ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ; ಸಿದ್ದರಾಮಯ್ಯ

ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್​ ಜೊತೆ ಸಭೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ; ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on:Apr 19, 2024 | 1:48 PM

ಬೆಂಗಳೂರು/ಹುಬ್ಬಳ್ಳಿ, ಏಪ್ರಿಲ್​ 19: ಹುಬ್ಬಳ್ಳಿಯ (Hubballi) ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ (Student Neha) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್​ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ ಎಂದರು.

ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ: ರೇಣುಕಾ ಸುಕುಮಾರ್

ಗುರುವಾರ ನಡೆದ ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ನೇಹಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಕಾನೂನು ಪ್ರಕಾರವೇ ಏನು ಶಿಕ್ಷೆಯಾಗಬೇಕು ಅದು ಆಗುತ್ತದೆ. ಫಯಾಜ್​ಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಸುಕುಮಾರ್ ಹೇಳಿದರು.

ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲೇ ಸರಣಿ ಕೊಲೆ, ರಾಜ್ಯದಾದ್ಯಂತ ಒಂದೇ ದಿನ 12 ಮಂದಿಯ ಹತ್ಯೆ

ನೇಹಾ ದೂರವಾಗಿದ್ದಕ್ಕೆ ಕೊಲೆ ಮಾಡಲಾಗಿದೆ: ಪರಮೇಶ್ವರ

ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ. ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೂಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:13 pm, Fri, 19 April 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ