AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ

ಮದುವೆಯಾಗಿದ್ದರೂ ಅಕ್ರಮ ಸಂಬಂಧ ಬೆಳೆಸಿ ಕೊಲೆ ಮಾಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಅಲ್ಲೊಂದು ಇಲ್ಲೊಂದು ಎಂಬಂತೆ ನಡೆಯುತ್ತಿದೆ. ಇದೀಗ, ಬೇರೊಬ್ಬಳ ಮೋಜಿಗೆ ಬಿದ್ದಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಎಸೆದ ಘಟನೆ ದಾವಣಗೆರೆ ತಾಲ್ಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ.

ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ
ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಮೃತದೇಹ ಕಟ್ಟಿ ಕೆರೆಗೆ ಎಸೆದ ಪತಿ (ಸಾಂದರ್ಭಿಕ ಚಿತ್ರ)
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: Rakesh Nayak Manchi|

Updated on: Jan 25, 2024 | 2:47 PM

Share

ದಾವಣಗೆರೆ, ಜ.25: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ (Davanagere) ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ (21) ಕೊಲೆಯಾದ ಮಹಿಳೆ‌ಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ.

ಐದು ವರ್ಷಗಳ ಹಿಂದೆ ಸಾಸಲುಹಳ್ಳ ಗ್ರಾಮದ ಕಾವ್ಯ ಎಂಬಾಕೆಯನ್ನು ಸಚಿನ್ ಮದುವೆಯಾಗಿದ್ದ. ದಾವಣಗೆರೆ ತಾಲೂಕಿನ ಕಡ್ಲೆಬಾಳು ಗ್ರಾಮದ ಚೈತ್ರ (21) ಎನ್ನುವ ಯುವತಿ ಜೊತೆ ಸಂಬಂಧ ಇಟ್ಟುಕೊಂಡು ಕಾವ್ಯಾಳನ್ನು ಮದುವೆಯಾಗಿದ್ದನು.

ಇದನ್ನೂ ಓದಿ: ಮಣ್ಣಿನ ಮೋಹಕ್ಕೆ ಹೊಲದಲ್ಲಿ ಕೊಲೆಯಾದ ಮಹಿಳೆ, ಡೇಟ್ ಫಿಕ್ಸ್ ಮಾಡಿ‌ ಹೊಡಿತೀನಿ ಎಂದಿದ್ದ ಹಂತಕ! ಯಾಕೆ?

ಈ ಅಕ್ರಮ ಸಂಬಂಧಕ್ಕೆ ಕಾವ್ಯಾ ಅಡ್ಡಿಯಾಗುತ್ತಿದ್ದಾಳೆ ಎಂದು ಸಚಿನ್ ಮತ್ತು ಚೈತ್ರಾ ಸೇರಿಕೊಂಡು ಕಾವ್ಯಾಳನ್ನು ಕೊಲೆ ಮಾಡಿದ್ದಾರೆ. ಬಳಿಕ ಗೋಣಿ ಚೀಲದಲ್ಲಿ ಕಾವ್ಯಾಳ ಮೃತದೇಹವನ್ನು ತುಂಬಿಸಿ ಕೊಡಗನೂರು ಕೆರೆಗೆ ಹಾಕಿದ್ದರು. 10 ದಿನಗಳ ಹಿಂದೆ ನಡೆದ ಈ ಕೊಲೆ ಪ್ರಕರಣ ಇದೀಗ ಬಯಲಿಗೆ ಬಂದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ