AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಲ ಶಂಕಿಸಿ ಪತ್ನಿಯನ್ನ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ: ಕೊರಿಯೊಗ್ರಾಫರ್ ದುರಂತ ಸಾವು

ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್​ನ ಮನೆಯಲ್ಲಿ ನಡೆದಿದೆ. ಅಲ್ಲಿಗೆ ಕೊರಿಯೊಗ್ರಾಫರ್​ ಆಗಿದ್ದ ಪತ್ನಿಯ ದುರಂತ ಅಂತ್ಯವಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಕೆಂಗೇರಿ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಶೀಲ ಶಂಕಿಸಿ ಪತ್ನಿಯನ್ನ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ: ಕೊರಿಯೊಗ್ರಾಫರ್ ದುರಂತ ಸಾವು
ಶೀಲ ಶಂಕಿಸಿ ಪತ್ನಿಯನ್ನ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ, ಕೊರಿಯೊಗ್ರಾಫರ್ ದುರಂತ ಸಾವು
Shivaprasad B
| Edited By: |

Updated on: Aug 28, 2024 | 9:00 PM

Share

ಬೆಂಗಳೂರು, ಆಗಸ್ಟ್​​ 28: ಶೀಲ ಶಂಕಿಸಿ ಪತಿಯಿಂದ (husband) ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್​ನ ಮನೆಯಲ್ಲಿ ದುಷ್ಕೃತ್ಯ ನಡೆದಿದೆ. ಪತ್ನಿ ನವ್ಯಾ(24)ರನ್ನು ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಪತಿ ಕಿರಣ್ ಕೊಲೆ ಮಾಡಿದ್ದಾರೆ. ಕಳೆದ 3 ವರ್ಷಗಳ ಹಿಂದೆ ವಿವಾಹವಾಗಿದ್ದರು. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ಕಿರಣ್​​ ಕ್ಯಾಬ್​ ಚಾಲಕನಾಗಿದ್ದ. ಖಾಸಗಿ ಶಾಲೆಯಲ್ಲಿ ಮಕ್ಕಳಿಗೆ ನೃತ್ಯ  ಹೇಳಿಕೊಡುತ್ತಿದ್ದ ಮೃತ ನವ್ಯಾ ಕೊರಿಯೊಗ್ರಾಫರ್ ಆಗಿದ್ದರು. ಆರೋಪಿ ವಶಕ್ಕೆ ಪಡೆದು ಕೆಂಗೇರಿ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಕೆಂಪೇಗೌಡ ಏರ್​​ಪೋರ್ಟ್​ ಟರ್ಮಿನಲ್​​ನಲ್ಲಿ ಭೀಕರ ಕೊಲೆ

ಪತ್ನಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಹಿನ್ನೆಲೆ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಮತ್ತೊಬ್ಬ ವ್ಯಕ್ತಿ ಭೀಕರ ಕೊಲೆ ಮಾಡಿರುವಂತಹ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ಏರ್​​ಪೋರ್ಟ್​ ಟರ್ಮಿನಲ್​​ 1ರಲ್ಲಿ ನಡೆದಿದೆ.

ಇದನ್ನೂ ಓದಿ: ಅಯ್ಯೋ ದೇವರೇ…ಬುದ್ದಿ ಹೇಳಿದಕ್ಕೆ ಹೆತ್ತ ತಾಯಿಯನ್ನೇ ಕೊಂದ ಮಗ, ಬಳಿಕ ಮಾಡಿದ್ದೇನು ಗೊತ್ತಾ?

ಟ್ರಾಲಿ ಆಪರೇಟರ್ ರಾಮಕೃಷ್ಣಪ್ಪ ಹತ್ಯೆಗೊಳಗಾದ ವ್ಯಕ್ತಿ. ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಮೇಶ್​ನಿಂದ ಕೃತ್ಯವೆಸಗಲಾಗಿದೆ. ಕೆಂಪೇಗೌಡ ಏರ್​​ಪೋರ್ಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ: 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟಪಾಡಿಯ ಸೈಯದ್‌ ಮುಸ್ತಾಕ್‌ (45) ಬಂಧಿತ ಆರೋಪಿ. 1993 ರ ಜು.21 ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ ನಾಯ್ಕ್ ರವರ ಗದ್ದೆಯ ಬಳಿ ಮೇಯಲು ಬಿಟ್ಟಿದ್ದ ಎರಡು ದನಗಳನ್ನು ಯಾರೋ ಕಳವು ಮಾಡಿಕೊಂಡು ಹೋದ ಬಗ್ಗೆ ದೇವೇಂದ್ರ ನಾಯ್ಕ ರವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಸಹಾಯ ನೆಪದಲ್ಲಿ ಮೋಸ ಮಾಡಿ ಇಡೀ ಕುಟುಂಬವನ್ನೇ ಮನೆ ಬಿಟ್ಟು ಓಡಿಸಿದ್ದ ಪೊಲೀಸ್ ಪೇದೆ ಅರೆಸ್ಟ್

ಅಂದಿನ ತನಿಖಾಧಿಕಾರಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿತನ ವಿರುದ್ದ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನಂತರ ಈತನು ಸುಮಾರು 21 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಈ ಬಗ್ಗೆ ಈಗಿನ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ದೇವರಾಜ ಟಿ.ವಿ ರವರ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರಸನ್ನ ಕಾರ್ಯಾಚರಣೆ ನಡೆಸಿ ಆ.24 ರಂದು ಕಟಪಾಡಿಯ ಮಣಿಪುರ ಗುಜ್ಜಿ ಹೌಸ್‌ ಬಳಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!