AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ತವರು ಮನೆ ಸೇರಿದ್ದ ಪತ್ನಿಯನ್ನು ಭೀಕರವಾಗಿ ಕೊಂದ ಪತಿ

ತವರು ಮನೆ ಸೇರಿದ್ದ ಪತ್ನಿಯನ್ನು ಪತಿ ಭೀಕರವಾಗಿ ಕೊಲೆ ಮಾಡಿದ್ದು, ಈ ವೇಳೆ ತಡೆಯಲು ಬಂದ ಅತ್ತೆಯನ್ನೂ ಕೊಲೆ ಮಾಡಲು ಯತ್ನಿಸಿರುವ ಘಟನೆ ಮೈಸೂರಿನ ಕುಂಬಾರಕೊಪ್ಪಲಿದಲ್ಲಿ ನಡೆದಿದೆ.

Mysore News: ತವರು ಮನೆ ಸೇರಿದ್ದ ಪತ್ನಿಯನ್ನು ಭೀಕರವಾಗಿ ಕೊಂದ ಪತಿ
ದಂಪತಿ ಮಾದೇಶ್​ ಮತ್ತು ಹರ್ಷಿತಾ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Jul 16, 2023 | 7:27 AM

Share

ಮೈಸೂರು: ತವರು ಮನೆ ಸೇರಿದ್ದ ಪತ್ನಿಯನ್ನು (Wife) ಪತಿ (Husband) ಭೀಕರವಾಗಿ ಕೊಲೆ ಮಾಡಿದ್ದು, ಈ ವೇಳೆ ತಡೆಯಲು ಬಂದ ಅತ್ತೆಯನ್ನೂ (Mother in Law) ಕೊಲೆ ಮಾಡಲು ಯತ್ನಿಸಿರುವ ಘಟನೆ ಮೈಸೂರಿನ (Mysore) ಕುಂಬಾರಕೊಪ್ಪಲಿದಲ್ಲಿ ನಡೆದಿದೆ. ಹರ್ಷಿತಾ (21) ಮೃತ ದುರ್ದೈವಿ. ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಳ್ಳಿ ಗ್ರಾಮದ ನಿವಾಸಿ ಮಾದೇಶ್ (30) ಕೊಲೆ ಆರೋಪಿ. ಒಂದು ವರ್ಷದ ಹಿಂದೆ ಇಬ್ಬರು ಮದುವೆಯಾಗಿದ್ದರು. ದಂಪತಿ ಪ್ರಾರಂಭದ ದಿನಗಳಲ್ಲಿ ಅನ್ಯೋನ್ಯವಾಗಿಯೇ ಇದ್ದರು. ಆದರೆ ಈ ನಡುವೆ ಕ್ಷುಲ್ಲಕ ಕಾರಣಕ್ಕೆ ವಿರಸ ಉಂಟಾಗಿದೆ. ಮಾದೇಶ್ ಆಗಾಗ ಕಿರಿಕ್ ಮಾಡುತ್ತಿದ್ದು, ಹರ್ಷಿತಳನ್ನು ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದನು.

ಅಲ್ಲದೇ ಮಾದೇಶ್​ ಪತ್ನಿಯ ಜೊತೆ ಮಲಗುವಾಗ ಪಕ್ಕದಲ್ಲಿ ಮಚ್ಚು ಇಟ್ಟುಕೊಂಡು ಮಲಗುತ್ತಿದ್ದನು. ಇದರಿಂದ ಹೆದರಿದ್ದ ಪತ್ನಿ ಹರ್ಷಿತಾ ತವರು ಮನೆ ಸೇರಿದ್ದಳು. ಹೆದರಿ ತವರು ಮನೆ ಸೇರಿದ್ದ ಹರ್ಷಿತಾಳನ್ನು ವಾಪಸ್ ತನ್ನ​ ಮನೆಗೆ ಕರೆದುಕೊಂಡು ಬರಲು ಮಾದೇಶ್ ಅತ್ತೆ ಮನೆಗೆ ಹೋಗಿದ್ದನು.

ಇದನ್ನೂ ಓದಿ: Bengaluru News: ಕಾರು ಚಾಲನೆ ವೇಳೆ ಗಂಡ-ಹೆಂಡ್ತಿ ಜಗಳ; ದಿಢೀರ್‌ ಸ್ಟೇರಿಂಗ್ ಎಳೆದ ಪತ್ನಿ, ಕಾರು ಪಲ್ಟಿ

ಅಲ್ಲಿ ಹರ್ಷಿತಳ ಮೇಲೆ ಮನಸೋ ಇಚ್ಛೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ವೇಳೆ ತಡೆಯಲು ಬಂದ ಅತ್ತೆಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಸ್ಥಳಕ್ಕಾಗಿಮಿಸಿದ ಮೇಟಗಳ್ಳಿ ಪೋಲೀಸರು ಆರೋಪಿ ಮಾದೇಶ್​​ನನ್ನು ವಶಕ್ಕೆ ಪಡೆದಿದ್ದಾರೆ. ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ