Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಫೋಟದ ಸದ್ದು, ಕಿಟಕಿ, ಬಾಗಿಲು ಅಲುಗಾಡಿದ ಅನುಭವ; ಕಾರಣ ನಿಗೂಢ!

ಬಿಡದಿ, ಬನಶಂಕರಿ, ಆರ್ ‌ಆರ್ ನಗರ, ನಾಗರಭಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಸದ್ದು ಕೇಳಿಸಿದ ಅನುಭವ ಆಗಿದ್ದು, ಎರಡು ಸೆಕೆಂಡುಗಳ ಕಾಲ ಕಿಟಕಿ, ಬಾಗಿಲು ಅಲುಗಾಡಿದ ಅನುಭವವೂ ಆಗಿದೆ.

ಬೆಂಗಳೂರಿನಲ್ಲಿ ಸ್ಫೋಟದ ಸದ್ದು, ಕಿಟಕಿ, ಬಾಗಿಲು ಅಲುಗಾಡಿದ ಅನುಭವ; ಕಾರಣ ನಿಗೂಢ!
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on:Jul 02, 2021 | 1:39 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12.30ರ ಆಸುಪಾಸಿನಲ್ಲಿ ಸ್ಪೋಟದ ಸದ್ದು ಕೇಳಿಬಂದಿದೆ. ಬಿಡದಿ, ಬನಶಂಕರಿ, ಆರ್ ‌ಆರ್ ನಗರ, ನಾಗರಬಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಸದ್ದು ಕೇಳಿಸಿದ ಅನುಭವ ಆಗಿದ್ದು, ಎರಡು ಸೆಕೆಂಡುಗಳ ಕಾಲ ಕಿಟಕಿ, ಬಾಗಿಲು ಅಲುಗಾಡಿದ ಅನುಭವವೂ ಆಗಿದೆ. ಈ ಬಗ್ಗೆ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳಲಾರಂಭಿಸಿದ್ದು, ಅನೇಕ ಮಂದಿ ತಮಗೂ ಅನುಭವ ಆಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಕೆಲವರು ಹೇಳುವ ಪ್ರಕಾರ 12.23ರ ಸುಮಾರಿಗೆ ಸ್ಪೋಟದ ಸದ್ದು ಕೇಳಿದೆ. ಬಂಡೆ ಒಡೆದಾಗ ಬರುವ ಸದ್ದಿನಂತೆ ಕೇಳಿಸಿದ್ದು, ಪಾರಿವಾಳ ಹಾಗೂ ಇನ್ನಿತರ ಪಕ್ಷಿಗಳು ಚೆಲ್ಲಾಪಿಲ್ಲಿಯಾಗಿ ಹಾರಿರುವುದು ಅನುಮಾನಕ್ಕೆ ಕಾರಣವಾಗಿದೆ.

ಆದರೆ, ಇಲ್ಲಿಯ ತನಕ ಶಬ್ದಕ್ಕೆ ನಿಖರ ಕಾರಣವೇನು? ಮೇಘಸ್ಪೋಟವೇ, ಭೂಕಂಪವೇ ಅಥವಾ ಇನ್ನೇನಾದರೂ ಅವಘಡ ಸಂಭವಿಸಿತೇ ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ಯಾವುದೇ ಅಧಿಕಾರಿಗಳು, ತಜ್ಞರು ಇನ್ನೂ ಮಾಹಿತಿ ನೀಡಿಲ್ಲ. ಕಳೆದ ಬಾರಿಯೂ ನಗರದಲ್ಲಿ ಇಂಥದ್ದೇ ಸದ್ದು ಕೇಳಿಬಂದು ಜನರಿಗೆ ಆತಂಕ ಮೂಡಿತ್ತು. ನಂತರ ಅದು ಸೋನಿಕ್​ ಸೌಂಡ್ ಎಂಬಲ್ಲಿಂದ ಹಿಡಿದು ಅನೇಕ ಲೆಕ್ಕಾಚಾರಗಳೂ ಕೇಳಿಬಂದಿದ್ದವು.

ಇಂದು ಕೇಳಿಸಿರುವ ಈ ಸದ್ದಿನ ಬಗ್ಗೆ ಜನರು ಭಯಭೀತರಾಗಿದ್ದು, ಪ್ರಕೃತಿಯಲ್ಲಿ ಏನಾದರೂ ಬದಲಾವಣೆ ಸಂಭವಿಸಿರಬಹುದೇ? ಭೂಮಿಯೊಳಗಿಂದ ಈ ಶಬ್ಧ ಕೇಳಿಸಿರಬಹುದೇ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಕೆಲವರಿಗೆ ಭೂಕಂಪನದ ಅನುಭವ ಆಗಿದೆಯಾದರೂ ಭೂಕಂಪನ ಮಾಪಕದಲ್ಲಿ ಅದು ದಾಖಲಾಗಿಲ್ಲ. ಹೀಗಾಗಿ ಈ ನಿಗೂಢ ಸದ್ದು ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ್ದು, ನಿಖರ ಕಾರಣವೇನು ಎಂದು ತಜ್ಞರು ವಿಶ್ಲೇಷಿಸಲಿ ಎಂದು ಕಾಯುತ್ತಿದ್ದಾರೆ.

ಇದನ್ನೂ ಓದಿ: ಮೂಡಿಗೆರೆ ಬಳಿ ಭೂಕಂಪನದ ಅನುಭವ; ಆತಂಕ ವ್ಯಕ್ತಪಡಿಸಿದ ಗ್ರಾಮಸ್ಥರು

Published On - 1:12 pm, Fri, 2 July 21

ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ