AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi: ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದ್ದು, ಆರೋಪಿ ಅಫ್ತಾಬ್‌ನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಬಳಿಕ ಆರೋಪಿಯನ್ನು ಜಡ್ಜ್‌ ಮುಂದೆ ಹಾಜರುಪಡಿಸಲಾಗಿದೆ ಎಂದು ಟಿವಿ9ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್‌ ಮಾಹಿತಿ ನೀಡಿದ್ದಾರೆ.

Hubballi: ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ
ಹಲ್ಲೆ ಆರೋಪ ಕೇಸ್​
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 22, 2024 | 8:22 PM

Share

ಹುಬ್ಬಳ್ಳಿ, ಏಪ್ರಿಲ್​ 22: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ (neha murder case) ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸದ್ಯ ನೇಹಾ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಗರದಲ್ಲಿ ಹಿಂದೂ ಯುವತಿ (girl) ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದೆ. ಅಫ್ತಾಬ್ ಎಂಬಾತನಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಸದ್ಯ ಕೇಶ್ವಾಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಲ್ಲೆ ಮಾಡಿದ ಆರೋಪಿ ಅಫ್ತಾಬ್ ನನ್ನ ವಿಚಾರಣೆ ಮಾಡಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ ಎಂದು ಟಿವಿ9ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ.

ಸಂತ್ರಸ್ತ ಯುವತಿ ಅಫ್ತಾಬ್ ಜೊತೆ ಕೆಲ ದಿನಗಳಿಂದ ಸ್ನೇಹ ಹೊಂದಿದ್ದಾಳೆ. ಸ್ನೇಹದಿಂದ ಇದ್ದಾಗ ಯುವತಿಗೆ  ಅಫ್ತಾಬ್ ಕೆಲವು ಗಿಫ್ಟ್​ಗಳನ್ನ ಕೊಟ್ಟಿದ್ದಾನೆ. ಗಿಫ್ಟ್ ವಾಪಸ್ ಕೊಡುವ ಸಮಯದಲ್ಲಿ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ. ಸದ್ಯ ಹಲ್ಲೆ ಆರೋಪ ಪ್ರಕರಣ ಕೇಶ್ವಾಪುರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಗಿಫ್ಟ್ ಸುಟ್ಟು ಹಾಕಿ ಬಳಿಕ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ: ಸಂತ್ರಸ್ತ ಯುವತಿ

ಹಲ್ಲೆಗೊಳಗಾದ ಸಂತ್ರಸ್ತ ಯುವತಿ ಪ್ರತಿಕ್ರಿಯಿಸಿದ್ದು, ಹಣ್ಣಿನ ಅಂಗಡಿ ವ್ಯಾಪಾರಿ ಅಫ್ತಾಬ್​ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡಿರುವ ಅಫ್ತಾಬ್ ನನಗೆ ಎರಡು ವರ್ಷದಿಂದ ಪರಿಚಯ. ಅಫ್ತಾಬ್ ಮತ್ತು ನನ್ನ ನಡುವೆ ಸ್ನೇಹವಿತ್ತು, ಪ್ರೀತಿಸುವಂತೆ ಪೀಡಿಸುತ್ತಿದ್ದ. ನನ್ನ ಮುಸ್ಲಿಂ ಗೆಳತಿ ಅಫ್ತಾಬ್​ನನ್ನು ಪರಿಚಯ ಮಾಡಿಕೊಟ್ಟಿದ್ದಳು ಎಂದಿದ್ದಾಳೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದ್ದನ್ನು ಸ್ವಾಗತಿಸಿದ ನಿರಂಜನ ಹಿರೇಮಠ

ನನ್ನ ಬರ್ತ್​​ಡೇ ಮತ್ತು ರಂಜಾನ್​ಗೆ ಬಲವಂತವಾಗಿ ಗಿಫ್ಟ್ ಕೊಟ್ಟಿದ್ದ. ನೇಹಾ ಪ್ರಕರಣದ ಬಳಿಕ ಸ್ನೇಹ ಕಳೆದುಕೊಳ್ಳಲು ನಿರ್ಧಾರ ಮಾಡಿದ್ದೆ. ಇವತ್ತು ನನಗೆ ಕರೆ ಮಾಡಿ ಹಣ್ಣಿನ‌ ಅಂಗಡಿ ಬಳಿ ಬರಲು ತಿಳಿಸಿದ್ದ. ಅಫ್ತಾಬ್ ಅಂಗಡಿ ಹತ್ತಿರ ಹೋಗಿ ಆತನ ಗಿಫ್ಟ್ ವಾಪಸ್​ ನೀಡಿದೆ. ಆ ಗಿಫ್ಟ್ ಸುಟ್ಟು ಹಾಕಿ ಬಳಿಕ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಸ್ಥಳೀಯರು ಅಫ್ತಾಬ್​ನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿರುವ ಅಫ್ತಾಬ್​ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:10 pm, Mon, 22 April 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ