Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಕಿಮ್ಸ್ ಕೆಲಸಗಳ್ಳ ವೈದ್ಯರ ಪ್ರಕರಣ: ಹುಬ್ಬಳ್ಳಿಯಿಂದ ಬೆಂಗಳೂರಿಗೆ ವರ್ಗಾವಣೆಗೊಂಡ ತನಿಖೆ

ಕಳೆದ ಶನಿವಾರ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ 11 ಕೆಲಸಗಳ್ಳ ವೈದ್ಯರ ವಿಚಾರಣೆ ನಡೆದಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ್, ಡಾ.ಮಹೇಶ್ ನೇತೃತ್ವದಲ್ಲಿ ವೈದ್ಯರ ವಿಚಾರಣೆ ನಡೆದಿತ್ತು. ಇಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ಪ್ರಾಂಶುಪಾಲ ಡಾ.ಈಶ್ವರ್ ಹೊಸಮನಿ, ಸಿಇಒ ರಾಜಶ್ರೀ ಜೈನಾಪುರ್‌ರಿಂದ ಮಾಹಿತಿ ಸಂಗ್ರಹಿಸಲಾಗುತ್ತೆ.

ಹುಬ್ಬಳ್ಳಿ ಕಿಮ್ಸ್ ಕೆಲಸಗಳ್ಳ ವೈದ್ಯರ ಪ್ರಕರಣ: ಹುಬ್ಬಳ್ಳಿಯಿಂದ ಬೆಂಗಳೂರಿಗೆ ವರ್ಗಾವಣೆಗೊಂಡ ತನಿಖೆ
ಕಿಮ್ಸ್ ಆಸ್ಪತ್ರೆ
Follow us
TV9 Web
| Updated By: ಆಯೇಷಾ ಬಾನು

Updated on: Jun 14, 2021 | 9:05 AM

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆ ವೈದ್ಯರ ಕೆಲಸಗಳ್ಳತನ ಬಯಲು ಕೇಸ್ಗೆ ಸಂಬಂಧಿಸಿ ತನಿಖೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ವರ್ಗಾವಣೆಗೊಂಡಿದೆ. ಇಂದು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ ನಿರ್ದೇಶಕ, ಪ್ರಾಂಶುಪಾಲ, ಮುಖ್ಯ ಆಡಳಿತಾಧಿಕಾರಿಯಿಂದ ಇಲಾಖಾ ನಿರ್ದೇಶಕ ಗಿರೀಶ್ ಮಾಹಿತಿ ಪಡೆಯಲಿದ್ದಾರೆ.

ಕಳೆದ ಶನಿವಾರ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ 11 ಕೆಲಸಗಳ್ಳ ವೈದ್ಯರ ವಿಚಾರಣೆ ನಡೆದಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ್, ಡಾ.ಮಹೇಶ್ ನೇತೃತ್ವದಲ್ಲಿ ವೈದ್ಯರ ವಿಚಾರಣೆ ನಡೆದಿತ್ತು. ಇಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ಪ್ರಾಂಶುಪಾಲ ಡಾ.ಈಶ್ವರ್ ಹೊಸಮನಿ, ಸಿಇಒ ರಾಜಶ್ರೀ ಜೈನಾಪುರ್‌ರಿಂದ ಮಾಹಿತಿ ಸಂಗ್ರಹಿಸಲಾಗುತ್ತೆ.

ತಪ್ಪಿತಸ್ಥರ ರಕ್ಷಣೆಗೆ ಆಸ್ಪತ್ರೆ ನಿರ್ದೇಶಕ ಉಪಾಯ ಶಂಕೆ ಕಿಮ್ಸ್‌ ಕೆಲಸಗಳ್ಳರ ಪ್ರಕರಣ ಮುಚ್ಚಿಹಾಕಲು ಸಂಸ್ಥೆಯ ನಿರ್ದೇಶಕರಿಂದಲೇ ಪ್ರಯತ್ನವಾಗಿದೆ ಎಂಬ ವಿಚಾರ ತಿಳಿದುಬಂದಿದೆ. 11 ವೈದ್ಯರ ಪೈಕಿ ಕೆಲವರ ವಿರುದ್ಧ ಮಾತ್ರ ಕ್ರಮ ಕೈಗೊಂಡು, ಉಳಿದ ತಪ್ಪಿತಸ್ಥರ ರಕ್ಷಣೆಗೆ ನಿರ್ದೇಶಕ ಪ್ಲ್ಯಾನ್ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕಿಮ್ಸ್ ನಿರ್ದೇಶಕರು ನೀಡಿದ ವರದಿಯಲ್ಲಿ ತಪ್ಪಿತಸ್ಥರ ರಕ್ಷಣೆ ಮಾಡಲಾಗಿದೆ. ಕೇವಲ 3-4 ವೈದ್ಯರ ವಿರುದ್ಧ ಮಾತ್ರ ವರದಿ ಸಲ್ಲಿಕೆ. ಉಳಿದವರ ಬಗ್ಗೆ ಸಕಾರಾತ್ಮಕ ವರದಿ ನೀಡಿರುವ ನಿರ್ದೇಶಕ ಎಂದು ಅನುಮಾನ ಮೂಡಿದೆ.

3 ವಿಭಾಗಗಳ ಹೆಚ್ಒಡಿಗಳ ರಕ್ಷಣೆಗಾಗಿ ನಿರ್ದೇಶಕರು ಯತ್ನಿಸಿದ್ದಾರೆ. ಡಾ. ನರೇಂದ್ರ ಹಿರೇಗೌಡರ್, ಡಾ. ದತ್ತಾತ್ರೇಯ ಬಂಟ್ ಸೇರಿದಂತೆ ಕೆಲವು ವೈದ್ಯರ ಪರ ಕಿಮ್ಸ್ ನಿರ್ದೇಶಕರು ಇದ್ದಾರೆ. ವರದಿ ಕೊಡುವಲ್ಲೂ ತಾರತಮ್ಯ ಮಾಡಿದ್ದಾರೆ ಎಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ.ರಾಮಲಿಂಗಪ್ಪ ಮೇಲೆ ಅನುಮಾನ ಮೂಡಿದೆ. ಈ ಬಗ್ಗೆ ಸಾಕ್ಷ್ಯ ಸಮೇತ ಟಿವಿ9 ವರದಿ ಮಾಡಿತ್ತು. ಕೆಲಸಗಳ್ಳರ ಬಗ್ಗೆ ಟಿವಿ9 1 ವಾರದ ಕಂಪ್ಲೀಟ್ ಮಾಹಿತಿ ನೀಡಿತ್ತು. ವಾರ ಪೂರ್ತಿ ಕೆಲಸಗಳ್ಳರನ್ನ ಫಾಲೋ ಮಾಡಿ ಮಾಹಿತಿ ಸಂಗ್ರಹ ಮಾಡಲಾಗಿತ್ತು. ಎಲ್ಲ ಸಾಕ್ಷ್ಯಗಳನ್ನು ಟಿವಿ9 ರಹಸ್ಯ ಕಾರ್ಯಾಚರಣೆ ಬಹಿರಂಗಪಡಿಸಿತ್ತು.

ಕೆಲಸಗಳ್ಳ ವೈದ್ಯರ ವಿರುದ್ಧ ನಾನು ವರದಿಯನ್ನು ನೀಡಿದ್ದೇನೆ. ವರದಿಯ ಬಗ್ಗೆ ಬಹಿರಂಗ ಪಡಿಸುವುದಕ್ಕೆ ಆಗುವುದಿಲ್ಲ ಎಂದು ಟಿವಿ9ಗೆ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಹೇಳಿಕೆ ನೀಡಿದ್ದಾರೆ. ಕೊರೊನಾ ಸಮಯದಲ್ಲಿ ವೈದ್ಯರು ಕೆಲಸ ಮಾಡಿದ್ದಾರೆ. ಅವರ ಕೆಲಸವನ್ನು ನಾವು ಪರಿಗಣಿಸಬೇಕಾದ ಅಗತ್ಯವಿದೆ. ಎಲ್ಲ ಮಾಹಿತಿ ಆಧರಿಸಿ ನಾನು ವರದಿಯನ್ನು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆ ಹಾಜರಾತಿ ಬಗ್ಗೆ ನಾನು ನಿಗಾ ವಹಿಸಿಲ್ಲ. ವೈದ್ಯರ ಹಾಜರಾತಿಗೆ ನಾವು ಪ್ರಾಮುಖ್ಯತೆ ಕೊಡಲು ಆಗಲ್ಲ. ವೈದ್ಯರ ಕೆಲಸದ ಬಗ್ಗೆಯೂ ನಾವು ಪರಿಗಣಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ವೈದ್ಯರ ಕಳ್ಳಾಟ ಪ್ರಕರಣ; ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ