AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಬೆಂಗಳೂರು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇನ್ಮುಂದೆ ಅರಸೀಕೆರೆಯಲ್ಲೂ ಎಕ್ಸಪ್ರೆಸ್​ ರೈಲನ್ನು ಹತ್ತಬಹುದು

ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ.

ಹುಬ್ಬಳ್ಳಿ-ಬೆಂಗಳೂರು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇನ್ಮುಂದೆ ಅರಸೀಕೆರೆಯಲ್ಲೂ ಎಕ್ಸಪ್ರೆಸ್​ ರೈಲನ್ನು ಹತ್ತಬಹುದು
ಅರಸೀಕರೆ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Mar 22, 2023 | 11:33 AM

Share

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ (Shri Siddharoodha Swamiji Railway Station Hubli) ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ (Krantiveera Sangolli Rayanna Railway Station) ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ (SSS Hubli)-ಕೆಎಸ್​ಆರ್​ ಬೆಂಗಳೂರು (KSR Hubli)-ಎಸ್​ಎಸ್​​ಎಸ್​ ಹುಬ್ಬಳ್ಳಿ ದೈನಂದಿನ ವಿಶೇಷ ಎಕ್ಸಪ್ರೆಸ್​ ರೈಲು (ರೈಲು ಸಂಖ್ಯೆ 07339/07340) ರೈಲನ್ನು ಇನ್ಮುಂದೆ ಎರಡು ಮಾರ್ಗದಲ್ಲೂ ಅರಸಿಕೇರೆ ನಿಲ್ದಾಣದಲ್ಲಿ ನಿಲ್ಲಿಸಲಾಗುತ್ತದೆ.

ರೈಲು ಸಂಖ್ಯೆ 07339 ರೈಲು ಇಂದು (ಮಾ.22) ಬೆಳಿಗ್ಗೆ 3:33ಕ್ಕೆ ಅರಸಿಕೇರೆ ತಲುಪಿದ್ದು, 3:36 ಬೆಳಗ್ಗೆ ಅಲ್ಲಿಂದ ಹೊರಟಿದೆ. ಅದೇ ರೀತಿ, ಹಿಂದಿರುಗುವ ಸಮಯದಲ್ಲಿ, ರೈಲು ಸಂಖ್ಯೆ 07340 ಕೆಎಸ್‌ಆರ್ ರಾತ್ರಿ 02:07 ಕ್ಕೆ ಅರಸೀಕೆರೆಗೆ ಆಗಮಿಸಲಿದ್ದು, ಅಲ್ಲಿಂದ 02:10 ಕ್ಕೆ ಹೊರಡಲಿದೆ.

ಇದನ್ನೂ ಓದಿ: ಸಕ್ಕರೆ ಕಾಯಿಲೆ ವಿರುದ್ಧ ಜಾಗೃತಿ: 40 ದಿನಗಳಲ್ಲಿ ಕಾಶ್ಮೀರ-ಕನ್ಯಾಕುಮಾರಿ ಸೈಕಲ್​ ಯಾತ್ರೆ ಮಾಡಿದ ಧಾರವಾಡದ ವ್ಯಕ್ತಿ

ಮಾರ್ಚ್ 23, 2023 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 07353/07354 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ಎರಡು ದಿಕ್ಕುಗಳಲ್ಲಿ ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಹೊಂದಿರುತ್ತದೆ.

ಈ ರೈಲು (07353) ಯಶವಂತಪುರಕ್ಕೆ 07:39/07:41 ಕ್ಕೆ, ತುಮಕೂರು 08:28/08:30 ಕ್ಕೆ ಮತ್ತು ಅರಸೀಕೆರೆ 09:40 ಅಥವಾ 09:43 ಕ್ಕೆ ಆಗಮಿಸಲಿದೆ. ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ (07354) ಅರಸೀಕೆರೆಗೆ ಸಂಜೆ 07:17 ಅಥವಾ 07:20 ಕ್ಕೆ, ತುಮಕೂರು ರಾತ್ರಿ 08:48 ಅಥವಾ 08:50 ಕ್ಕೆ ಮತ್ತು ಯಶವಂತಪುರ ರಾತ್ರಿ 10:08/10:10 ಕ್ಕೆ ತಲುಪಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Wed, 22 March 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!