Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಒಂದಾದ ಹಾಸನ ದಂಪತಿ; ಪತ್ನಿ ಮೃತಪಟ್ಟು 15 ನಿಮಿಷದಲ್ಲಿ ಪತಿಗೆ ಹೃದಯಾಘಾತ

ಇಬ್ಬರಲ್ಲಿ ಯಾರಿಗೇ ಏನಾದರೂ ಆದರೆ ಸಹಿಸುವ ಶಕ್ತಿ ಗಂಡ- ಹೆಂಡತಿಗೆ ಇರಲ್ಲ. ಇದಕ್ಕೆ ಉದಾಹರಣೆಯಾಗಿ ಹಾಸನದಲ್ಲೊಂದು ಘಟನೆ ನಡೆದಿದೆ. ಮದುವೆಯಾದ ದಿನದಿಂದ ಒಟ್ಟಿಗೆ ಜೀವನ ಸಾಗಿಸುತ್ತಿದ್ದ ದಂಪತಿ ಸಾವಿನ ಪಯಣವನ್ನೂ ಒಟ್ಟಿಗೆ ಮುಂದುವರೆಸಿದ್ದಾರೆ.

ಸಾವಿನಲ್ಲೂ ಒಂದಾದ ಹಾಸನ ದಂಪತಿ; ಪತ್ನಿ ಮೃತಪಟ್ಟು 15 ನಿಮಿಷದಲ್ಲಿ ಪತಿಗೆ ಹೃದಯಾಘಾತ
ಸಾವಿನಲ್ಲಿ ಒಂದಾದ ದಂಪತಿ
Follow us
TV9 Web
| Updated By: sandhya thejappa

Updated on: Jun 30, 2021 | 12:30 PM

ಹಾಸನ: ಗಂಡ ಹೆಂಡತಿ ಸಂಬಂಧಕ್ಕೆ ಅದರದೇ ಆದ ಅರ್ಥವಿದೆ. ಜಗಳವಾಡಬಹುದು, ಕಿತ್ತಾಡಬಹುದು. ಆದರೆ ಸುಖ, ದುಃಖವನ್ನು ಸಮಾನವಾಗಿ ಸ್ವೀಕರಿಸಿ ಜೀವನ ಸಾಗಿಸುತ್ತಾರೆ. ಇನ್ನೊಬ್ಬರಿಗೆ ಮಾದರಿಯಾಗುವಂತೆ ಬದುಕುತ್ತಾರೆ. ಇಬ್ಬರಲ್ಲಿ ಯಾರಿಗೇ ಏನಾದರೂ ಆದರೆ ಸಹಿಸುವ ಶಕ್ತಿ ಗಂಡ- ಹೆಂಡತಿಗೆ ಇರಲ್ಲ. ಇದಕ್ಕೆ ಉದಾಹರಣೆಯಾಗಿ ಹಾಸನದಲ್ಲೊಂದು ಘಟನೆ ನಡೆದಿದೆ. ಮದುವೆಯಾದ ದಿನದಿಂದ ಒಟ್ಟಿಗೆ ಜೀವನ ಸಾಗಿಸುತ್ತಿದ್ದ ದಂಪತಿ ಸಾವಿನ ಪಯಣವನ್ನೂ ಒಟ್ಟಿಗೆ ಮುಂದುವರೆಸಿದ್ದಾರೆ.

ಅನಾರೋಗ್ಯದಿಂದ ಪತ್ನಿ ಸಾವಿಗೀಡಾದ ಹದಿನೈದು ನಿಮಿಷಗಳ ಅಂತರದಲ್ಲಿ ಪತಿಯೂ ಮೃತಪಟ್ಟಿದ್ದು, ದಂಪತಿಗಳು ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್​ನಲ್ಲಿ ನಡೆದಿದೆ. ಇಲ್ಲಿನ ಅಮ್ಮನಹಳ್ಳಿ ಬಡಾವಣೆಯಲ್ಲಿ ಪತ್ನಿ ಜಯಮ್ಮ(50) ಹಾಗು ಜೆ.ಡಿ.ರಾಜೇಗೌಡ ಮೃತರು. ಸೋಮವಾರ ಬೆಳಿಗ್ಗೆ ಅನಾರೋಗ್ಯದಿಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ಆಗಿರುವ ಜಯಮ್ಮ ಮೃತಪಟ್ಟಿದ್ದರು.

ಜಯಮ್ಮನವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುವಾಗಲೇ ಪತ್ನಿಯ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದ ರಾಜಣ್ಣ ಕೂಡ ಕುಸಿದುಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 25 ವರ್ಷಗಳ ವೈವಾಹಿಕ ಜೀವನ ನಡೆಸಿದ್ದ ಈ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ತಮ್ಮ ಜೊತೆ ಜೊತೆಯ ಪಯಣವನ್ನು ಸಾವಿನಲ್ಲೂ ಮುಂದುವೆಸಿದ್ದಾರೆ.

ಇದನ್ನೂ ಓದಿ

Delta Plus variant: ಡೆಲ್ಟಾ ಪ್ಲಸ್ ರೂಪಾಂತರಿ ಅಪಾಯಕಾರಿಯೇ? ಹೊಸ ಕೊವಿಡ್ ರೂಪಾಂತರಿ ಬಗ್ಗೆ ತಜ್ಞರು ಹೇಳುವುದೇನು?

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು; ಪರಿಹಾರದ ಮೊತ್ತವನ್ನು ಸರ್ಕಾರ ನಿರ್ಧರಿಸಲಿ – ಸುಪ್ರೀಂಕೋರ್ಟ್​

(husband had a heart attack within 15 minutes of his wife death in hassan)

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?