ವಾಹನ ಕೊಟ್ಟು ದಂಡ ತೆತ್ತ ಪೋಷಕರು: ಅಪ್ರಾಪ್ತ ವಾಹನ ಚಲಾಯಿಸಿದ್ದಕ್ಕೆ 25 ಸಾವಿರ ರೂ ಫೈನ್​

ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಿದರೆ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಗೊತ್ತಿದ್ದರು ಕೂಡ ಪೋಷಕರು ತಮ್ಮ ಮಕ್ಕಳಿಗೆ ವಾಹನ ಚಾಲನೆಗೆ ನೀಡುತ್ತಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ ಪೋಷಕರಿಗೆ 25 ಸಾವಿರ ರೂ. ದಂಡ ಹಾಕಲಾಗಿದೆ.

ವಾಹನ ಕೊಟ್ಟು ದಂಡ ತೆತ್ತ ಪೋಷಕರು: ಅಪ್ರಾಪ್ತ ವಾಹನ ಚಲಾಯಿಸಿದ್ದಕ್ಕೆ 25 ಸಾವಿರ ರೂ ಫೈನ್​
ವಾಹನ ಕೊಟ್ಟು ದಂಡ ತೆತ್ತ ಪೋಷಕರು: ಅಪ್ರಾಪ್ತ ವಾಹನ ಚಲಾಯಿಸಿದ್ದಕ್ಕೆ 25 ಸಾವಿರ ರೂ ಫೈನ್​
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 20, 2024 | 5:54 PM

ಹುಬ್ಬಳ್ಳಿ, ಜುಲೈ 20: ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಕರರು ವಾಹನ (Vehicles) ಚಲಾಯಿಸುವುದು ಹೆಚ್ಚಾಗಿದೆ. ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ ಪೋಷಕರಿಗೆ 25 ಸಾವಿರ ರೂ. ದಂಡ (penalty) ಹಾಕಲಾಗಿದೆ. ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಒಪ್ಪಿಗೆ ಪೋಷಕರಿಗೆ 25 ಸಾವಿರ ದಂಡ ಹಾಕಿ ಹುಬ್ಬಳ್ಳಿ ಒಂದನೇ ಜೆಎಂಎಫ್​ಸಿ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿಯ ಪಡದಯ್ಯನ ಹಕ್ಕಲ ನಿವಾಸಿ ಅಶ್ವೀನಿ ಕಲಾಲ್ ಎಂಬುವವರಿಗೆ ನ್ಯಾಯಾಲಯದಿಂದ ದಂಡ ವಿಧಿಸಲಾಗಿದೆ.

ನಿನ್ನೆ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ಹಿನ್ನಲೆ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಿದರೆ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಇಂತಹ ಅನೇಕ ಪ್ರಕರಣಗಳು ಕಂಡುಬರುತ್ತಿವೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೂ ತಟ್ಟಿದ ಕ್ಲೌಡ್ ಸಮಸ್ಯೆ ಬಿಸಿ

ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಮೈಕ್ರೋಸಾಫ್ಟ್ ಸಂಸ್ಥೆಯು ಹೊಂದಿರುವ ದತ್ತಾಂಶ, ತಂತ್ರಾಂಶ ಸಂಗ್ರಹದ ಪ್ರಮುಖ ಭಾಗವಾದ ಕ್ಲೌಡ್​ನಲ್ಲಿ ನಿನ್ನೆ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರ ಪರಿಣಾಮ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮೇಲೂ ಬೀರಿದೆ.

ಇದನ್ನೂ ಓದಿ: Bengaluru Traffic Police: ಬೆಂಗಳೂರಿನಲ್ಲಿ ಹೆಚ್ಚಿದ ಶಾಲಾ ಮಕ್ಕಳ ಬೈಕ್ ಸಂಚಾರ: ಒಂದೇ ದಿನ 1800 ಮಕ್ಕಳ ಪೋಷಕರಿಗೆ ದಂಡ

ಮುಂಬೈ ಮತ್ತು ನವದೆಹಲಿಯಿಂದ ಬರಬೇಕಿದ್ದ ವಿಮಾನಳು ವಿಳಂಬವಾಗಿವೆ. ವಿಮಾನಯಾನ ಸಂಸ್ಥೆಗಳ ಬುಕ್ಕಿಂಗ್‌ನಲ್ಲಿ ಅಡಚಣೆ ಕಾಣಿಸಿಕೊಂಡಿದ್ದು, ಕೈ ಬರಹದಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಿಕೊಡಲಾಗಿದೆ. ಹಾಗೆಯೇ ಮುಂಬೈ, ದೆಹಲಿಯಿಂದ ಬಂದ ಪ್ರಯಾಣಿಕರ ಟಿಕೆಟ್ ಅನ್ನು ಸಹ ಕೈ ಬರಹದಲ್ಲಿ ನಮೂದಿಸಿದ್ದನ್ನು ಪ್ರಯಾಣಿಕರೊಬ್ಬರು ನಗರದ ವಿಮಾನ ನಿಲ್ದಾಣದಲ್ಲಿ ತೋರಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ವಯಸ್ಕರರು ವಾಹನ ಚಲಾಯಿಸಲು ಅನುಮತಿ ನೀಡಿದ್ದಕ್ಕೆ ಪೋಷಕರಿಗೆ 1.5 ಲಕ್ಷ ರೂ. ದಂಡ

ಕ್ಲೌಡ್ ಸಮಸ್ಯೆ ನಿವಾರಣೆಯಾಗುವರೆಗೂ ವಿಮಾನಯಾನ ಸಂಸ್ಥೆಗಳು ಆನ್‌ಲೈನ್​​ ಬುಕ್ಕಿಂಗ್ ಸಾಧ್ಯತೆ ಕಡಿಮೆ ಮಾಡಲಿದೆ ಎಂದು ಈ ಬಗ್ಗೆ ಹುಬ್ಬಳ್ಳಿ ಏರೋಡ್ರಮ್ ಸಲಹಾ ಸಮಿತಿ ಸದಸ್ಯ ಸುನಿಲ ನಲವಡೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!