AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ರು, ಆದ್ರೆ ನನ್ನ ಮಗಳ ಕೊಲೆ ಮಾಡಿದ್ರು: ನಿರಂಜನ ಹಿರೇಮಠ

ಹುಬ್ಬಳ್ಳಿಯಲ್ಲಿ ಮಾತನಾಡಿದ ಮೃತಮೃತ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ ಹಿರೇಮಠ, ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದರು ಎಂದು ಹೇಳಿದ್ದಾರೆ. ಮೊದಲು ನನ್ನ ಮಗಳ ಕೊಲೆ ನಡೆಯಿತು. ಬಳಿಕ ಅಂಜಲಿ ಯುವತಿಯ ಕೊಲೆ ನಡೆಯಿತು. ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ರು, ಆದ್ರೆ ನನ್ನ ಮಗಳ ಕೊಲೆ ಮಾಡಿದ್ರು: ನಿರಂಜನ ಹಿರೇಮಠ
ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ರು, ಆದ್ರೆ ನನ್ನ ಮಗಳ ಕೊಲೆ ಮಾಡಿದ್ರು: ನಿರಂಜನ ಹಿರೇಮಠ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ|

Updated on:May 18, 2024 | 5:38 PM

Share

ಹುಬ್ಬಳ್ಳಿ, ಮೇ 18: ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದರು ಎಂದು ಮೃತ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ ಹಿರೇಮಠ (niranjan hiremath) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ವಾರ್ಡ್​​ನಲ್ಲಿ ಎರಡು ಕೊಲೆಗಳು ಆಗಿವೆ. ಮೊದಲು ನನ್ನ ಮಗಳ ಕೊಲೆ (Murder) ನಡೆಯಿತು. ಬಳಿಕ ಅಂಜಲಿ ಯುವತಿಯ ಕೊಲೆ ನಡೆಯಿತು. ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಜತೆಗೆ ರಕ್ಷಣೆ ಕೊಡಲು ಸರ್ಕಾರಕ್ಕೆ ಆಗಲಿಲ್ಲ. ನಮ್ಮ‌ ಜನಾಂಗಕ್ಕೆ ಜನರು ಬೆಲೆ‌ ಕೊಡುತ್ತಾರೆ. ಆದರೆ ಕೆಲವರು ರಾಜಕೀಯ ಮಾಡಿ ಈ ರೀತಿ ಮಾಡುತ್ತಿದ್ದಾರೆ. ಕಾಣದ ಕೈ ಕೆಲಸ ಮಾಡುತ್ತಿವೆ. ಜನರೆ ನನ್ನ ಕೈ ಹಿಡಿದಿದ್ದಾರೆ. ನನ್ನ ವಾರ್ಡ್​​ನಲ್ಲೇ ಅಕ್ರಮ ಚಟುವಟಿಕೆ ಮಾಡುತ್ತಿದ್ದಾರೆ. ಸರ್ಕಾರ ದಕ್ಷ ಪೊಲೀಸ ಅಧಿಕಾರಿ ನೇಮಿಸಬೇಕು. ಸರ್ಕಾರಕ್ಕೆ ಧಮ್ಮ ಇಲ್ಲ, ಅಂದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ತನ್ನ ಮಗಳಂತೆ ಮತ್ತೋರ್ವ ಯುವತಿ ಹತ್ಯೆ: ಗೃಹ ಸಚಿವರ ವಿರುದ್ಧ ನೇಹಾ ತಂದೆ ನಿರಂಜನ ಕೆಂಡಾಮಂಡಲ

ಕೂಲಿ‌ ಮಾಡಿ ಬದುಕುವ ಜನಾಂಗದ ಯುತಿ ಕೊಲೆ ಮಾಡಿದ್ದಾರೆ. ನನ್ನ ಮಗಳ ಬಲಿ ಪಡೆದಿದ್ದಕ್ಕೆ ಇಡೀ‌ ಜಗತ್ತು ಆಕ್ರೋಶ ವ್ಯಕ್ತ ಪಡಿಸಿದರು. ಅನೇಕ ರಾಜಕೀಯ ನಾಯಕರು ಮನೆ ಬರುವುದನ್ನು ತಪ್ಪಿಸಿದರು. ರೇವಣ್ಣ ಅವರು ಮನೆ ಬರುತ್ತಿದ್ದರು ಅವರನ್ನು ಬರದಂತೆ ಮಾಡಿದರು. ವೀಣಾ ಕಾಶಪ್ಪನವರ ಅವರು ಕೂಡ ಮನೆ ಬರುವುದಾಗಿ ಹೇಳಿದ್ದರು. ಆದರೆ ಅವರು ಬರದಂತೆ‌ ಮಾಡಿದರು. ಯಾರೊಂದಿಗೆ ಯಾರು ಮಾತನಾಡಿದ್ದಾರೆ ಎಂದು ಎಲ್ಲ ಫೋನ್ ರೆಕಾರ್ಡ್ ಇವೆ. ಗೃಹ ಸಚಿವರು ಏಕೆ ಸುಮ್ಮನಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ನೇಹಾ ಕೊಲೆಯ ಬಳಿಕ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಶನರ್ ಟ್ರಾನ್ಸ್ ಫರ್ ಆಗಿದ್ದರೆ ಅಂಜಲಿ ಹತ್ಯೆ ನಡೆಯುತ್ತಿರಲಿಲ್ಲ: ನಿರಂಜನ್ ಹಿರೇಮಠ

ಜಂಗಮ, ಅಂಬಿಗರ ಸಮುದಾಯ ಸೇರಿ ಮುಂದೆ ಉಗ್ರ ಹೋರಾಟ ಮಾಡುತ್ತೇವೆ. ಸರ್ಕಾರ ಗುಂಡಾ, ರೌಡಿ ಶೀಟರ್​ಗಳ ದಂಧೆ ಬಂದ್ ಮಾಡಬೇಕು. ಅಲ್ಲದೆ ರೌಡಿಗಳ ಚಲನವಲನ ಮೇಲೆ‌ ಕಣ್ಣಿಡಬೇಕು. ಅಂಜಲಿ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಬೇಕು. ಅಂಜಲಿ ಕುಟುಂಬಕ್ಕೆ ಭದ್ರತೆ ನೀಡಬೇಕು. ಅವರು ಕುಟುಂಬಕ್ಕೆ ಒಂದು‌ ಮನೆ, ತಾತ್ಕಾಲಿಕ ಕೆಲಸ ನೀಡಬೇಕು. ಈ ಬಗ್ಗೆ ವಾಗ್ದಾನ ಪತ್ರ ನೀಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:36 pm, Sat, 18 May 24

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ