AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JP Nadda: ನೇಹಾ ಹತ್ಯೆ ಕೇಸ್​ ಬೆನ್ನಲ್ಲೇ ಹುಬ್ಬಳ್ಳಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ ಅವರು ವಾಣಿಜ್ಯ ನಗರಿಗೆ ಭೇಟಿ ನೀಡುತ್ತಿದ್ದಾರೆ.

JP Nadda: ನೇಹಾ ಹತ್ಯೆ ಕೇಸ್​ ಬೆನ್ನಲ್ಲೇ ಹುಬ್ಬಳ್ಳಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
ಶಿವಕುಮಾರ್ ಪತ್ತಾರ್
| Edited By: |

Updated on:Apr 21, 2024 | 7:18 AM

Share

ಹುಬ್ಬಳ್ಳಿ, ಏಪ್ರಿಲ್​ 20: ನೇಹಾ (neha hiremath) ಕೊಲೆಗೆ ಒಕ್ಕೂರಲ ಖಂಡನೆ ವ್ಯಕ್ತವಾಗಿದೆ. ಕೊಲೆ ಪ್ರಕರಣ ಖಂಡಿಸಿ ಮಠಾಧೀಶರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ವಿವಿಧ ರಾಜಕಾರಣಿಗಳು, ಮಠಾಧೀಶರು ಮತ್ತು ನಾಗರೀಕರು ನೇಹಾ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ. ಆರೋಪಿಯನ್ನು ಕೊಲ್ಲಬೇಕು ಎಂಬ ಆಗ್ರಹ ವ್ಯಕ್ತವಾಗುತ್ತಿದೆ. ದಿನದಿಂದ ದಿನಕ್ಕೆ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಇಂದು (ಏ.21) ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದಾರೆ.

ನಡ್ಡಾ ಹುಬ್ಬಳ್ಳಿ ಭೇಟಿ ವಿವರ ಹೀಗಿದೆ

ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಜೆಪಿ ನಡ್ಡಾ ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್​​ನಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ಮಾಡಲಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಸ್ಪರ್ಧಿಸಲು ಸ್ವಾಮೀಜಿಗೆ ಪೇಮೆಂಟ್​ ಆಗಿದೆ: ಶಾಸಕ ಯತ್ನಾಳ್​ ಆರೋಪ

ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ನಡ್ಡಾ, ಪ್ರಲ್ಹಾದ್​ ಜೋಶಿ ಪರ ಮತಯಾಚನೆ ಮಾಡಲಿದ್ದಾರೆ. 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ರಾತ್ರಿ 9 ಗಂಟೆಗೆ ಡೆನಿಸನ್ ಹೋಟೆಲ್​​ನಲ್ಲಿ ಕೋರ್ ಕಮೀಟಿ ಸಭೆ ಮಾಡಲಿದ್ದಾರೆ.

ವಿದ್ಯಾರ್ಥಿನಿ ನೇಹಾ ಸಾವಿಗೆ ಕರುನಾಡು ಮರುಗಿದೆ. ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸಿದ ಜನ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ವಿವಿಧ ಮಠಾಧೀಶರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಘಟನೆಯನ್ನು ಖಂಡಿಸಿದರು. ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರ ಪ್ರತಿಭಟನೆ ನಡೆಯಿತು. ಮತ್ತೊಂದೆಡೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕೆಲಕಾಲ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡಿದರು. ನಂತರ ಬಿ ವಿ ಕಾಲೇಜು ಬಳಿಯೂ ಪ್ರತಿಭಟನೆ ಮಾಡಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಫಯಾಜ್ ತಂದೆತಾಯಿ ಕ್ಷಮೆ ಕೇಳಿದರೆ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತದೆಯೇ? ನಿರಂಜನ ಹಿರೇಮಠ

ಇದೆ ವೇಳೆ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ವಿವಿಧ ಮಠಾಧೀಶರು ರಾಜಕಾರಣಿಗಳು ಮತ್ತು ಜನತೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ದಿಂಗಾಲೇಶ್ವರ ಶ್ರೀ, ಜಯಮೃತ್ಯುಂಜಯ ಸ್ವಾಮೀಜಿ, ಮುರುಘಾಮಠದ ಶ್ರೀ, ವಚನಾನಂದ ಸ್ವಾಮೀಜಿ ಸೇರಿ ಹಲವು ಮಠಾಧೀಶರು ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Sat, 20 April 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?