AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಶೀಲ ಶಂಕಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿ; ಎರಡು ಮುಗ್ಧ ಕಂದಮ್ಮಗಳು ಅನಾಥ

ಅವರಿಬ್ಬರು ಕೂಲಿ ನಾಲಿ ಮಾಡಿಕೊಂಡು ಬದಕು ಸಾಗಿಸಲು ಊರು ಬಿಟ್ಟು ಊರಿಗೆ ಬಂದಿದ್ದರು‌. ಆದ್ರೆ ಹಾಗೇ ಬಂದ ದಂಪತಿಗಳು ಸುಖವಾಗಿ ಜೀವನ ಸಾಗಿಸುತ್ತಿದ್ದರು. ಹೀಗಿರುವಾಗ ಆ ಪಾಪಿ ಪತಿಗೆ ಪತ್ನಿಯ ನಡತೆಯ ಮೇಲೆ ಅನುಮಾನ ಶುರುವಾಗಿತ್ತು. ಪ್ರತಿ ದಿನವೂ ಜಗಳ ತೆಗೆಯುತ್ತಿದ್ದ ಕಿರಾತಕ ಆಕೆಯನ್ನೇ ಬಲಿ ಪಡೆದಿದ್ದಾನೆ.

ಪತ್ನಿ ಶೀಲ ಶಂಕಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿ; ಎರಡು ಮುಗ್ಧ ಕಂದಮ್ಮಗಳು ಅನಾಥ
ಶವಾಗಾರ
TV9 Web
| Edited By: |

Updated on: Jul 12, 2021 | 7:53 AM

Share

ಹುಬ್ಬಳ್ಳಿ: ಗದಗ ಮೂಲದ ಸೈಫ್ ಅಲಿ ಈಟಿ ಎಂಬಾತ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಇವರು ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮದಲ್ಲಿ ವಾಸವಾಗಿದ್ದರು. ಆದ್ರೆ ಸೈಫ್ ತನ್ನ ಹೆಂಡತಿಯ ನೆತ್ತರು ಹರಿಸಿದ್ದಾನೆ. ಈತ ತನ್ನ ಪತ್ನಿ ಮೆಹರುನ್ನಿಸಾ ಬೇರೆಯವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ದಿನ ಜಗಳ ತೆಗೆಯುತ್ತಿದ್ದನಂತೆ. ಹೀಗೆ ಮೊನ್ನೆ ಕೂಡ ಜಗಳ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಅಲ್ಲೇ ಇದ್ದ ಕಲ್ಲನ್ನ ಪತ್ನಿಯ‌ ಮೇಲೆ ಎತ್ತಿ ಹಾಕಿದ್ದಾನೆ.

ಇವರು ಮದುವೆಯಾಗಿ ಹತ್ತು ವರ್ಷವಾಗಿದ್ದು, ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗದಗನಲ್ಲೂ ಪ್ರತಿ ದಿನ ಜಗಳ‌ ಮಾಡಿ ಪೊಲೀಸ್ ಠಾಣೆ‌ ಮೆಟ್ಟಿಲೆರುತ್ತಿದ್ದ ಇವರನ್ನ ಸಂಬಂಧಿಕರು ಹುಬ್ಬಳ್ಳಿಯ ಕುಸುಗಲ್‌ಗೆ ಕಳುಹಿಸಿದ್ರು. ಇಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಸೈಫ್ ಅಲಿ ಬಾಡಿಗೆ ಮನೆ ಮಾಡಿ ಜೀವನ ಸಾಗಿಸುತ್ತಿದ್ದ. ಆದ್ರೆ ಅದ್ಯಾಕೋ ಏನೋ ಪತ್ನಿಯ ನಡತೆಯ ಮೇಲೆ ಅನುಮಾನ ಪಡಲು ಶುರು ಮಾಡಿದ್ದ. ಹೀಗಾಗಿ ಪ್ರತಿದಿನವೂ ಜಗಳ ತೆಗೆಯುತ್ತಿದ್ದ. ನಿನ್ನೆ ಜಗಳ ಮಾಡಿ ಸಿಟ್ಟಿನಲ್ಲಿ ಹೆಂಡತಿ ಮೇಲೆ ಕಲ್ಲು ಹಾಕಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಹೆಂಡತಿಯನ್ನ ಕಾಲು ಜಾರಿ ಬಿದ್ದಿದ್ದಾಳೆ ಎಂದು ಕಿಮ್ಸ್‌ಗೆ ಅಡ್ಮಿಟ್ ಮಾಡಿದ್ದಾನೆ. ಆದ್ರೆ ಆಕೆಯ ಜೀವ ಹೋದಾಗ ಸಂಬಂಧಿಕರಿಗೆ ಕೊಲೆಯ ರಹಸ್ಯ ಗೊತ್ತಾಗಿದೆ.

ಸಧ್ಯ ಪ್ರಕರಣ ದಾಖಲಿಸಿಕೊಂಡಿರೋ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಆದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಅನ್ನೋ ಹಾಗೇ ಇಲ್ಲಿ ಎರಡೂ ಮುಗ್ಧ ಕಂದಮ್ಮಗಳು ಅನಾಥವಾಗಿದ್ದು ನಿಜಕ್ಕೂ ದುರಂತವೇ ಸರಿ.

(Husband kills wife in doubt of having illegal relationship with others in hubli)

ಇದನ್ನೂ ಓದಿ: Love Failure: ಪ್ರೀತಿಸಿ ಕೈಕೊಟ್ಟ ಮಾಜಿ ಪ್ರೇಯಸಿಯನ್ನು ಕೊಲೆ ಮಾಡಿ ಭಗ್ನಪ್ರೇಮಿಯೂ ಹೆಣವಾದ!

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು