AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು

ಹುಬ್ಬಳ್ಳಿಯಲ್ಲಿ ಬೈಕ್ ಕಳ್ಳತನ ಆರೋಪಿಯಾಗಿದ್ದ ಮಹಾಂತೇಶ್ ಕಲಾಲ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಸಾವಿಗೆ ಹುಬ್ಬಳ್ಳಿ ಪೊಲೀಸರೇ ಕಾರಣ ಎಂದು ಮಹಾಂತೇಶ್​ ಡೆತ್​ ನೋಟ್​ ಬರೆದು ಸಾವನ್ನಪ್ಪಿದ್ದಾರೆ. ಕಿರುಕುಳ ಮತ್ತು ಹಣಕ್ಕಾಗಿ ಹಲ್ಲೆ ಮಾಡಿರುವುದಾಗಿ ಡೆತ್​ ನೋಟ್​ನಲ್ಲಿ ಉಲ್ಲೇಖಿಸಲಾಗಿದೆ.

ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು
ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು
ಶಿವಕುಮಾರ್ ಪತ್ತಾರ್
| Edited By: |

Updated on:Dec 04, 2024 | 3:19 PM

Share

ಹುಬ್ಬಳ್ಳಿ, ಡಿಸೆಂಬರ್​ 04: ಬೈಕ್ ಕಳ್ಳತನ ಆರೋಪಿ ಅನುಮಾನಸ್ಪದವಾಗಿ ಸಾವನ್ನಪಿರುವಂತಹ (death) ಘಟನೆ ಆನಂದ ನಗರದಲ್ಲಿ ನಡೆದಿದೆ. ಮಹಾಂತೇಶ್ ಕಲಾಲ್​ ಮೃತ ವ್ಯಕ್ತಿ. ಸದ್ಯ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್​ ಒಂದು ಸಿಕ್ಕಿದೆ. ಸಾವಿಗೆ ಹುಬ್ಬಳ್ಳಿ ಪೊಲೀಸರೇ ಕಾರಣ ಎಂದು ಮಹಾಂತೇಶ್​ ಡೆತ್​ ನೋಟ್​ ಬರೆದು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಉಪನಗರ ಠಾಣೆಯ ಮಲ್ಲಿಕಾರ್ಜುನ, ರೇಣು, ದಾನೇಶ್, ಅರುಣ್, ಮಂಜುನಾಥ, ಕುದರಿ ಮತ್ತು ಗೋವಿಂದ್​ ಹೆಸರು ಉಲ್ಲೇಖಿಸಲಾಗಿದೆ.

ಪೊಲೀಸರ ಹೆಸರು ಬರೆದಿಟ್ಟು ಆತ್ಮಹತ್ಯೆ

ನವೆಂಬರ್ 19 ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಕಳೆದ ತಿಂಗಳು 22 ರಂದು ಮತ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆ ಫಲಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೀಗ ಮಹಾಂತೇಶ್ ಸಾವಿಗೆ ಅಸಲಿ ಕಾರಣ ಬಹಿರಂಗವಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗದಗಿನಲ್ಲಿ ಆನ್​ಲೈನ್ ಗೇಮಿಂಗ್​​ಗೆ ವ್ಯಕ್ತಿ ಬಲಿ: ಬ್ಯಾನ್​ ಮಾಡುವಂತೆ ಡೆತ್ ನೋಟ್​ನಲ್ಲಿ ಮನವಿ

ಕಳೆದ ಕೆಲ ದಿನಗಳ ಹಿಂದೆ ಉಪನಗರ ಪೊಲೀಸರು ಬೈಕ್ ಕಳ್ಳತನ ಆರೋಪದಡಿ ಮಹಾಂತೇಶ್ ಬಂಧಿಸಿದ್ದರು. ಜಾಮೀನಿನ ಮೇಲೆ ಹೊರ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಕಾರ್ಯಕ್ಕೆ ಹಿನ್ನೆಲೆ ಮನೆ ಸ್ವಚ್ಚಗೊಳಿಸುವ ವೇಳೆ ಡೆತ್​ ನೋಟ್ ಸಿಕ್ಕಿದೆ. ಇದೀಗ ಮಹಾಂತೇಶ್ ಸಾವಿಗೆ ಪೊಲೀಸರೇ ಕಾರಣವೆನ್ನಲಾಗುತ್ತಿದ್ದು, ಪೊಲೀಸರು ಕಿರುಕುಳ ನೀಡಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಪೊಲೀಸರು ಹಣಕ್ಕೆ ಡಿಮ್ಯಾಂಡ್ ಮಾಡಿ ನನಗೆ ಟಾರ್ಚರ್ ಕೊಟ್ಟಿದ್ದಾರೆ. ಬೃಂದಾವನ ಲಾಡ್ಜ್​​ಗೆ ಕರೆತಂದು ಪೊಲೀಸರು ಥಳಿಸಿದ್ದಾರೆ. ಇನ್ನು ಡೆತ್​ ನೋಟ್​ ಯಾರಿಗೂ ಕೊಡಬೇಡಿ ಎಂದು ಮಹಾಂತೇಶ್ ಕುಟುಂಬಕ್ಕೆ ಪೊಲೀಸರು ಧಮ್ಕಿ ಹಾಕಿದ್ದಾರೆ. ಹಣಕ್ಕಾಗಿ ಹುಬ್ಬಳ್ಳಿ ಉಪನಗರ ಪೊಲೀಸರಿಂದ ಮಹಾಂತೇಶ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಪೊಲೀಸರ ಅಮಾನತ್ತಿಗೆ ಆಗ್ರಹ

ನನ್ನ ಗಂಡನ ಸಾವಿಗೆ ಪೊಲೀಸರೇ ಕಾರಣ ಎಂದು ಮಹಾಂತೇಶ್ ಕಲಾಲ್ ಪತ್ನಿ ಪೂಜಾ ಕಣ್ಣೀರು ಹಾಕಿದ್ದಾರೆ. ನನಗೆ ನ್ಯಾಯ ಸಿಗಬೇಕು. ಮಹಾಂತೇಶ್​ ಮೂರು ಮಕ್ಕಳ ತಂದೆಯಾಗಿದ್ದರು. ಮಕ್ಕಳನ್ನು ಸಾಕಲು ಕಷ್ಟವಾಗಿದೆ. ಅಮಾಯಕ ಗಂಡನ ಪ್ರಾಣ ತೆಗೆದುಕೊಂಡಿದ್ದಾರೆ. ಆ ಪೊಲೀಸರನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:15 pm, Wed, 4 December 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್