ಅಂಜಲಿಯನ್ನು ಹತ್ಯೆಗೈದು, ರೈಲಿನಲ್ಲಿ ಮಹಿಳೆಗೂ ಚಾಕುವಿನಿಂದ ಚುಚ್ಚಿದ್ದ ಆರೋಪಿ ವಿಶ್ವನ ಟ್ರಾವೆಲ್​ ಹಿಸ್ಟ್ರಿ ಇಲ್ಲಿದೆ

ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರನನ್ನು ಕೊಲೆ ಮಾಡಿದ್ದ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಆರೋಪಿ ಪೊಲೀಸರ ಕೈಗೆ ಸಿಕ್ಕಿದ್ದು ಹೇಗೆ? ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ವಿಶ್ವನಿಗೂ ಮತ್ತು ಅಂಜಲಿಗು ಹೇಗೆ ಪರಿಚಯ ಇಲ್ಲಿದೆ ಸಂಪೂರ್ಣ ಮಾಹಿತಿ..

ಅಂಜಲಿಯನ್ನು ಹತ್ಯೆಗೈದು, ರೈಲಿನಲ್ಲಿ ಮಹಿಳೆಗೂ ಚಾಕುವಿನಿಂದ ಚುಚ್ಚಿದ್ದ ಆರೋಪಿ ವಿಶ್ವನ ಟ್ರಾವೆಲ್​ ಹಿಸ್ಟ್ರಿ ಇಲ್ಲಿದೆ
ಅಂಜಲಿ, ವಿಶ್ವ
Follow us
| Updated By: ವಿವೇಕ ಬಿರಾದಾರ

Updated on:May 17, 2024 | 12:58 PM

ದಾವಣಗೆರೆ, ಮೇ 17: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಿಲಿ ಅಂಬಿಗೇರ (20) (Anjali Ambiger) ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ವಿಶ್ವ ವಿರುದ್ಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೈಲಿನಲ್ಲಿ ನನ್ನನ್ನು ಕೆಟ್ಟದಾಗಿ ನೋಡುತ್ತಿದ್ದನು. ನಂತರ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಗದಗ (Gadag) ಮೂಲದ ಲಕ್ಷ್ಮಿ ಎಂಬವರು ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ.

ಅಂಜಲಿ ಕೊಲೆಗೈದು ಮಹಿಳೆಗೆ ಚಾಕುವಿನಿಂದ ಇರಿತ

ಬುಧವಾರ ಮೇ 15ರ ತಮ್ಮ ಕಾರ್ಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದ ಹುಬ್ಬಳ್ಳಿ ಜನರಿಗೆ ಬೆಳ್ಳಂ ಬೆಳಿಗ್ಗೆ ಅದೊಂದು ಸುದ್ದಿ ಅಘಾತ ಉಂಟು ಮಾಡಿತು. ಅದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಜ್ಜಿ ಮತ್ತು ತಂಗಿಯೊಂದಿಗೆ ವಾಸಿಸುತ್ತಿದ್ದ ಅಂಜಲಿ ಅಂಬಗೇರ (20) ಕೊಲೆ. ಶೋಕಿಗಾಗಿ ಕಳ್ಳತನ ಆರೋಪಿ ವಿಶ್ವ ಆರೋಪಿ ವಿಶ್ವ ಅಲಿಯಾಸ್​ ಗಿರೀಶ್ ಮೈಸೂರಲ್ಲಿ ಮಹಾರಾಜ್ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದನು.

ಕೊಲೆಯಾದ ಅಂಜಲಿ ಮತ್ತು ಆರೋಪಿ ವಿಶ್ವ ಸಹಪಾಠಿಗಳಾಗಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ಅಂಜಲಿ ವಾರದ ಹಿಂದೆ ವಿಶ್ವ ಬಳಿ ಎರಡು ಸಾವಿರ ಹಣ ಕೇಳಿದ್ದಳು. ಆಗ ಆರೋಪಿ ವಿಶ್ವ ಅಂಜಲಿಗೆ ಒಂದು ಸಾವಿರ ರೂಪಾಯಿ ಪೋನ್ ಪೇ ಮಾಡಿದ್ದನು.

ಆ ನಂತರ ಅಂಜಲಿ ವಿಶ್ವನ ನಂಬರ್ ಬ್ಲಾಕ್ ಲೀಸ್ಟ್ ಹಾಕಿದ್ದಳು. ವಿಶ್ವ ಎಷ್ಟೇ ಕರೆ ಮಾಡಿದರು ಅಂಜಲಿ ಪೋನ್ ರೀಸಿವ್ ಮಾಡುತ್ತಿರುಲಿಲ್ಲ. ಇದರಿಂದ ವಿಶ್ವ ಸಿಟ್ಟಿಗೆದ್ದು ಮೇ 15 ರಂದು ನಸುಕಿನ ಜಾವ ಮೈಸೂರಿ‌ಂದ ಹುಬ್ಬಳ್ಳಿಗೆ ಬಂದಿದ್ದಾನೆ. ಹುಬ್ಬಳ್ಳಿ ಹೊಸ ನಿಲ್ದಾಣದಲ್ಲಿ ಬಸ್​ ಇಳಿದುಕೊಂಡು, 250 ರೂಪಾಯಿಗೆ ಆಟೋ ಬಾಡಿಗೆ ಪಡೆದಿದ್ದಾನೆ. ಆಟೋ ಚಾಲಕನಿಗೆ ಪ್ರಯಾಣಿಸುತ್ತಿರುವಾಗಲೇ ಹಣ ನಿಡಿದ್ದಾನೆ. ಆಟೋದಲ್ಲಿ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ಬಂದಿದ್ದಾನೆ. ಬಳಿಕ ಆಟೋದವನು ಸ್ಥಳದಿಂದ ತೆರಳಿದ್ದಾನೆ. ಬಳಿಕ ಎರಡೇ ನಿಮಿಷದಲ್ಲಿ ಅಂಜಲಿಯನ್ನು ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದನು.

ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಜಿ ಪರಮೇಶ್ವರ್​

ಕೊಲೆ ಮಾಡಿದ ಬಳಿಕ ವಿಶ್ವ ಮತ್ತೆ ಹೊಸ ಬಸ್ ನಿಲ್ದಾಣಕ್ಕೆ ಬಂದು ಬಸ್​ ಹತ್ತಿ ಹಾವೇರಿಗೆ ಹೋಗಿದ್ದಾನೆ. ಹಾವೇರಿಯಲ್ಲಿ ಮೈಸೂರು ರೈಲು ಹತ್ತಿದ್ದಾನೆ. ರೈಲಿನಲ್ಲಿ ಬಿಹಾರ ವ್ಯಕ್ತಿಯೊಬ್ಬನ ಮೊಬೈಲ್​ನಲ್ಲಿ ಯಾವುದೋ ಪೋಟೋ ನೋಡಿದ್ದಾನೆ. ಮೈಸೂರಿಗೆ ತಲುಪಿದ ಬಳಿಕ ತಾನು ಕೆಲಸ ಮಾಡುತ್ತಿದ್ದ ಮಹರಾಜ್ ಹೋಟೆಲ್​ನಲ್ಲಿ ಮಲಗಿದ್ದನು.

ಆರೋಪಿ ವಿಶ್ವ ಕಳೆದ 15 ದಿನಗಳಿಂದ ಮೊಬೈಲ್​ ಬಳಕೆ ಮಾಡಿರಲಿಲ್ಲ. ಅದೇನು ತಿಳಿಯಿತು ಆರೋಪಿ ವಿಶ್ವ ಪೊಲೀಸರಿಗೆ ಶರಣಾಗಲು ಹುಬ್ಬಳ್ಳಿಗೆ ಬರಲು ನಿರ್ಧರಿಸಿದ್ದಾನೆ. ಹೀಗಾಗಿ ಆರೋಪಿ ವಿಶ್ವ ಮೈಸೂರಿನಿಂದ ಅರಸಿಕೇರೆಗೆ ಬಂದು, ಇಲ್ಲಿ ವಿಶ್ವಮಾನ ಎಕ್ಸಪ್ರೆಸ್​ ಜನರಲ್​ ಬೋಗಿ ಹತ್ತಿದ್ದಾನೆ. ಇದೇ ರೈಲಿನಲ್ಲಿ ತುಮಕೂರಿನಿಂದ ದಂಪತಿ ಬರುತ್ತಿದ್ದರು. ಅರಸಿಕೆರೆಯಲ್ಲಿ ರೈಲು ಹತ್ತಿದ ನಂತರ ಆರೋಪಿ ವಿಶ್ವ ಮಹಿಳೆಯನ್ನು ಕೆಟ್ಟ ದೃಷ್ಟಯಿಂದ ನೋಡುತ್ತಿದ್ದನು. ರೈಲು ಚಿಕ್ಕಜಾಜೂರಿನ ನಿಲ್ದಾಣಕ್ಕೆ ಬಂದಾಗ ಮಹಿಳೆ ಶೌಚಕ್ಕೆ ಹೋದರು. ಈ ವೇಳೆ ಆರೋಪಿ ವಿಶ್ವ ಮಹಿಳೆಯನ್ನು ಹಿಂಬಾಲಿಸಿದ್ದಾನೆ.

ಬಳಿಕ ಶೌಚಾಲಯದ ಕಿಂಡಿಯಿಂದ ಒಳಗಡೆ ಇಣುಕಿ ನೋಡಿದ್ದಾನೆ. ಇದನ್ನು ಗಮನಿಸಿದ ಮಹಿಳೆ ನಿನಗೆ ಅಕ್ಕ-ತಂಗಿಯವರಿಲ್ಲ ಎಂದು ದಬಾಯಿಸಿದ್ದಾರೆ. ಆಗ ವಿಶ್ವ ಮಹಿಳೆಗೆ ಚಾಕು ತೋರಿಸಿ ಹೊಟ್ಟೆಗೆ ಚುಚ್ಚಲು ಮುಂದಾಗಿದ್ದಾನೆ. ಆಗ ಮಹಿಳೆ ಏಡಗೈ ಮುಂದೆ ತಂದಿದ್ದರಿಂದ ಚಾಕು ಕೈಗೆ ತಾಗಿದೆ. ಬಳಿಕ ಮಹಿಳೆ ಪತಿಯನ್ನು ಕರೆದಿದ್ದಾರೆ. ಅಷ್ಟೊತ್ತಿಗಾಗಲೆ ರೈಲು ದಾವಣಗೆರೆ ನಿಲ್ದಾಣ ತಲುಪಿತ್ತು. ಸ್ಥಳಕ್ಕೆ ಮಹಿಳೆಯ ಪತಿ ಹಾಗೂ ಸಾರ್ವಜನಿಕರು ಬರುವಷ್ಟರಲ್ಲಿ ರೈಲಿನಿಂದ ಜಿಗಿದು, ಓಡಿ ಹೋಗುತ್ತಿದ್ದನು.

ಕೂಡಲೆ ಅಲ್ಲಿನ ಸಾರ್ವಜನಿಕರು ಆತನನ್ನು ಹಿಮ್ಮೆಟ್ಟಿ ಹಿಡಿದಿದ್ದಾರೆ. ಬಳಿಕ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದು ಆರೋಪಿ ವಿಶ್ವನನ್ನು ವಶಕ್ಕೆ ಪಡೆದು, ಆಸ್ಪತ್ರೆಗೆ ದಾಖಲಸಿದ್ದಾರೆ. ಮಹಿಳೆಯನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಳಿಕ ಪೊಲೀಸರಿಗೆ ಆರೋಪಿ ವಿಶ್ವ ಬಗ್ಗೆ ತಿಳಿದಿದೆ. ಅಂಜಲಿ ಕೊಲೆ ಪ್ರಕರಣ ಆರೋಪಿ ಎಂದು ತಿಳಿದ ಕೂಡಲೆ, ಮಾಹಿತಿಯನ್ನು ಹುಬ್ಬಳ್ಳಿ ಪೊಲೀಸರಿಗೆ ತಿಳಿಸಲಾಗಿದೆ. ಬಳಿಕ ದಾವಣಗೆರೆ ಪೊಲೀಸರು ಇಂದು (ಮೇ 17) ಆರೋಪಿ ವಿಶ್ವನನ್ನು ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿ ವಿಶ್ವನನ್ನು ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:57 pm, Fri, 17 May 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್