AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಕೊಲೆ ಮಾಡಿ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುಲು ಯತ್ನಿಸಿದ ಪತಿ ಅರೆಸ್ಟ್

ಜೂ.29ರಂದು ಪತಿ ಅಜಿತ್, ಸಾನಿಯಾ ಮಧ್ಯೆ ಜಗಳ ನಡೆದಿತ್ತು. ಜಗಳದ ವೇಳೆ ಅಜಿತ್ ತನ್ನ ಪತ್ನಿ ತಲೆಗೆ ಬಲವಾಗಿ ಹೊಡೆದಿದ್ದ. ಬಳಿಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಸ್ಟ್ರೋಕ್ ಎಂದಿದ್ದ. ಸಾನಿಯಾ ಅಂತ್ಯಕ್ರಿಯೆಗೆ ಬಂದಿದ್ದ ತಾಯಿಗೆ ಈ ಬಗ್ಗೆ ಶಂಕೆ ವ್ಯಕ್ತವಾಗಿತ್ತು.

ಪತ್ನಿಯನ್ನು ಕೊಲೆ ಮಾಡಿ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುಲು ಯತ್ನಿಸಿದ ಪತಿ ಅರೆಸ್ಟ್
ಆರೋಪಿ ಅಜಿತ್
TV9 Web
| Edited By: |

Updated on: Jul 04, 2021 | 1:45 PM

Share

ಬೆಂಗಳೂರು: ಪತ್ನಿ ಹತ್ಯೆಗೈದು ಸ್ಟ್ರೋಕ್ ಎಂದಿದ್ದ ಪತಿ ನಾಟಕ ಬಯಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ 2ನೇ ಹಂತದಲ್ಲಿ ಜೂನ್ 29ರಂದು ಪತ್ನಿ ಸಾನಿಯಾ ಮೇಲೆ ಹಲ್ಲೆ ಮಾಡಿ ಆಕೆಯನ್ನು ಕೊಂದು ಬಳಿಕ ಸ್ಟ್ರೋಕ್ ಎಂದು ಬಿಂಬಿಸಿದ್ದ ಪತಿಯ ನಾಟಕ ಬಯಲಾಗಿದೆ. ಗೃಹಿಣಿ ಮೃತಪಟ್ಟ ಬಳಿಕ ಸಾವಿನ ರಹಸ್ಯ ಬಯಲಾಗಿದೆ.

ಜೂ.29ರಂದು ಪತಿ ಅಜಿತ್, ಸಾನಿಯಾ ಮಧ್ಯೆ ಜಗಳ ನಡೆದಿತ್ತು. ಜಗಳದ ವೇಳೆ ಅಜಿತ್ ತನ್ನ ಪತ್ನಿ ತಲೆಗೆ ಬಲವಾಗಿ ಹೊಡೆದಿದ್ದ. ಬಳಿಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಸ್ಟ್ರೋಕ್ ಎಂದಿದ್ದ. ಸಾನಿಯಾ ಅಂತ್ಯಕ್ರಿಯೆಗೆ ಬಂದಿದ್ದ ತಾಯಿಗೆ ಈ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಕೋಲೇಔಟ್ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯಾಗಿದ್ದಾಗಿ ಮಾಹಿತಿ ಸಿಕ್ಕಿದೆ. ಬಳಿಕ ಪತಿ ಅಜಿತ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ನಡೆದಿರುವುದು ಬಯಲಾಗಿದೆ.

ಆಟೋ ಚಾಲಕ ಅಜಿತ್ ಮತ್ತು ಸಾನಿಯಾ ಪ್ರೀತಿಸಿ ಮದುವೆಯಾಗಿದ್ದರು. ಪತ್ನಿ ಸಾನಿಯಾ ಹೆಚ್ಚಾಗಿ ಹೊರಗೆ ಸುತ್ತಾಡುತ್ತಿದ್ದ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಹೋಗಿ ಹೆಚ್ಚಾಗಿ ಸುತ್ತಾಡದಂತೆ ಸೂಚಿಸಿದ್ದ. ಇದರ ನಡುವೆ ಇಬ್ಬರಿಗೂ ಮದ್ಯ ಸೇವನೆ ಅಭ್ಯಾಸ ಇತ್ತು. ಹೊರಗೆ ಸುತ್ತಾಟ ವಿಚಾರಕ್ಕೆ ಪತಿ, ಪತ್ನಿ ನಡುವೆ ಜೂನ್ 29ರಂದು ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದಾನೆ. ಸದ್ಯ ಮೈಕೋಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದ ರಾಜ್ಯಪಾಲರ ಜೀವನ ಚರಿತ್ರೆ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದ ವಿಶ್ವವಿದ್ಯಾಲಯಗಳ ಕುಲಪತಿಗಳು ಹಿಂತಿರುಗುವಾಗ ಸಿಕ್ಕಿದ್ದು ಪುಸ್ತಕದ 19 ಪ್ರತಿ, ₹68,383 ಬಿಲ್

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ