AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ ಹತ್ಯೆ: ಅಕ್ಕನ ಕೊಲೆ ಬಗ್ಗೆ ಸಿಐಡಿ ಮುಂದೆ ಸ್ಫೋಟಕ ವಿಚಾರ ಬಿಚ್ಚಿಟ್ಟ ಸಹೋದರಿ ಯಶೋಧಾ

ಕಳೆದ ಎರಡು ದಿನಗಳ ಹಿಂದೆ ಸರ್ಕಾರ ಅಂಜಲಿ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ ಮಾಡಿದ ಬೆನ್ನೆಲ್ಲೇ ಕೇಸ್ ತನಿಖೆ ಚುರುಕುಗೊಂಡಿದೆ. ನಿನ್ನೆ ಸಂಜೆ ಹುಬ್ಬಳ್ಳಿಗೆ ಆಗಮಿಸಿದ ಸಿಐಡಿ ತಂಡ ಇಂದು ವಿಚಾರಣೆ ಆರಂಭಿಸಿದೆ. ಅಂಜಲಿ ಅಂಬಿಗೇರ ಮನೆಗೆ ಮೂವರು ಸಿಐಡಿ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅಂಜಲಿ ಸಹೋದರಿ, ಸಿಐಡಿ ಮುಂದೆ ಸ್ಫೋಟಕ ವಿಚಾರ ಬಿಚ್ಚಿಟ್ಟಿದ್ದಾರೆ.

ಅಂಜಲಿ ಹತ್ಯೆ: ಅಕ್ಕನ ಕೊಲೆ ಬಗ್ಗೆ ಸಿಐಡಿ ಮುಂದೆ ಸ್ಫೋಟಕ ವಿಚಾರ ಬಿಚ್ಚಿಟ್ಟ ಸಹೋದರಿ ಯಶೋಧಾ
ಅಂಜಲಿ ಹತ್ಯೆ: ಅಕ್ಕನ ಕೊಲೆ ಬಗ್ಗೆ ಸಿಐಡಿ ಮುಂದೆ ಸ್ಫೋಟ ವಿಚಾರ ಬಿಚ್ಚಿಟ್ಟ ಸಹೋದರಿ ಯಶೋಧಾ
ಶಿವಕುಮಾರ್ ಪತ್ತಾರ್
| Edited By: |

Updated on: May 23, 2024 | 4:40 PM

Share

ಹುಬ್ಬಳ್ಳಿ, ಮೇ 23: ನಗರದಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ (Anjali Ambigera Murder Case) ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಆರೋಪಿ ಗಿರೀಶ್​ ವಿಚಾರಣೆಯನ್ನು ಸಿಐಡಿ (CID) ಟೀಂ ಮುಂದುವರಿಸಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಕರೆತಂದು ವಿಚಾರಣೆ ಮಾಡಿದ್ದಾರೆ. ಕೊಲೆಯಾದ ಯುವತಿ ಅಂಜಲಿ ಮನೆ ಬಳಿ ಕೆಲವರ ವಿಚಾರಣೆ ಮಾಡಿದ್ದಾರೆ. ಜೊತೆಗೆ ಅಂಜಲಿ ಅಂಬಿಗೇರ ಮನೆಗೆ ಮೂವರು ಸಿಐಡಿ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ.

ಅಧಿಕಾರಿಗಳ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಂಜಲಿ ಅಂಬಿಗೇರ ಸಹೋದರಿ ಯಶೋಧಾ, ಮೂವರು ಸಿಐಡಿ ಅಧಿಕಾರಿಗಳು ಮನೆಗೆ ಬಂದು ವಿಚಾರಣೆ ಮಾಡಿದರು. ಕೊಲೆ ಹೇಗಾಯ್ತು, ಚಾಕು ಎಲ್ಲಿದೆ ಎಂದು ಮಾಹಿತಿ ಕೇಳಿದರು. ಸಿಐಡಿ ಅಧಿಕಾರಿಗಳಿಗೆ ಎಲ್ಲಾ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಜಲಿ ಹತ್ಯೆ ಪ್ರಕರಣ; ಆರೋಪಿ ವಿಶ್ವ 8 ದಿನ ಸಿಐಡಿ ವಶಕ್ಕೆ ನೀಡಿದ ಕೋರ್ಟ್​

ವಿಶ್ವನನ್ನು ಎನ್​ಕೌಂಟರ್ ಮಾಡಬೇಕು ಇಲ್ಲ ಗಲ್ಲುಶಿಕ್ಷೆ ಆಗಲಿ. ಆರೋಪಿ ಗಿರೀಶ್​ನ ಹಿಂದೆ ಯಾರೋ ಇದ್ದಾರೆ. ಅಂಜಲಿ ಮದುವೆ ಆಗುತ್ತೇನೆ ಅಂದಿದ್ದ, ನಾವು ಬೇಡ ಎಂದಿದ್ದೆವು. ಆ ಕಾರಣಕ್ಕೆ ಕೊಲೆ ಮಾಡಿದ್ದಾನೆ ಎಂದು ಸಿಐಡಿಗೆ ಹೇಳಿದ್ದೇವೆ. ಸುಳ್ಳು ಹೇಳಬೇಡಿ ಎಂದರು, ನಾವು ಸುಳ್ಳು ಹೇಳಲ್ಲ ಎಂದು ಹೇಳಿದ್ದಾರೆ.

ಹೊಸ ಬಾಂಬ್​ ಹಾಕಿದ ಅಂಜಲಿ ಸಹೋದರಿ ಯಶೋಧಾ

ಈ ಹಿಂದೆ ನಮ್ಮ ಅಕ್ಕ 17 ವರ್ಷ ಇದ್ದಾಗ ವಿಜಯ್​ ಎನ್ನುವ ಯುವಕ ಲವ್ ಮಾಡುತ್ತಿದ್ದ. ಅದು‌ ಕಂಪ್ಲೇಟ್ ಅಗಿತ್ತು. ನಾವು ಹೊಡೆದು ಬುದ್ದಿ ಹೇಳಿದ್ದೇವು. ಅವಾಗ ಅಕ್ಕ ಬಿಟ್ಟಿದ್ದರು‌. ಆದರೆ ಇದೀಗ ನಮ್ಮಕ್ಕನ‌ ಕೊಲೆಯಾಗಿದೆ. ಕೊಲೆಯಾದ ದಿನದಿಂದ ಅವನು ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ: ಅಂಜಲಿ ಕೊಲೆ ಪ್ರಕರಣ: ಸಿಐಡಿ ಅಧಿಕಾರಿಗಳ ಬಳಿ ಹತ್ಯೆ ರಹಸ್ಯ ಬಾಯ್ಬಿಟ್ಟ ಹಂತಕ ವಿಶ್ವ

ಈರಣ್ಣ ಅಲಿಯಾಸ್ ವಿಜಯ್ ಮೊದಲು ದಿನ ಇಲ್ಲೇ ಓಡುತ್ತಿದ್ದ. ಆದರೆ ಇದೀಗ ವಿಜಯ್ ನಾಪತ್ತೆಯಾಗಿದ್ದಾನೆ. ಅವನನ್ನು ಕೂಡ ಅರೆಸ್ಟ್ ಮಾಡಬೇಕು. ನಮಗೆ ಆತನ ಮೇಲೆ ಅನುಮಾನ ಇದೆ ಎಂದು ಅಂಜಲಿ ಸಹೋದರಿ ಯಶೋಧಾ ಹೊಸ ಬಾಂಬ್ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!