Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆಯಿಂದಾಗಿ ಆರ್ಥಿಕ ಸಂಕಷ್ಟ; ಹು-ಧಾ ಮಹಾನಗರ ಪಾಲಿಕೆಯ ಆದಾಯದಲ್ಲಿ ಕುಸಿತ

ಒಂದು ಕಡೆ ಕೇಲಸವಿಲ್ಲದೆ ಜನರು ಆರ್ಥಿಕವಾಗಿ ಜರ್ಜರಿತರಾಗಿದ್ದು, ಮತ್ತೊಂದೆಡೆ ಲಾಕ್​ಡೌನ್ ಪರಿಣಾಮ ಮನೆಯಿಂದ ಹೊರ ಬಂದು ತೆರಿಗೆ ಕಟ್ಟಲು ಸಾಧ್ಯವಾಗದೆ ಇರುವುದು ತೆರಿಗೆ ಸಂಗ್ರಹದಲ್ಲಿನ ಹಿನ್ನೆಡೆಗೆ ಕಾರವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ಆರ್ಥಿಕ ಸಂಕಷ್ಟ; ಹು-ಧಾ ಮಹಾನಗರ ಪಾಲಿಕೆಯ ಆದಾಯದಲ್ಲಿ ಕುಸಿತ
ಹು-ಧಾ ಮಹಾನಗರ ಪಾಲಿಕೆ
Follow us
TV9 Web
| Updated By: preethi shettigar

Updated on: Jun 19, 2021 | 3:39 PM

ಧಾರವಾಡ: ಕೊರೊನಾ ಎರನಡನೇ ಅಲೆಯ ಭೀತಿಯಿಂದ ಇನ್ನು ದೇಶ ಸಂಪೂರ್ಣವಾಗಿ ಮುಕ್ತವಾಗಿಲ್ಲ. ಸಾಕಷ್ಟು ಸಾವು ನೋವುಗಳ ಮಧ್ಯೆ ಇಡೀ ದೇಶ ಮತ್ತೊಮ್ಮೆ ಆರ್ಥಿಕ ಸಂಕಷ್ಟದತ್ತ ಬಂದಿದೆ. ಪ್ರತಿಯೊಂದು ಜಿಲ್ಲೆ ಕೂಡ ಈಗ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು, ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳ ಮಾಹೆಯಲ್ಲಿ 22.87 ಕೋಟಿ ತೆರಿಗೆ ಸಂಗ್ರಹವಾಗಿದೆ. ಆ ಮೂಲಕ ಕಳೆದ ಲಾಕ್​ಡೌನ್​ಗಿಂತಲೂ ಈ ಬಾರಿ ಹು-ಧಾ ಮಹಾನಗರ ಪಾಲಿಕೆಗೆ ಆದಾಯದಲ್ಲಿ ಹೊಡೆತ ಎದುರಾಗಿದೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿನ ಲಾಕ್​ಡೌನ್​ನಲ್ಲಿ 36 ಕೋಟಿಯಷ್ಟು ತೆರಿಗೆ ಸಂಗ್ರಹವಾಗಿತ್ತು. ಈ ಬಾರಿ ಲಾಕ್​ಡೌನ್ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಆದಾಯದಲ್ಲಿ ಕುಸಿತ ಕಂಡುಬಂದಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಂಗ್ರಹವಾದ ಒಟ್ಟು ತೆರಿಗೆಯ ಪ್ರಮಾಣ 22.87 ಕೋಟಿ ರೂಪಾಯಿಯಷ್ಟಾಗಿದೆ. ಲಾಕ್​ಡೌನ್​ನಿಂದಾಗಿ ಆದಾಯದಲ್ಲಿ ಏರುಪೇರಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಹೇಳಿದ್ದಾರೆ.

ಕೊರೋನಾ ಎರಡನೇ ಅಲೆಯ ತೀವ್ರತೆಯನ್ನು ತಗ್ಗಿಸಲು ಜನತಾ ಕರ್ಫ್ಯೂ ಹಾಗೂ ಲಾಕ್​ಡೌನ್ ನಿರ್ಬಂಧಗಳಿಂದ ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನರಿಗೆ ಆಸ್ತಿ ಕರ ಹಾಗೂ ಇನ್ನಿತರ ತೆರಿಗೆ ಪಾವತಿಸಲು ಅನುಕೂಲಕರವಾಗುವಂತೆ ಸ್ಥಾಪಿಸಿದ್ದ ಎಚ್-ಡಿ- 01 ಕೇಂದ್ರಗಳನ್ನು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಹಿನ್ನೆಡೆಯಾಗಿದೆ. ಒಂದು ಕಡೆ ಕೇಲಸವಿಲ್ಲದೆ ಜನರು ಆರ್ಥಿಕವಾಗಿ ಜರ್ಜರಿತರಾಗಿದ್ದು, ಮತ್ತೊಂದೆಡೆ ಲಾಕ್​ಡೌನ್ ಪರಿಣಾಮ ಮನೆಯಿಂದ ಹೊರ ಬಂದು ತೆರಿಗೆ ಕಟ್ಟಲು ಸಾಧ್ಯವಾಗದೆ ಇರುವುದು ತೆರಿಗೆ ಸಂಗ್ರಹದಲ್ಲಿನ ಹಿನ್ನೆಡೆಗೆ ಕಾರವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ತಿಳಿಸಿದ್ದಾರೆ.

ಒಟ್ಟಿನಲ್ಲಿ ಎಲ್ಲರಿಗೂ ಆರ್ಥಿಕ ಸಂಕಷ್ಟ ತಂದೊಡ್ಡಿರುವ ಕೊರೋನಾ ಈಗ ಮಹಾನಗರ ಪಾಲಿಕೆ ಆದಾಯಕ್ಕೂ ಕೊಡಲಿ ಪೆಟ್ಟು ಹಾಕಿದೆ. ಮೊದಲೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಲಿಕೆ ಈಗ ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದ್ದು ಅಭಿವೃದ್ಧಿ ಕಾರ್ಯಗಳಿಗೆ ಹಿನ್ನೆಡೆಯಾಗಲಿದೆ.

ಇದನ್ನೂ ಓದಿ:

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

ಕೊರೊನಾ ಮೂರನೇ ಅಲೆಯ ಮುನ್ನವೇ ನಡೆಯಲಿದೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ