AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಶೀಲ ಶಂಕಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿ; ಎರಡು ಮುಗ್ಧ ಕಂದಮ್ಮಗಳು ಅನಾಥ

ಅವರಿಬ್ಬರು ಕೂಲಿ ನಾಲಿ ಮಾಡಿಕೊಂಡು ಬದಕು ಸಾಗಿಸಲು ಊರು ಬಿಟ್ಟು ಊರಿಗೆ ಬಂದಿದ್ದರು‌. ಆದ್ರೆ ಹಾಗೇ ಬಂದ ದಂಪತಿಗಳು ಸುಖವಾಗಿ ಜೀವನ ಸಾಗಿಸುತ್ತಿದ್ದರು. ಹೀಗಿರುವಾಗ ಆ ಪಾಪಿ ಪತಿಗೆ ಪತ್ನಿಯ ನಡತೆಯ ಮೇಲೆ ಅನುಮಾನ ಶುರುವಾಗಿತ್ತು. ಪ್ರತಿ ದಿನವೂ ಜಗಳ ತೆಗೆಯುತ್ತಿದ್ದ ಕಿರಾತಕ ಆಕೆಯನ್ನೇ ಬಲಿ ಪಡೆದಿದ್ದಾನೆ.

ಪತ್ನಿ ಶೀಲ ಶಂಕಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿ; ಎರಡು ಮುಗ್ಧ ಕಂದಮ್ಮಗಳು ಅನಾಥ
ಶವಾಗಾರ
TV9 Web
| Edited By: ಆಯೇಷಾ ಬಾನು|

Updated on: Jul 12, 2021 | 7:53 AM

Share

ಹುಬ್ಬಳ್ಳಿ: ಗದಗ ಮೂಲದ ಸೈಫ್ ಅಲಿ ಈಟಿ ಎಂಬಾತ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಇವರು ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮದಲ್ಲಿ ವಾಸವಾಗಿದ್ದರು. ಆದ್ರೆ ಸೈಫ್ ತನ್ನ ಹೆಂಡತಿಯ ನೆತ್ತರು ಹರಿಸಿದ್ದಾನೆ. ಈತ ತನ್ನ ಪತ್ನಿ ಮೆಹರುನ್ನಿಸಾ ಬೇರೆಯವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ದಿನ ಜಗಳ ತೆಗೆಯುತ್ತಿದ್ದನಂತೆ. ಹೀಗೆ ಮೊನ್ನೆ ಕೂಡ ಜಗಳ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಅಲ್ಲೇ ಇದ್ದ ಕಲ್ಲನ್ನ ಪತ್ನಿಯ‌ ಮೇಲೆ ಎತ್ತಿ ಹಾಕಿದ್ದಾನೆ.

ಇವರು ಮದುವೆಯಾಗಿ ಹತ್ತು ವರ್ಷವಾಗಿದ್ದು, ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗದಗನಲ್ಲೂ ಪ್ರತಿ ದಿನ ಜಗಳ‌ ಮಾಡಿ ಪೊಲೀಸ್ ಠಾಣೆ‌ ಮೆಟ್ಟಿಲೆರುತ್ತಿದ್ದ ಇವರನ್ನ ಸಂಬಂಧಿಕರು ಹುಬ್ಬಳ್ಳಿಯ ಕುಸುಗಲ್‌ಗೆ ಕಳುಹಿಸಿದ್ರು. ಇಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಸೈಫ್ ಅಲಿ ಬಾಡಿಗೆ ಮನೆ ಮಾಡಿ ಜೀವನ ಸಾಗಿಸುತ್ತಿದ್ದ. ಆದ್ರೆ ಅದ್ಯಾಕೋ ಏನೋ ಪತ್ನಿಯ ನಡತೆಯ ಮೇಲೆ ಅನುಮಾನ ಪಡಲು ಶುರು ಮಾಡಿದ್ದ. ಹೀಗಾಗಿ ಪ್ರತಿದಿನವೂ ಜಗಳ ತೆಗೆಯುತ್ತಿದ್ದ. ನಿನ್ನೆ ಜಗಳ ಮಾಡಿ ಸಿಟ್ಟಿನಲ್ಲಿ ಹೆಂಡತಿ ಮೇಲೆ ಕಲ್ಲು ಹಾಕಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಹೆಂಡತಿಯನ್ನ ಕಾಲು ಜಾರಿ ಬಿದ್ದಿದ್ದಾಳೆ ಎಂದು ಕಿಮ್ಸ್‌ಗೆ ಅಡ್ಮಿಟ್ ಮಾಡಿದ್ದಾನೆ. ಆದ್ರೆ ಆಕೆಯ ಜೀವ ಹೋದಾಗ ಸಂಬಂಧಿಕರಿಗೆ ಕೊಲೆಯ ರಹಸ್ಯ ಗೊತ್ತಾಗಿದೆ.

ಸಧ್ಯ ಪ್ರಕರಣ ದಾಖಲಿಸಿಕೊಂಡಿರೋ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಆದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಅನ್ನೋ ಹಾಗೇ ಇಲ್ಲಿ ಎರಡೂ ಮುಗ್ಧ ಕಂದಮ್ಮಗಳು ಅನಾಥವಾಗಿದ್ದು ನಿಜಕ್ಕೂ ದುರಂತವೇ ಸರಿ.

(Husband kills wife in doubt of having illegal relationship with others in hubli)

ಇದನ್ನೂ ಓದಿ: Love Failure: ಪ್ರೀತಿಸಿ ಕೈಕೊಟ್ಟ ಮಾಜಿ ಪ್ರೇಯಸಿಯನ್ನು ಕೊಲೆ ಮಾಡಿ ಭಗ್ನಪ್ರೇಮಿಯೂ ಹೆಣವಾದ!

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ