AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತ್ನಿ ಸತ್ತ ಮೂರು ಗಂಟೆಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಪತಿ

ಅನಾರೋಗ್ಯದಿಂದ ಪತ್ನಿ ಹೊನ್ನಮ್ಮ ತಳವಾರ್(56) ಮೃತಪಟ್ಟಿದ್ದು ಪತ್ನಿ ಮೃತಪಟ್ಟ 3 ಗಂಟೆಯಲ್ಲೇ ಹೃದಯಾಘಾತದಿಂದ ಶಿವಪ್ಪ ತಳವಾರ್(65) ಸಾವನ್ನಪ್ಪಿದ್ದಾರೆ.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತ್ನಿ ಸತ್ತ ಮೂರು ಗಂಟೆಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಪತಿ
ಸಾವಿನಲ್ಲೂ ಒಂದಾದ ದಂಪತಿ
TV9 Web
| Edited By: |

Updated on:Nov 03, 2022 | 3:26 PM

Share

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದಲ್ಲಿ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಅನಾರೋಗ್ಯದಿಂದ ಪತ್ನಿ ಹೊನ್ನಮ್ಮ ತಳವಾರ್(56) ಮೃತಪಟ್ಟಿದ್ದು ಪತ್ನಿ ಮೃತಪಟ್ಟ 3 ಗಂಟೆಯಲ್ಲೇ ಹೃದಯಾಘಾತದಿಂದ ಶಿವಪ್ಪ ತಳವಾರ್(65) ಸಾವನ್ನಪ್ಪಿದ್ದಾರೆ. ಒಟ್ಟಿಗೆ ಶವಸಂಸ್ಕಾರ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿ ಕತ್ತು ಸೀಳಿದ ಪತ್ನಿ

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಪತಿಯ ಕತ್ತು ಸೀಳಿ ಹತ್ಯೆಗೈದ ಪತ್ನಿ ಲಕ್ಷ್ಮೀಯನ್ನು ಸಿರವಾರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದೇ ಅಕ್ಟೋಬರ್ 6 ರಂದು ಬಸವರಾಜ್(39) ನನ್ನು ಲಕ್ಷ್ಮೀ ಕೊಲೆ ಮಾಡಿದ್ದಾಳೆ. ಈ ಹಿಂದೆ ಬಸವರಾಜ್ ಹಾಗೂ ಲಕ್ಷ್ಮೀ ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದರು. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಜೊತೆ ಲಕ್ಷ್ಮೀ ಅನೈತಿಕ ಸಂಬಂಧ ಹೊಂದಿದ್ದರು. ನಂತರ ಹುಟ್ಟೂರು ಮಲ್ಲಟಕ್ಕೆ ಶಿಫ್ಟ್ ಆದ ಬಳಿಕವೂ ಅದು ಮುಂದುವರಿದಿತ್ತು. ನಿತ್ಯ ಗಂಟೆಗಟ್ಟಲೇ ಫೋನ್ ನಲ್ಲಿ ಮಾತನಾಡುತ್ತಿದ್ದ ಹಿನ್ನೆಲೆ ಪತಿ-ಪತ್ನಿ ನಡುವೆ ಪತಿ ನಿತ್ಯ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಒಮ್ಮೆ ಪತ್ನಿಯ ಮೊಬೈಲ್ ಮಾರಿ, ಕಂಠಪೂರ್ತಿ ಕುಡಿದು ಬಂದಿದ್ದ. ಇದೇ ಕೋಪದಲ್ಲಿದ್ದ ಪತ್ನಿ ಅಕ್ಟೋಬರ್ 6 ರಂದು ರಾತ್ರಿ ದಸರಾ ಹಬ್ಬದಂದು, ಬನ್ನಿ ನೀಡಿ ಮನೆಗೆ ಬಂದಿದ್ದ ಪತಿಯ ಜೊತೆ ಜಗಳಕ್ಕೆ ಇಳಿದಿದ್ದಳು. ಈ ವೇಳೆ ಜಗಳ ತಾರಕ್ಕಕ್ಕೇರಿ ಅದೇ ದಿನ ರಾತ್ರಿ ಚಾಕುವಿನಿಂದ ಪತಿ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ನಂತರ ರಾತ್ರಿ ಹೊರಗಡೆ ಬಂದು ಮಲಗಿ, ತನಗೆ ಗೊತ್ತಿಲ್ಲದ ರೀತಿ ಹೈಡ್ರಾಮಾ ಮಾಡಿದ್ದಾಳೆ. ತನಿಖೆ ಚುರಕುಗೊಳಿಸಿದಾಗ ಅಕ್ರಮ ಸಂಬಂಧ ಬಯಲಾಗಿದ್ದು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಹಲವೆಡೆ ಮಳೆ ಆರಂಭ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 4 ದಿನ ಮಳೆ

ನಕಲಿ ಕೀ ಬಳಸಿ ಫೋಟೊ ಸ್ಟೋಡಿಯೋಗೆ ಕಳ್ಳರ ಕನ್ನ

ಕಲಬುರಗಿ ಜಿಲ್ಲೆ ಆಳಂದ ಪಟ್ಟಣದಲ್ಲಿರುವ ಬಿ.ಕೆ ಫೋಟೋ ಸ್ಟೋಡಿಯೋಗೆ ಕಳ್ಳರು ನುಗ್ಗಿ 3 ಡಿಜಿಟಲ್ ಕ್ಯಾಮೆರಾ, 1 ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ. ಸುಮಾರು 4.50 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಕ್ಯಾಮೆರಾ ಕಳೆದುಕೊಂಡು ಮಾಲೀಕ ಸಂತೋಷ್ ಕಂಗಾಲಾಗಿದ್ದಾರೆ.

ATM ಮಷೀನ್ ನಲ್ಲಿ ಹಣ ಕಳ್ಳತನಕ್ಕೆ ಯತ್ನ, ಸಿಸಿ ಕ್ಯಾಮೆರಾದಲ್ಲಿ‌ ದೃಶ್ಯ ಸೆರೆ

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಕೌಲಪೇಟೆ ಏರಿಯಾದಲ್ಲಿರುವ ಎಟಿಎಂನಿಂದ ಹಣ ಕಳ್ಳತನಕ್ಕೆ ಯತ್ನಿಸಿದ್ದು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಬಿಎಸ್ ಬ್ಯಾಂಕ್ ನ ಎಟಿಎಂ ನಲ್ಲಿನ ಹಣ ದೋಚಿ ಎಸ್ಕೇಪ್ ಆಗಲು ಮುಂದಾದ ಕಳ್ಳನನ್ನು ಬಂಧಿಸಲಾಗಿದೆ.

ಅಕ್ಟೋಬರ್ 31 ರಂದು ನಸುಕಿನ ಜಾವ ಎಟಿಎಂನಲ್ಲಿ ಹಣ ದೋಚಲು ಹೋಗಿದ್ದ ಹಸನ್ ಎಟಿಎಂನಲ್ಲಿನ ಹಣ ದೋಚಲು ಯತ್ನಿಸಿ ವಿಫಲನಾಗಿದ್ದಾನೆ. ಬಂಧಿತರ ಆರೋಪಿ ಮೇಲೆ 12 ಪ್ರಕರಣಗಳಿವೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:26 pm, Thu, 3 November 22

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್