AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡಿ ಹೊತ್ತಿಸಿದ ಮಾಧುಸ್ವಾಮಿ ಕನಕ ಕದನ, ಇಂದು ಹುಳಿಯಾರು ಬಂದ್..!

ತುಮಕೂರು: ಹುಳಿಯಾರು ಪಟ್ಟಣದಲ್ಲಿರುವ ಸರ್ಕಲ್​ವೊಂದಕ್ಕಿಟ್ಟಿದ್ದ ಕನಕದಾಸರ ಹೆಸರು ಮುಖಂಡರ ಮಧ್ಯೆ ಕಿಡಿ ಹೊತ್ತಿಸಿದೆ. ದಿನಕ್ಕೊಂದು ಹೊಸ ರೂಪ ಪಡೆದು ಇಂದು ಬಂದ್ ಆಚರಣೆಗೂ ಕಾರಣವಾಗಿದೆ. ಬಂದ್​ಗೆ ಕಾರಣವಾದ ‘ಸರ್ಕಲ್ ಹೆಸರು’ ವಿವಾದ: ಕುರುಬ ಸಮುದಾಯ ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ‌ ನಡುವಿನ ‘ಕನಕ ಸರ್ಕಲ್’ ವಿವಾದ ತಾರಕಕ್ಕೇರಿದೆ. ಶಮನವಾಗದೆ ಮತ್ತಷ್ಟು ಕಗ್ಗಂಟಾಗಿದೆ. ಸಚಿವರು ಕನಕದಾಸರಿಗೆ ಅವಮಾನಿಸಿದ್ದಾರೆ, ರಾಜೀನಾಮೆ ನೀಡ್ಬೇಕು ಎಂದು ಕುರುಬ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಸಭೆ ಸೇರಿ ಚರ್ಚಿಸಿ ಇಂದು ಹುಳಿಯಾರು ಬಂದ್​ಗೆ ಕರೆ ನೀಡಿದ್ದಾರೆ. […]

ಕಿಡಿ ಹೊತ್ತಿಸಿದ ಮಾಧುಸ್ವಾಮಿ ಕನಕ ಕದನ, ಇಂದು ಹುಳಿಯಾರು ಬಂದ್..!
ಸಾಧು ಶ್ರೀನಾಥ್​
|

Updated on:Nov 21, 2019 | 10:35 AM

Share

ತುಮಕೂರು: ಹುಳಿಯಾರು ಪಟ್ಟಣದಲ್ಲಿರುವ ಸರ್ಕಲ್​ವೊಂದಕ್ಕಿಟ್ಟಿದ್ದ ಕನಕದಾಸರ ಹೆಸರು ಮುಖಂಡರ ಮಧ್ಯೆ ಕಿಡಿ ಹೊತ್ತಿಸಿದೆ. ದಿನಕ್ಕೊಂದು ಹೊಸ ರೂಪ ಪಡೆದು ಇಂದು ಬಂದ್ ಆಚರಣೆಗೂ ಕಾರಣವಾಗಿದೆ.

ಬಂದ್​ಗೆ ಕಾರಣವಾದ ‘ಸರ್ಕಲ್ ಹೆಸರು’ ವಿವಾದ: ಕುರುಬ ಸಮುದಾಯ ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ‌ ನಡುವಿನ ‘ಕನಕ ಸರ್ಕಲ್’ ವಿವಾದ ತಾರಕಕ್ಕೇರಿದೆ. ಶಮನವಾಗದೆ ಮತ್ತಷ್ಟು ಕಗ್ಗಂಟಾಗಿದೆ. ಸಚಿವರು ಕನಕದಾಸರಿಗೆ ಅವಮಾನಿಸಿದ್ದಾರೆ, ರಾಜೀನಾಮೆ ನೀಡ್ಬೇಕು ಎಂದು ಕುರುಬ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಸಭೆ ಸೇರಿ ಚರ್ಚಿಸಿ ಇಂದು ಹುಳಿಯಾರು ಬಂದ್​ಗೆ ಕರೆ ನೀಡಿದ್ದಾರೆ.

ಇತರೆ ಸಮಾಜ ಮುಖಂಡರು ಬಂದ್​ಗೆ ಸಾಥ್ ನೀಡ್ತಿದ್ದು, ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಅಂಗಡಿ ಮುಂಗಟ್ಟು ಮುಚ್ಚಲಿದ್ದಾರೆ. ಜತೆಗೆ ಪ್ರತಿಭಟನಾ ಱಲಿ ಹಮ್ಮಿಕೊಳ್ಳಲಾಗಿದೆ.

ಸರ್ಕಾರದ ವತಿಯಿಂದ ಕನಕ ವೃತ್ತ ನಿರ್ಮಿಸಲಾಗುವುದು ಎಂದು ಸಿಎಂ ಬಿಎಸ್​ವೈ ರಿಲೀಸ್ ಮಾಡಿರೋ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹುಳಿಯಾರಿನಲ್ಲಿ ಸರ್ಕಲ್ ನಿರ್ಮಿಸಿ ಕನಕದಾಸ ವೃತ್ತ ಎಂದು ನಾಮಕರಣ ಮಾಡಲಾಗುವುದು. ವೃತ್ತಕ್ಕೆ ಕನಕದಾಸರ ಹೆಸರಿಡೋ ಗೊಂದಲ ಅನಾವಶ್ಯಕ.

ಸರ್ಕಲ್​ಗೆ ಕನಕ ಎಂದು ಹೆಸರಿಡಲು ಯಾವ ಅಭ್ಯಂತರವೂ ಇಲ್ಲ. ಬಗ್ಗೆ ಸಚಿವ ಮಾಧುಸ್ವಾಮಿ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಈ ಸಮಯದಲ್ಲಿ ಯಾರು ಉದ್ವೇಗಕ್ಕೆ ಒಳಗಾಗೋದು ಬೇಡ. ಬೈ ಎಲೆಕ್ಷನ್ ಮುಗಿದ ಬಳಿಕ ಸರ್ಕಾರದಿಂದ ವೃತ್ತ ನಿರ್ಮಿಸಲಾಗುವುದು ಎಂದು ಬಿಎಸ್​ವೈ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

Published On - 7:32 am, Thu, 21 November 19

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್