AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಳಿಮಾವು: ಘೋರ ದುರಂತ ನಡೆದರೂ ಎಚ್ಚೆತ್ತುಕೊಳ್ಳದ ಪಾಲಿಕೆ

ಬೆಂಗಳೂರು: ಕೆಲದಿನಗಳ ಹಿಂದೆ ನಗರದಲ್ಲಿ ಅತಿ ಘೋರ ದುರಂತ ನಡೆದಿತ್ತು. ಇದ್ದಕ್ಕಿದ್ದಂತೆ ಒಡೆದ ಕೆರೆ ಏರಿಯಿಂದ ಕೊಳಚೆ ನೀರು ಧುಮ್ಮಿಕ್ಕಿತ್ತು. ನೋಡ ನೋಡ್ತಿದ್ದಂತೆ ಅಲ್ಲಿದ್ದ ಮನೆಗಳು, ಕಟ್ಟಡಗಳಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿತ್ತು. ಇಷ್ಟೆಲ್ಲಾ ಆದರೂ ಬಿಬಿಎಂಪಿ ಮಾತ್ರ ಎಚ್ಚೆತ್ತಂತೆ ಕಾಣುತ್ತಿಲ್ಲ. ಇನ್ನು ಈ ಬೇಜವಾಬ್ದಾರಿ ವರ್ತನೆ, ಮತ್ತೊಮ್ಮೆ ಅನಾಹುತಕ್ಕೆ ಆಹ್ವಾನ ನೀಡುತ್ತಿದೆ. ಕೊಳಚೆ ನೀರು ನುಗ್ಗಿದ್ದ ಪರಿಣಾಮ ಸೂರು ಕಳೆದುಕೊಂಡವರ ಸ್ಥಿತಿಯಂತೂ ಕರುಣಾಜನಕ. ನವೆಂಬರ್ 24ರಂದು ನಡೆದಿದ್ದ ಘಟನೆಯಿಂದ ನೂರಾರು ಕುಟುಂಬಗಳು ಬೀದಿಗೆ ಬಿದ್ದಿದ್ದವು. ಇಷ್ಟೆಲ್ಲಾ […]

ಹುಳಿಮಾವು: ಘೋರ ದುರಂತ ನಡೆದರೂ ಎಚ್ಚೆತ್ತುಕೊಳ್ಳದ ಪಾಲಿಕೆ
ಸಾಧು ಶ್ರೀನಾಥ್​
|

Updated on: Dec 12, 2019 | 7:36 AM

Share

ಬೆಂಗಳೂರು: ಕೆಲದಿನಗಳ ಹಿಂದೆ ನಗರದಲ್ಲಿ ಅತಿ ಘೋರ ದುರಂತ ನಡೆದಿತ್ತು. ಇದ್ದಕ್ಕಿದ್ದಂತೆ ಒಡೆದ ಕೆರೆ ಏರಿಯಿಂದ ಕೊಳಚೆ ನೀರು ಧುಮ್ಮಿಕ್ಕಿತ್ತು. ನೋಡ ನೋಡ್ತಿದ್ದಂತೆ ಅಲ್ಲಿದ್ದ ಮನೆಗಳು, ಕಟ್ಟಡಗಳಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿತ್ತು. ಇಷ್ಟೆಲ್ಲಾ ಆದರೂ ಬಿಬಿಎಂಪಿ ಮಾತ್ರ ಎಚ್ಚೆತ್ತಂತೆ ಕಾಣುತ್ತಿಲ್ಲ. ಇನ್ನು ಈ ಬೇಜವಾಬ್ದಾರಿ ವರ್ತನೆ, ಮತ್ತೊಮ್ಮೆ ಅನಾಹುತಕ್ಕೆ ಆಹ್ವಾನ ನೀಡುತ್ತಿದೆ.

ಕೊಳಚೆ ನೀರು ನುಗ್ಗಿದ್ದ ಪರಿಣಾಮ ಸೂರು ಕಳೆದುಕೊಂಡವರ ಸ್ಥಿತಿಯಂತೂ ಕರುಣಾಜನಕ. ನವೆಂಬರ್ 24ರಂದು ನಡೆದಿದ್ದ ಘಟನೆಯಿಂದ ನೂರಾರು ಕುಟುಂಬಗಳು ಬೀದಿಗೆ ಬಿದ್ದಿದ್ದವು. ಇಷ್ಟೆಲ್ಲಾ ಆದರೂ ಕ್ರಮ ಕೈಗೊಳ್ಳದ ಬಿಬಿಎಂಪಿ ನಿದ್ದೆಗೆ ಜಾರಿದೆ ಅನ್ನಿಸುತ್ತಿದೆ.

ದುರಂತ ಸಂಭವಿಸಿದ್ರೂ ಎಚ್ಚೆತ್ತುಕೊಂಡಿಲ್ಲ, ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿಲ್ಲ! ಸುಮಾರು 2 ಸಾವಿರ ಮನೆಗಳು ಹುಳಿಮಾವು ಕೆರೆ ದುರಂತಕ್ಕೆ ಬಲಿಯಾಗಿದ್ದವು. ನೀರು ನುಗ್ಗಿದ್ದರಿಂದ ಸಾವಿರಾರು ಮನೆಗಳಿಗೆ ನೀರಿನ ಜೊತೆ ವಿಷಜಂತುಗಳು ಕೂಡ ಎಂಟ್ರಿ ಕೊಟ್ಟಿದ್ದವು. ಎಲ್ಲೆಂದರಲ್ಲಿ ಹಾವುಗಳು ಕಾಣಿಸಿ ಆತಂಕ ಸೃಷ್ಟಿಯಾಗಿತ್ತು. ಇಷ್ಟೆಲ್ಲಾ ನಡೆದಿದ್ರೂ, ಪಾಲಿಕೆ ತಲೆಕೆಡಿಸಿಕೊಂಡಿಲ್ಲ.

130 ಎಕರೆಗೂ ಹೆಚ್ಚಿರುವ ಹುಳಿಮಾವು ಕೆರೆ ವಿಸ್ತಿರ್ಣದಲ್ಲಿ, 20ರಿಂದ 30 ಎಕರೆ ಒತ್ತುವರಿಯಾಗಿದೆ. ಇದನ್ನ ತೆರವು ಮಾಡಲು ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದು ಮತ್ತೆ ದುರಂತಕ್ಕೆ ಆಹ್ವಾನ ನೀಡಿದಂತಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನುಗ್ಗುತ್ತಿದೆ ಕೊಳಚೆ ನೀರು, ಕೆರೆ ಏರಿ ಸರಿಪಡಿಸಲು ಸರ್ಕಸ್! ಮತ್ತೊಂದ್ಕಡೆ ಕೆರೆ ಏರಿ ಭದ್ರಪಡಿಸಲು ಪಾಲಿಕೆ ಸರ್ಕಸ್ ಮಾಡುತ್ತಿದೆ. ಆದ್ರೆ, ಸುತ್ತಮುತ್ತಲ ಪ್ರದೇಶಗಳಿಂದ ಕೆರೆಗೆ ನಿರಂತರವಾಗಿ ಕೊಳಚೆ ನೀರು ಬರ್ತಿರೋ ಕಾರಣ ನೀರು ಏರಿಕೆಯಾಗ್ತಿದೆ. ಒಮ್ಮೆ ಜೋರಾಗಿ ಮಳೆ ಬಂದರೂ, ಮತ್ತೊಮ್ಮೆ ಘೋರ ದುರಂತ ಸಂಭವಿಸುವ ಅಪಾಯವಿದೆ. ಇಷ್ಟೆಲ್ಲಾ ಆಗಿದ್ರೂ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿಲ್ಲ.

ಈ ಬಗ್ಗೆ ಮೇಯರ್​ರನ್ನ ಕೇಳಿದ್ರೆ, ಅಧ್ಯಯನದ ಬಳಿಕ ಒತ್ತುವರಿ ತೆರವು ಮಾಡ್ತೀವಿ ಅಂತಾ ಭರವಸೆ ನೀಡ್ತಿದ್ದಾರೆ. ಒಮ್ಮೆ ಸಂಭವಿಸಿದ ಆಪತ್ತಿನಿಂದ್ಲೂ ಪಾಲಿಕೆ ಅಧಿಕಾರಿಗಳು ಪಾಠ ಕಲಿತಂತೆ ಕಾಣ್ತಿಲ್ಲ. ಇದು ಸ್ಥಳೀಯ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ