AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.13ರಂದು ದೆಹಲಿ ಚಲೋ ಪ್ರತಿಭಟನೆ; ಮೈಸೂರಿನಿಂದ ರಾಜಧಾನಿಗೆ ಹೊರಟ ನೂರಾರು ರೈತರು

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13 ರಂದು ಸಂಯುಕ್ತ ಕಿಸಾನ್ ಮೋರ್ಚಾ ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕದಿಂದಲೂ ರೈತರು ಮುಂದಾಗಿದ್ದು, ಮೈಸೂರಿನಿಂದ ನೂರಾರು ಸಂಖ್ಯೆಯಲ್ಲಿ ರೈತರು ರಾಜಧಾನಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಫೆ.13ರಂದು ದೆಹಲಿ ಚಲೋ ಪ್ರತಿಭಟನೆ; ಮೈಸೂರಿನಿಂದ ರಾಜಧಾನಿಗೆ ಹೊರಟ ನೂರಾರು ರೈತರು
ಫೆ.13ರಂದು ದೆಹಲಿ ಚಲೋ ಪ್ರತಿಭಟನೆ; ಮೈಸೂರಿನಿಂದ ರಾಜಧಾನಿಗೆ ಹೊರಟ ನೂರಾರು ರೈತರು
ರಾಮ್​, ಮೈಸೂರು
| Edited By: Rakesh Nayak Manchi|

Updated on: Feb 10, 2024 | 2:28 PM

Share

ಮೈಸೂರು, ಫೆ.10: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13 ರಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಆಯೋಜಿಸಿರುವ ದೆಹಲಿ ಚಲೋ (Delhi Chalo) ಪ್ರತಿಭಟನೆಯಲ್ಲಿ ಕರ್ನಾಟಕದ ರೈತರೂ ಭಾಗಿಯಾಗಲಿದ್ದಾರೆ. ಅದರಂತೆ, ಮೈಸೂರು (Mysuru) ಜಿಲ್ಲೆಯಿಂದ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನೂರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಕೈಗೊಂಡಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಲು ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ರೈತರನ್ನು ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಶಾಂತಕುಮಾರ್, ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕೇಂದ್ರ ಸರ್ಕಾರ, ಅವರು ನೀಡಿದ ವರದಿಯನ್ನು ಯಾಕೆ ಜಾರಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅತ್ಯಾಪ್ತ ಸಚಿವ ಕೆ ವೆಂಕಟೇಶ್ ಕ್ಷೇತ್ರದಲ್ಲಿ ತಾಂಡವವಾಡುತ್ತಿದೆ ದ್ವೇಷದ ರಾಜಕಾರಣ! ರೈತರು ಹೈರಾಣ

ರೈತರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕೇಂದ್ರ ಸರ್ಕಾರ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ ಶಾಂತಕುಮಾರ್, ದೆಹಲಿ ಚಲೋ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ರೈತರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಲೋಕಸಭಾ ಚುನಾವಣೆ ರೈತರ ಪಾಲಿನ ಕರಾಳ ಚುನಾವಣೆ

ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಈ ಬಾರಿಯ ಲೋಕಸಭಾ ಚುನಾವಣೆ ರೈತರ ಪಾಲಿನ ಕರಾಳ ಚುನಾವಣೆಯಾಗಲಿದೆ ಎಂದು ಕುರುಬುರು ಶಾಂತಕುಮಾರ್ ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ