ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್

ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿಯ ಹತ್ಯೆ ಪ್ರಕರಣ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಬಗ್ಗೆ ಮೊದಲೇ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದರೂ, ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು ಮಾಡಲಾಗಿದೆ ಎಂದು ಟಿವಿ9ಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್
ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:May 15, 2024 | 10:03 PM

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ (Anjali) ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು (suspend) ಮಾಡಲಾಗಿದೆ. ಈ ಕುರಿತಾಗಿ ಟಿವಿ9ಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದು, ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪ ಕೇಳಿಬಂದಿತ್ತು. ಹೀಗಾಗಿ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್​ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಆರೋಪಿ ವಿಶ್ವ ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆಗೆ ಬಾರದಿದ್ದರೆ ನೇಹಾ ತರ ಕೊಲೆ ಮಾಡುತ್ತೇನೆ ಎಂದು ವಾರ್ನಿಂಗ್ ಮಾಡಿದ್ದ ಎನ್ನಲಾಗಿದೆ. ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ ಹಾಗೇನು ಆಗಲ್ಲ ಹೋಗಿ ಅಂತ ನಿರ್ಲಕ್ಷ್ಯ ತೋರಿಸಿದ್ದರು. ಆ ಹಿನ್ನೆಲೆ ಇದೀಗ ಅವರುನ್ನು ಅಮಾನತ್ತು ಮಾಡಲಾಗಿದೆ.

ಇದನ್ನೂ ಓದಿ: ಅಂಜಲಿ ಕೊಲೆ: ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್

ಪ್ರೀತಿ ಒಪ್ಪದ ಕಾರಣ ವಿಶ್ವ ಎನ್ನುವ ಪಾಗಲ್ ಪ್ರೇಮಿ ಅಂಜಲಿಯನ್ನು ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಮೂಲತಃ ಕಳ್ಳತನ ಚಾಳಿ ರೂಢಿಸಿಕೊಂಡಿದ್ದ ವಿಶ್ವ ಅಲಿಯಾಸ್ ಗೀರಿಶ್, ಅಂಜಲಿ ಕ್ಲಾಸ್ಮೆಂಟ್ ಆಗಿದ್ದ. ಆಗಿನಿಂದಲೂ ಅಂಜಲಿಯನ್ನು ಒನ್ ಸೈಡ್ ಲವ್ ಮಾಡುತ್ತಿದ್ದ. ತನ್ನನ್ನು ಲವ್ ಮಾಡುವಂತೆ ಅಂಜಲಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ.

ಈ‌ ವಿಷಯ ಅಂಜಲಿ ಕುಟುಂಬಸ್ಥರಿಗೆ ತಿಳಿದು ಅಂಜಲಿ ತಂದೆ ಮೋಹನ್ ಆರೋಪಿಗೆ ವಿಶ್ವನಿಗೆ ಬುದ್ದಿವಾದ ಹೇಳಿದ್ದರು. ಆದರೂ ಸಹ ವಿಶ್ವ ಮಾತ್ರ ತನ್ನ ಚಾಳಿ ಮುಂದುವರಿಸಿದ್ದ. ತನ್ನ ಪ್ರೀತಿ ಒಪ್ಪದಿದ್ದ್ರೆ ನೇಹಾ ತರ ಕೊಲೆ ಮಾಡತ್ತಿನಿ ಅಂತ ಬೆದರಿಕೆ ಹಾಕಿದ್ದ. ಇದ್ದಕ್ಕೂ ಅಂಜಲಿ ಬಗ್ಗದ ಹಿನ್ನೆಲೆ ಆಕ್ರೋಶಗೊಂಡ ವಿಶ್ವ, ಹೇಳಿದಂತೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಹತ್ಯೆ ಮಾಡಿ ಪರಾರಿಯಾಗಿರುವ ವಿಶ್ವನ ಬಂಧನಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಎರಡು ವಿಶೇಷ ತಂಡ ರಚನೆ ಮಾಡಿದೆ. ಮತ್ತೊಂದು ಕಡೆ ಹತ್ಯೆ ಬಗ್ಗೆ ಮೊದಲೇ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದರೂ, ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವ ಬೆಂಡಿಗೇರಿ ಪೊಲೀಸರ ಮೇಲೂ ತನಿಖೆ ನಡೆಯುತ್ತಿದೆ. ಏಪ್ರಿಲ್ 21 ರಂದು ಅಂಜಲಿ ಕುಟುಂಬ ಬೆಂಡಿಗೇರಿ ಪೊಲೀಸ್ ಠಾಣೆ ಬಂದು ಹೋಗಿರುವ ಸಿಸಿ ಕ್ಯಾಮರಾ ದೃಶ್ಯಗಳಿದ್ದು, ಅವರು ಯಾಕೆ ಬಂದಿದ್ದರು ಎನ್ನುವ ಸ್ಪಷ್ಟತೆಯಿಲ್ಲ.

ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

ಇನ್ನೂ ಅವರ ಬೇರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಬಂದಿದ್ದಿರುವ ಬಗ್ಗೆ ಠಾಣೆ ಸಿಬ್ಬಂದಿ ‌ಸಮಜಾಯಿಷಿ ನೀಡಿದ್ದು, ಇದರ ಬಗ್ಗೆ ಸಂಪೂರ್ಣ ತನಿಖೆ ಮಾಡಿ ಸಿಬ್ಬಂದಿ ನಿರ್ಲಕ್ಷ್ಯ ಕಂಡು ಬಂದ್ರೆ ಕ್ರಮ ಕೈಗೊಳ್ಳುವ ಚಿಂತನೆಯಲ್ಲಿ ಹಿರಿಯ ಅಧಿಕಾರಿಗಳು ಇದ್ದಾರೆ. ಇನ್ನೂ ಪ್ರಕರಣ ಪ್ರಾಥಮಿಕ ಹಂತ ಬಗ್ಗೆ ಕಮಿಷನರ್ ರೇಣುಕಾ ಸುಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:45 pm, Wed, 15 May 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!