಪ್ಪಿವೆ. ಮಹಿಳೆಯರು ಮತ್ತು ವೃದ್ದರ ಮೇಲೆ ನಾಯಿಗಳು ದಾಳಿ ಮಾಡುತ್ತಿವೆ. ಹೀಗಾಗಿ ಮಕ್ಕಳು ಮನೆಯಿಂದ‌ ಹೊರ ಬರಲು ಹೆದರುವಂತಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ; ಕಬ್ಬನ್ ಪಾರ್ಕ್ ನಲ್ಲೂ ಸಾಕುನಾಯಿಗಳ ಮಾಲೀಕರಿಂದ ರೂಲ್ಸ್ ಬ್ರೇಕ್

ಈಗಾಗಲೇ‌ ಕೋಲಾರ ಸೇರಿದಂತೆ ಶ್ರೀನಿವಾಸಪುರ ತಾಲೂಕಿನಲ್ಲಿ 20ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿ ಗಾಯಗೊಳಿಸಿದೆ. ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ