Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು

ಹುಬ್ಬಳ್ಳಿಯಲ್ಲಿ ಬೈಕ್ ಕಳ್ಳತನ ಆರೋಪಿಯಾಗಿದ್ದ ಮಹಾಂತೇಶ್ ಕಲಾಲ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಸಾವಿಗೆ ಹುಬ್ಬಳ್ಳಿ ಪೊಲೀಸರೇ ಕಾರಣ ಎಂದು ಮಹಾಂತೇಶ್​ ಡೆತ್​ ನೋಟ್​ ಬರೆದು ಸಾವನ್ನಪ್ಪಿದ್ದಾರೆ. ಕಿರುಕುಳ ಮತ್ತು ಹಣಕ್ಕಾಗಿ ಹಲ್ಲೆ ಮಾಡಿರುವುದಾಗಿ ಡೆತ್​ ನೋಟ್​ನಲ್ಲಿ ಉಲ್ಲೇಖಿಸಲಾಗಿದೆ.

ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು
ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 04, 2024 | 3:19 PM

ಹುಬ್ಬಳ್ಳಿ, ಡಿಸೆಂಬರ್​ 04: ಬೈಕ್ ಕಳ್ಳತನ ಆರೋಪಿ ಅನುಮಾನಸ್ಪದವಾಗಿ ಸಾವನ್ನಪಿರುವಂತಹ (death) ಘಟನೆ ಆನಂದ ನಗರದಲ್ಲಿ ನಡೆದಿದೆ. ಮಹಾಂತೇಶ್ ಕಲಾಲ್​ ಮೃತ ವ್ಯಕ್ತಿ. ಸದ್ಯ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್​ ಒಂದು ಸಿಕ್ಕಿದೆ. ಸಾವಿಗೆ ಹುಬ್ಬಳ್ಳಿ ಪೊಲೀಸರೇ ಕಾರಣ ಎಂದು ಮಹಾಂತೇಶ್​ ಡೆತ್​ ನೋಟ್​ ಬರೆದು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಉಪನಗರ ಠಾಣೆಯ ಮಲ್ಲಿಕಾರ್ಜುನ, ರೇಣು, ದಾನೇಶ್, ಅರುಣ್, ಮಂಜುನಾಥ, ಕುದರಿ ಮತ್ತು ಗೋವಿಂದ್​ ಹೆಸರು ಉಲ್ಲೇಖಿಸಲಾಗಿದೆ.

ಪೊಲೀಸರ ಹೆಸರು ಬರೆದಿಟ್ಟು ಆತ್ಮಹತ್ಯೆ

ನವೆಂಬರ್ 19 ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಕಳೆದ ತಿಂಗಳು 22 ರಂದು ಮತ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆ ಫಲಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೀಗ ಮಹಾಂತೇಶ್ ಸಾವಿಗೆ ಅಸಲಿ ಕಾರಣ ಬಹಿರಂಗವಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗದಗಿನಲ್ಲಿ ಆನ್​ಲೈನ್ ಗೇಮಿಂಗ್​​ಗೆ ವ್ಯಕ್ತಿ ಬಲಿ: ಬ್ಯಾನ್​ ಮಾಡುವಂತೆ ಡೆತ್ ನೋಟ್​ನಲ್ಲಿ ಮನವಿ

ಕಳೆದ ಕೆಲ ದಿನಗಳ ಹಿಂದೆ ಉಪನಗರ ಪೊಲೀಸರು ಬೈಕ್ ಕಳ್ಳತನ ಆರೋಪದಡಿ ಮಹಾಂತೇಶ್ ಬಂಧಿಸಿದ್ದರು. ಜಾಮೀನಿನ ಮೇಲೆ ಹೊರ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಕಾರ್ಯಕ್ಕೆ ಹಿನ್ನೆಲೆ ಮನೆ ಸ್ವಚ್ಚಗೊಳಿಸುವ ವೇಳೆ ಡೆತ್​ ನೋಟ್ ಸಿಕ್ಕಿದೆ. ಇದೀಗ ಮಹಾಂತೇಶ್ ಸಾವಿಗೆ ಪೊಲೀಸರೇ ಕಾರಣವೆನ್ನಲಾಗುತ್ತಿದ್ದು, ಪೊಲೀಸರು ಕಿರುಕುಳ ನೀಡಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಪೊಲೀಸರು ಹಣಕ್ಕೆ ಡಿಮ್ಯಾಂಡ್ ಮಾಡಿ ನನಗೆ ಟಾರ್ಚರ್ ಕೊಟ್ಟಿದ್ದಾರೆ. ಬೃಂದಾವನ ಲಾಡ್ಜ್​​ಗೆ ಕರೆತಂದು ಪೊಲೀಸರು ಥಳಿಸಿದ್ದಾರೆ. ಇನ್ನು ಡೆತ್​ ನೋಟ್​ ಯಾರಿಗೂ ಕೊಡಬೇಡಿ ಎಂದು ಮಹಾಂತೇಶ್ ಕುಟುಂಬಕ್ಕೆ ಪೊಲೀಸರು ಧಮ್ಕಿ ಹಾಕಿದ್ದಾರೆ. ಹಣಕ್ಕಾಗಿ ಹುಬ್ಬಳ್ಳಿ ಉಪನಗರ ಪೊಲೀಸರಿಂದ ಮಹಾಂತೇಶ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಪೊಲೀಸರ ಅಮಾನತ್ತಿಗೆ ಆಗ್ರಹ

ನನ್ನ ಗಂಡನ ಸಾವಿಗೆ ಪೊಲೀಸರೇ ಕಾರಣ ಎಂದು ಮಹಾಂತೇಶ್ ಕಲಾಲ್ ಪತ್ನಿ ಪೂಜಾ ಕಣ್ಣೀರು ಹಾಕಿದ್ದಾರೆ. ನನಗೆ ನ್ಯಾಯ ಸಿಗಬೇಕು. ಮಹಾಂತೇಶ್​ ಮೂರು ಮಕ್ಕಳ ತಂದೆಯಾಗಿದ್ದರು. ಮಕ್ಕಳನ್ನು ಸಾಕಲು ಕಷ್ಟವಾಗಿದೆ. ಅಮಾಯಕ ಗಂಡನ ಪ್ರಾಣ ತೆಗೆದುಕೊಂಡಿದ್ದಾರೆ. ಆ ಪೊಲೀಸರನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:15 pm, Wed, 4 December 24

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!