AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್

ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿಯ ಹತ್ಯೆ ಪ್ರಕರಣ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಬಗ್ಗೆ ಮೊದಲೇ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದರೂ, ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು ಮಾಡಲಾಗಿದೆ ಎಂದು ಟಿವಿ9ಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್
ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್
ಶಿವಕುಮಾರ್ ಪತ್ತಾರ್
| Edited By: |

Updated on:May 15, 2024 | 10:03 PM

Share

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ (Anjali) ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು (suspend) ಮಾಡಲಾಗಿದೆ. ಈ ಕುರಿತಾಗಿ ಟಿವಿ9ಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದು, ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪ ಕೇಳಿಬಂದಿತ್ತು. ಹೀಗಾಗಿ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್​ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಆರೋಪಿ ವಿಶ್ವ ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆಗೆ ಬಾರದಿದ್ದರೆ ನೇಹಾ ತರ ಕೊಲೆ ಮಾಡುತ್ತೇನೆ ಎಂದು ವಾರ್ನಿಂಗ್ ಮಾಡಿದ್ದ ಎನ್ನಲಾಗಿದೆ. ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ ಹಾಗೇನು ಆಗಲ್ಲ ಹೋಗಿ ಅಂತ ನಿರ್ಲಕ್ಷ್ಯ ತೋರಿಸಿದ್ದರು. ಆ ಹಿನ್ನೆಲೆ ಇದೀಗ ಅವರುನ್ನು ಅಮಾನತ್ತು ಮಾಡಲಾಗಿದೆ.

ಇದನ್ನೂ ಓದಿ: ಅಂಜಲಿ ಕೊಲೆ: ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್

ಪ್ರೀತಿ ಒಪ್ಪದ ಕಾರಣ ವಿಶ್ವ ಎನ್ನುವ ಪಾಗಲ್ ಪ್ರೇಮಿ ಅಂಜಲಿಯನ್ನು ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಮೂಲತಃ ಕಳ್ಳತನ ಚಾಳಿ ರೂಢಿಸಿಕೊಂಡಿದ್ದ ವಿಶ್ವ ಅಲಿಯಾಸ್ ಗೀರಿಶ್, ಅಂಜಲಿ ಕ್ಲಾಸ್ಮೆಂಟ್ ಆಗಿದ್ದ. ಆಗಿನಿಂದಲೂ ಅಂಜಲಿಯನ್ನು ಒನ್ ಸೈಡ್ ಲವ್ ಮಾಡುತ್ತಿದ್ದ. ತನ್ನನ್ನು ಲವ್ ಮಾಡುವಂತೆ ಅಂಜಲಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ.

ಈ‌ ವಿಷಯ ಅಂಜಲಿ ಕುಟುಂಬಸ್ಥರಿಗೆ ತಿಳಿದು ಅಂಜಲಿ ತಂದೆ ಮೋಹನ್ ಆರೋಪಿಗೆ ವಿಶ್ವನಿಗೆ ಬುದ್ದಿವಾದ ಹೇಳಿದ್ದರು. ಆದರೂ ಸಹ ವಿಶ್ವ ಮಾತ್ರ ತನ್ನ ಚಾಳಿ ಮುಂದುವರಿಸಿದ್ದ. ತನ್ನ ಪ್ರೀತಿ ಒಪ್ಪದಿದ್ದ್ರೆ ನೇಹಾ ತರ ಕೊಲೆ ಮಾಡತ್ತಿನಿ ಅಂತ ಬೆದರಿಕೆ ಹಾಕಿದ್ದ. ಇದ್ದಕ್ಕೂ ಅಂಜಲಿ ಬಗ್ಗದ ಹಿನ್ನೆಲೆ ಆಕ್ರೋಶಗೊಂಡ ವಿಶ್ವ, ಹೇಳಿದಂತೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಹತ್ಯೆ ಮಾಡಿ ಪರಾರಿಯಾಗಿರುವ ವಿಶ್ವನ ಬಂಧನಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಎರಡು ವಿಶೇಷ ತಂಡ ರಚನೆ ಮಾಡಿದೆ. ಮತ್ತೊಂದು ಕಡೆ ಹತ್ಯೆ ಬಗ್ಗೆ ಮೊದಲೇ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದರೂ, ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವ ಬೆಂಡಿಗೇರಿ ಪೊಲೀಸರ ಮೇಲೂ ತನಿಖೆ ನಡೆಯುತ್ತಿದೆ. ಏಪ್ರಿಲ್ 21 ರಂದು ಅಂಜಲಿ ಕುಟುಂಬ ಬೆಂಡಿಗೇರಿ ಪೊಲೀಸ್ ಠಾಣೆ ಬಂದು ಹೋಗಿರುವ ಸಿಸಿ ಕ್ಯಾಮರಾ ದೃಶ್ಯಗಳಿದ್ದು, ಅವರು ಯಾಕೆ ಬಂದಿದ್ದರು ಎನ್ನುವ ಸ್ಪಷ್ಟತೆಯಿಲ್ಲ.

ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

ಇನ್ನೂ ಅವರ ಬೇರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಬಂದಿದ್ದಿರುವ ಬಗ್ಗೆ ಠಾಣೆ ಸಿಬ್ಬಂದಿ ‌ಸಮಜಾಯಿಷಿ ನೀಡಿದ್ದು, ಇದರ ಬಗ್ಗೆ ಸಂಪೂರ್ಣ ತನಿಖೆ ಮಾಡಿ ಸಿಬ್ಬಂದಿ ನಿರ್ಲಕ್ಷ್ಯ ಕಂಡು ಬಂದ್ರೆ ಕ್ರಮ ಕೈಗೊಳ್ಳುವ ಚಿಂತನೆಯಲ್ಲಿ ಹಿರಿಯ ಅಧಿಕಾರಿಗಳು ಇದ್ದಾರೆ. ಇನ್ನೂ ಪ್ರಕರಣ ಪ್ರಾಥಮಿಕ ಹಂತ ಬಗ್ಗೆ ಕಮಿಷನರ್ ರೇಣುಕಾ ಸುಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:45 pm, Wed, 15 May 24

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!