ಐದೇ ನಿಮಿಷ, ಪಕ್ಕಾ ಪ್ಲ್ಯಾನ್: ಕೆಜಿಗಟ್ಟಲೆ ಚಿನ್ನ ಕದ್ದು ಗ್ಯಾಂಗ್ ಎಸ್ಕೇಪ್
ಚಿನ್ನದಂಗಡಿಗೆ ನುಗ್ಗಿದ ಗ್ಯಾಂಗ್ ಕೇವಲ ಐದೇ ನಿಮಿಷಗಳಲ್ಲಿ ಕೆಜಿಗಟ್ಟಲೆ ಬಂಗಾರ ದರೋಡೆ ನಡೆಸಿ ಎಸ್ಕೇಪ್ ಆಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದೆ. ರಾಬರಿ ನಡೆಸಿ ಆರೋಪಿಗಳು ಎಸ್ಕೇಪ್ ಆಗುತ್ತಿರುವ Exclusive ದೃಶ್ಯ ಟಿವಿ9ಗೆ ಲಭ್ಯವಾಗಿದ್ದು, ರಾಬರಿ ಗ್ಯಾಂಗ್ ಪ್ಲ್ಯಾನ್ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ.
ಮೈಸೂರು, ಡಿಸೆಂಬರ್ 29: ಹುಣಸೂರು ಚಿನ್ನದಂಗಡಿ ದರೋಡೆ ನಡೆಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಕೇವಲ ಐದೇ ಐದು ನಿಮಿಷಗಳಲ್ಲಿ ಗೋಲ್ಡ್ ಶಾಪ್ ರಾಬರಿ ನಡೆಸಲಾಗಿದ್ದು, ಕೆಜಿಗಟ್ಟಲೆ ಚಿನ್ನ ಕದ್ದು ಚಾಲಾಕಿಗಳು ಪರಾರಿಯಾಗಿದ್ದಾರೆ. ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಅಂಗಡಿಗೆ ಎಂಟ್ರಿಕೊಟ್ಟಿದ್ದ ಗ್ಯಾಂಗ್ 2 ಗಂಟೆ 9 ನಿಮಿಷಕ್ಕೆ ಶಾಪ್ನಿಂದ ತೆರಳಿದೆ. ಚಿನ್ನ ತೆಗೆದುಕೊಂಡ ಹೋಗಲು ಎರಡು ಚೀಲದಂತಹ ಬ್ಯಾಗ್ ತಂದಿದ್ದ ದರೋಡೆಕೋರರು, ಚಿನ್ನದಂಗಡಿಯ ಶೋಕೆಸ್ನಲ್ಲಿಟ್ಟಿದ್ದ ದೊಡ್ಡ ದೊಡ್ಡ ಗಾತ್ರದ ಆಭರಣವನ್ನ ಎರಡಲೇ ನಿಮಿಷದಲ್ಲಿ ಒಂದು ಕಡೆ ಗುಡ್ಡೆ ಹಾಕಿದ್ದಾರೆ. ಬಳಿಕ ಮತ್ತೆರಡು ನಿಮಿಷದಲ್ಲಿ ದೊಡ್ಡ ಬ್ಯಾಗ್ಗೆ ಅವನ್ನು ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
