AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಶಬರಿಮಲೆ ರೈಲು: ಅಯ್ಯಪ್ಪ ಭಕ್ತರಿಗಾಗಿ ನೈಋತ್ಯ ರೈಲ್ವೇಸ್ ವಿಶೇಷ ಕೊಡುಗೆ

Hubballi to Kollam Train: ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ರೈಲ್ವೇ ಇಲಾಖೆ ವಿಶೇಷ ರೈಲುಗಳ ಸೌಲಭ್ಯ ಕಲ್ಪಿಸಿದೆ. 14 ಎಕ್ಸ್​ಪ್ರೆಸ್ ರೈಲುಗಳು ಭಕ್ತರ ಶಬರಿಮಲೆ ಪ್ರಯಾಣವನ್ನು ಸುಖಕರಗೊಳಿಸಲಿವೆ. ಸೆಪ್ಟೆಂಬರ್ 28 ರಿಂದ ಶುರುವಾಗಲಿರುವ ಈ ಸೌಲಭ್ಯ ಬೆಂಗಳೂರಿನ ಮಾರ್ಗವಾಗಿ ಕೇರಳದ ಹುಬ್ಬಳ್ಳಿ ಮತ್ತು ಕೊಲ್ಲಂ ಜಂಕ್ಷನ್​ಗಳ ನಡುವೆ ಹಾದುಹೋಗಲಿವೆ.

ಹುಬ್ಬಳ್ಳಿ ಶಬರಿಮಲೆ ರೈಲು: ಅಯ್ಯಪ್ಪ ಭಕ್ತರಿಗಾಗಿ ನೈಋತ್ಯ ರೈಲ್ವೇಸ್ ವಿಶೇಷ ಕೊಡುಗೆ
ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ಸೌಲಭ್ಯ
ಭಾವನಾ ಹೆಗಡೆ
|

Updated on:Sep 23, 2025 | 12:02 PM

Share

ಬೆಂಗಳೂರು, ಸಪ್ಟೆಂಬರ್23: ಕರ್ನಾಟಕದ ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ನೈಋತ್ಯ ರೈಲ್ವೇ (South west Railways) ವತಿಯಿಂದ 14 ವಿಶೇಷ ರೈಲುಗಳ ಸೌಲಭ್ಯ ಒದಗಲಿದೆ. ಈ 14 ಎಕ್ಸ್​ಪ್ರೆಸ್ ರೈಲುಗಳು ಕೇರಳದ ಹುಬ್ಬಳ್ಳಿ ಮತ್ತು ಕೊಲ್ಲಂ ಜಂಕ್ಷನ್​ಗಳ ನಡುವೆ ಬೆಂಗಳೂರು ಮೂಲಕ ಹಾದು ಹೋಗಲಿವೆ. ಇದರಿಂದಾಗಿ ಶಬರಿಮಲೆಗೆ ತೆರಳಲಿರುವ ಅಯ್ಯಪ್ಪ ಭಕ್ತರ ಪ್ರಯಾಣವು ಸುಲಭವಾಗಲಿದೆ.

ಈ ವಿಶೇಷ ರೈಲು ಸೌಲಭ್ಯಗಳು ದೊರೆಯುವುದು ಯಾವಾಗ?

ಈ ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್​ಪ್ರೆಸ್ ರೈಲುಗಳು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 28ರ ವರೆಗೆ  ಭಾನುವಾರಗಳಂದು  ಪ್ರಯಾಣ ಸೌಲಭ್ಯ ಒದಗಿಸಲಿವೆ. ಮಧ್ಯಾಹ್ನ 3.15 ರಿಂದ ಹುಬ್ಬಳ್ಳಿಯಿಂದ ಹೊರಡುವ ರೈಲುಗಳು, ಮರುದಿನ ಮಧ್ಯಾಹ್ನ 12.55 ಕ್ಕೆ ಕೊಲ್ಲಂ ತಲುಪಲಿವೆ. ಮರಳಿ ಬರುವಾಗ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 29 ರವರೆಗೆ  ರೈಲುಗಳು ಸೊಮವಾರಗಳಂದು ಕಾರ್ಯನಿರ್ವಹಿಸಲಿವೆ. ಸಂಜೆ 5 ಗಂಟೆಗೆ ಕೊಲ್ಲಂನಿಂದ ವಾಪಾಸಾಗುವ ರೈಲುಗಳು ಮರುದಿನ ಸಂಜೆ 6.30 ಕ್ಕೆ ಹುಬ್ಬಳ್ಳಿ ತಲುಪಲಿವೆ.

ಇದನ್ನೂ ಓದಿ ದಸರಾ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ವಿಶೇಷ ರೈಲುಗಳಲ್ಲಿರುವ ಸೌಲಭ್ಯಗಳೇನು?

ಈ ರೈಲುಗಳಲ್ಲಿ ಒಂದು ಎಸಿ-2 ಟೈರ್, ಎರಡು- ಎಸಿ 3 ಟೈರ್ , 12 ಸ್ಲೀಪರ್​ಗಳು ಮತ್ತು 5 ಜನರಲ್​ ವಿಭಾಗಗಳು ಸೇರಿದಂತೆ 22 ರೈಲ್ವೆ ಬೋಗಿಗಳ ಸೌಲಭ್ಯವಿರಲಿದೆ. ವಿಶೇಷ ರೈಲುಗಳು ಮಾರ್ಗ ಮಧ್ಯೆ ಹಾವೇರಿ, ದಾವಣಗೆರೆ, ಬಿರೂರು, ಅರಸಿಕೆರೆ, ತುಮಕೂರು, ಎಸ್​ಎಂವಿಟಿ(Sir. M Visvesvarayya Terminal), ಬೆಂಗಳೂರು ಮತ್ತು ಕೃಷ್ಣರಾಜಪುರಂ ಈ ಎಲ್ಲಾ ಜಾಗಗಳಲ್ಲಿ ನಿಲುಗಡೆ ಇರಲಿದೆ. ಶಬರಿಮಲೆಗೆ ತೆರಳುವ ಭಕ್ತಾದಿಗಳು ದೇವಸ್ಥಾನಕ್ಕೆ ಹತ್ತಿರವಿರುವ ಚೆಂಗನ್ನೂರು ರೈಲು ನಿಲ್ದಾಣದಲ್ಲಿ ಇಳಿಯಬಹುದೆಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Tue, 23 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ