AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ

ಮದುವೆಯಾಗಿದ್ದರೂ ಅಕ್ರಮ ಸಂಬಂಧ ಬೆಳೆಸಿ ಕೊಲೆ ಮಾಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಅಲ್ಲೊಂದು ಇಲ್ಲೊಂದು ಎಂಬಂತೆ ನಡೆಯುತ್ತಿದೆ. ಇದೀಗ, ಬೇರೊಬ್ಬಳ ಮೋಜಿಗೆ ಬಿದ್ದಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಎಸೆದ ಘಟನೆ ದಾವಣಗೆರೆ ತಾಲ್ಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ.

ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ
ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಮೃತದೇಹ ಕಟ್ಟಿ ಕೆರೆಗೆ ಎಸೆದ ಪತಿ (ಸಾಂದರ್ಭಿಕ ಚಿತ್ರ)
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jan 25, 2024 | 2:47 PM

Share

ದಾವಣಗೆರೆ, ಜ.25: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ (Davanagere) ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ (21) ಕೊಲೆಯಾದ ಮಹಿಳೆ‌ಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ.

ಐದು ವರ್ಷಗಳ ಹಿಂದೆ ಸಾಸಲುಹಳ್ಳ ಗ್ರಾಮದ ಕಾವ್ಯ ಎಂಬಾಕೆಯನ್ನು ಸಚಿನ್ ಮದುವೆಯಾಗಿದ್ದ. ದಾವಣಗೆರೆ ತಾಲೂಕಿನ ಕಡ್ಲೆಬಾಳು ಗ್ರಾಮದ ಚೈತ್ರ (21) ಎನ್ನುವ ಯುವತಿ ಜೊತೆ ಸಂಬಂಧ ಇಟ್ಟುಕೊಂಡು ಕಾವ್ಯಾಳನ್ನು ಮದುವೆಯಾಗಿದ್ದನು.

ಇದನ್ನೂ ಓದಿ: ಮಣ್ಣಿನ ಮೋಹಕ್ಕೆ ಹೊಲದಲ್ಲಿ ಕೊಲೆಯಾದ ಮಹಿಳೆ, ಡೇಟ್ ಫಿಕ್ಸ್ ಮಾಡಿ‌ ಹೊಡಿತೀನಿ ಎಂದಿದ್ದ ಹಂತಕ! ಯಾಕೆ?

ಈ ಅಕ್ರಮ ಸಂಬಂಧಕ್ಕೆ ಕಾವ್ಯಾ ಅಡ್ಡಿಯಾಗುತ್ತಿದ್ದಾಳೆ ಎಂದು ಸಚಿನ್ ಮತ್ತು ಚೈತ್ರಾ ಸೇರಿಕೊಂಡು ಕಾವ್ಯಾಳನ್ನು ಕೊಲೆ ಮಾಡಿದ್ದಾರೆ. ಬಳಿಕ ಗೋಣಿ ಚೀಲದಲ್ಲಿ ಕಾವ್ಯಾಳ ಮೃತದೇಹವನ್ನು ತುಂಬಿಸಿ ಕೊಡಗನೂರು ಕೆರೆಗೆ ಹಾಕಿದ್ದರು. 10 ದಿನಗಳ ಹಿಂದೆ ನಡೆದ ಈ ಕೊಲೆ ಪ್ರಕರಣ ಇದೀಗ ಬಯಲಿಗೆ ಬಂದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್