AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಶಬರಿಮಲೆ ರೈಲು: ಅಯ್ಯಪ್ಪ ಭಕ್ತರಿಗಾಗಿ ನೈಋತ್ಯ ರೈಲ್ವೇಸ್ ವಿಶೇಷ ಕೊಡುಗೆ

Hubballi to Kollam Train: ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ರೈಲ್ವೇ ಇಲಾಖೆ ವಿಶೇಷ ರೈಲುಗಳ ಸೌಲಭ್ಯ ಕಲ್ಪಿಸಿದೆ. 14 ಎಕ್ಸ್​ಪ್ರೆಸ್ ರೈಲುಗಳು ಭಕ್ತರ ಶಬರಿಮಲೆ ಪ್ರಯಾಣವನ್ನು ಸುಖಕರಗೊಳಿಸಲಿವೆ. ಸೆಪ್ಟೆಂಬರ್ 28 ರಿಂದ ಶುರುವಾಗಲಿರುವ ಈ ಸೌಲಭ್ಯ ಬೆಂಗಳೂರಿನ ಮಾರ್ಗವಾಗಿ ಕೇರಳದ ಹುಬ್ಬಳ್ಳಿ ಮತ್ತು ಕೊಲ್ಲಂ ಜಂಕ್ಷನ್​ಗಳ ನಡುವೆ ಹಾದುಹೋಗಲಿವೆ.

ಹುಬ್ಬಳ್ಳಿ ಶಬರಿಮಲೆ ರೈಲು: ಅಯ್ಯಪ್ಪ ಭಕ್ತರಿಗಾಗಿ ನೈಋತ್ಯ ರೈಲ್ವೇಸ್ ವಿಶೇಷ ಕೊಡುಗೆ
ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ಸೌಲಭ್ಯ
ಭಾವನಾ ಹೆಗಡೆ
|

Updated on:Sep 23, 2025 | 12:02 PM

Share

ಬೆಂಗಳೂರು, ಸಪ್ಟೆಂಬರ್23: ಕರ್ನಾಟಕದ ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ನೈಋತ್ಯ ರೈಲ್ವೇ (South west Railways) ವತಿಯಿಂದ 14 ವಿಶೇಷ ರೈಲುಗಳ ಸೌಲಭ್ಯ ಒದಗಲಿದೆ. ಈ 14 ಎಕ್ಸ್​ಪ್ರೆಸ್ ರೈಲುಗಳು ಕೇರಳದ ಹುಬ್ಬಳ್ಳಿ ಮತ್ತು ಕೊಲ್ಲಂ ಜಂಕ್ಷನ್​ಗಳ ನಡುವೆ ಬೆಂಗಳೂರು ಮೂಲಕ ಹಾದು ಹೋಗಲಿವೆ. ಇದರಿಂದಾಗಿ ಶಬರಿಮಲೆಗೆ ತೆರಳಲಿರುವ ಅಯ್ಯಪ್ಪ ಭಕ್ತರ ಪ್ರಯಾಣವು ಸುಲಭವಾಗಲಿದೆ.

ಈ ವಿಶೇಷ ರೈಲು ಸೌಲಭ್ಯಗಳು ದೊರೆಯುವುದು ಯಾವಾಗ?

ಈ ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್​ಪ್ರೆಸ್ ರೈಲುಗಳು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 28ರ ವರೆಗೆ  ಭಾನುವಾರಗಳಂದು  ಪ್ರಯಾಣ ಸೌಲಭ್ಯ ಒದಗಿಸಲಿವೆ. ಮಧ್ಯಾಹ್ನ 3.15 ರಿಂದ ಹುಬ್ಬಳ್ಳಿಯಿಂದ ಹೊರಡುವ ರೈಲುಗಳು, ಮರುದಿನ ಮಧ್ಯಾಹ್ನ 12.55 ಕ್ಕೆ ಕೊಲ್ಲಂ ತಲುಪಲಿವೆ. ಮರಳಿ ಬರುವಾಗ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 29 ರವರೆಗೆ  ರೈಲುಗಳು ಸೊಮವಾರಗಳಂದು ಕಾರ್ಯನಿರ್ವಹಿಸಲಿವೆ. ಸಂಜೆ 5 ಗಂಟೆಗೆ ಕೊಲ್ಲಂನಿಂದ ವಾಪಾಸಾಗುವ ರೈಲುಗಳು ಮರುದಿನ ಸಂಜೆ 6.30 ಕ್ಕೆ ಹುಬ್ಬಳ್ಳಿ ತಲುಪಲಿವೆ.

ಇದನ್ನೂ ಓದಿ ದಸರಾ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ವಿಶೇಷ ರೈಲುಗಳಲ್ಲಿರುವ ಸೌಲಭ್ಯಗಳೇನು?

ಈ ರೈಲುಗಳಲ್ಲಿ ಒಂದು ಎಸಿ-2 ಟೈರ್, ಎರಡು- ಎಸಿ 3 ಟೈರ್ , 12 ಸ್ಲೀಪರ್​ಗಳು ಮತ್ತು 5 ಜನರಲ್​ ವಿಭಾಗಗಳು ಸೇರಿದಂತೆ 22 ರೈಲ್ವೆ ಬೋಗಿಗಳ ಸೌಲಭ್ಯವಿರಲಿದೆ. ವಿಶೇಷ ರೈಲುಗಳು ಮಾರ್ಗ ಮಧ್ಯೆ ಹಾವೇರಿ, ದಾವಣಗೆರೆ, ಬಿರೂರು, ಅರಸಿಕೆರೆ, ತುಮಕೂರು, ಎಸ್​ಎಂವಿಟಿ(Sir. M Visvesvarayya Terminal), ಬೆಂಗಳೂರು ಮತ್ತು ಕೃಷ್ಣರಾಜಪುರಂ ಈ ಎಲ್ಲಾ ಜಾಗಗಳಲ್ಲಿ ನಿಲುಗಡೆ ಇರಲಿದೆ. ಶಬರಿಮಲೆಗೆ ತೆರಳುವ ಭಕ್ತಾದಿಗಳು ದೇವಸ್ಥಾನಕ್ಕೆ ಹತ್ತಿರವಿರುವ ಚೆಂಗನ್ನೂರು ರೈಲು ನಿಲ್ದಾಣದಲ್ಲಿ ಇಳಿಯಬಹುದೆಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Tue, 23 September 25

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ