ಬಿಬಿಎಂಪಿ ನಿರ್ಲಕ್ಷ್ಯದಿಂದ ಒಡೆಯಿತಾ ಹುಳಿಮಾವು ಕೆರೆ ಏರಿ..?

ಬೆಂಗಳೂರು: ಕಾಮಗಾರಿ ವೇಳೆ ಅಚಾತುರ್ಯದಿಂದ ಹುಳಿಮಾವು ಕೆರೆಯ ಏರಿ ಒಡೆದು 500ಕ್ಕೂ ಮನೆಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ಕೆರೆ ಬಳಿ ಲೇಔಟ್​ಗಳ ಜನರನ್ನು ಬಿಬಿಎಂಪಿ ಸಿಬ್ಬಂದಿ ಖಾಲಿ ಮಾಡಿಸಿದ್ದಾರೆ. ನಿರಾಶ್ರಿತರಿಗೆ ರಾತ್ರಿ ಉಳಿಯಲು ಬಿಬಿಎಂಪಿಯಿಂದಲೇ ವ್ಯವಸ್ಥೆ ಮಾಡಲಾಗಿದೆ. ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆ ಬಂದ್: ಹುಳಿಮಾವು ಕೆರೆ ಸುಮಾರು 140 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆಯ ನೀರನ್ನು ಬೇರೆಡೆಗೆ ಹರಿಸಲು ಕಾಮಗಾರಿ ನಡೆಯುತ್ತಿತ್ತು. ಪೈಪ್​ಲೈನ್ ಅಳವಡಿಸಲು ಜೆಸಿಬಿ ಬಳಸಿ ಕಾಮಗಾರಿ ಕೆಲಸ ನಡೆಸುತ್ತಿದ್ದರು. ಈ […]

ಬಿಬಿಎಂಪಿ ನಿರ್ಲಕ್ಷ್ಯದಿಂದ ಒಡೆಯಿತಾ ಹುಳಿಮಾವು ಕೆರೆ ಏರಿ..?
ಸಾಧು ಶ್ರೀನಾಥ್​

Updated on: Nov 24, 2019 | 6:38 PM

ಬೆಂಗಳೂರು: ಕಾಮಗಾರಿ ವೇಳೆ ಅಚಾತುರ್ಯದಿಂದ ಹುಳಿಮಾವು ಕೆರೆಯ ಏರಿ ಒಡೆದು 500ಕ್ಕೂ ಮನೆಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ಕೆರೆ ಬಳಿ ಲೇಔಟ್​ಗಳ ಜನರನ್ನು ಬಿಬಿಎಂಪಿ ಸಿಬ್ಬಂದಿ ಖಾಲಿ ಮಾಡಿಸಿದ್ದಾರೆ. ನಿರಾಶ್ರಿತರಿಗೆ ರಾತ್ರಿ ಉಳಿಯಲು ಬಿಬಿಎಂಪಿಯಿಂದಲೇ ವ್ಯವಸ್ಥೆ ಮಾಡಲಾಗಿದೆ.

ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆ ಬಂದ್:
ಹುಳಿಮಾವು ಕೆರೆ ಸುಮಾರು 140 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆಯ ನೀರನ್ನು ಬೇರೆಡೆಗೆ ಹರಿಸಲು ಕಾಮಗಾರಿ ನಡೆಯುತ್ತಿತ್ತು. ಪೈಪ್​ಲೈನ್ ಅಳವಡಿಸಲು ಜೆಸಿಬಿ ಬಳಸಿ ಕಾಮಗಾರಿ ಕೆಲಸ ನಡೆಸುತ್ತಿದ್ದರು. ಈ ವೇಳೆ ಅಚಾತುರ್ಯದಿಂದ ಕೆರೆ ಏರಿಗೆ ಡ್ಯಾಮೇಜ್ ಆಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಭೇಟಿ ನೀಡಿದ್ದು, ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ನ್ಯಾನೋ ಆಸ್ಪತ್ರೆಗೆ ನುಗ್ಗಿದ ನೀರು:
ಹುಳಿಮಾವು ಕೆರೆ ಕೋಡಿ ಒಡೆದು ವಸತಿ ಪ್ರದೇಶಗಳು ಜಲಾವೃತವಾಗಿವೆ. ಬಿಳೇಕಹಳ್ಳಿಯಲ್ಲಿರೋ ನ್ಯಾನೋ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೂ ಕೆರೆ ನೀರು ನುಗ್ಗಿದ್ದು, ರೋಗಿಗಳ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನ ಹೊರ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Published On - 6:30 pm, Sun, 24 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us