AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಸೋದರನಿಂದ ಶರಣಾ ನಾಯ್ಕ್ ಕುಟುಂಬದವರ ಮೇಲೆ ಮತ್ತೆ ಹಲ್ಲೆ ಆರೋಪ

ನಾಲ್ಕು ದಿನದ ಹಿಂದೆ ಶರಣಾ ನಾಯ್ಕ್ ಮೇಲೆ ಹಲ್ಲೆ ಮಾಡಿದ್ದರಿಂದ ಶಿವಾಜಿ ಮೇಲೆ ಎಫ್​ಐಆರ್ ದಾಖಲಾಗಿತ್ತು. ನಿನ್ನೆ ಪೊಲೀಸ್​ ಠಾಣೆಯಲ್ಲಿ ಬೇಲ್ ತೆಗೆದುಕೊಂಡಿರುವ ಶಿವಾಜಿ ನಾಯಕ್​ ಈಗ ಕೇಸ್ ನೀಡಿದಕ್ಕೆ ಮತ್ತೆ ಶರಣಾ ನಾಯ್ಕ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಸೋದರನಿಂದ ಶರಣಾ ನಾಯ್ಕ್ ಕುಟುಂಬದವರ ಮೇಲೆ ಮತ್ತೆ ಹಲ್ಲೆ ಆರೋಪ
ಅರಸೀಕೆರೆ ಪೊಲೀಸ್ ಠಾಣೆ ಮುಂದೆ ಶರಣಾ ನಾಯ್ಕ್ ಕುಟುಂಬಸ್ಥರು ಕುಳಿತಿರುವುದು
TV9 Web
| Edited By: |

Updated on: Jul 03, 2021 | 3:49 PM

Share

ದಾವಣಗೆರೆ/ವಿಜಯನಗರ: ಕಾಂಗ್ರೆಸ್ ಶಾಸಕ ಪಿ. ಟಿ ಪರಮೇಶ್ವರ್ ನಾಯ್ಕ್ ಸಹೋದರ ಬಿಜೆಪಿ ಮುಖಂಡ ಪಿ. ಟಿ ಶಿವಾಜಿ ನಾಯ್ಕ್ ಅವರ ವಿರುದ್ಧ ಮತ್ತೆ ಗೂಂಡಾಗಿರಿ ಆರೋಪ ಕೇಳಿಬಂದಿದೆ. ನನ್ನ ವಿರುದ್ಧ ಕೇಸ್ ಕೊಡುತ್ತೀಯಾ ಎಂದು ಶರಣಾ ನಾಯ್ಕ್ ಕುಟುಂಬದವರ ಮೇಲೆ ಮತ್ತೆ ಪಿ. ಟಿ ಶಿವಾಜಿ ನಾಯ್ಕ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿರುವ ಶರಣಾ ನಾಯ್ಕ್ ಮನೆಗೆ ನುಗ್ಗಿ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದು, ಶರಣಾ ನಾಯ್ಕ್ ಹಾಗೂ ಅವರ ಮಗ ಜಗದೀಶ್ ತೀವ್ರವಾಗಿ ಗಾಯಕ್ಕೊಳಗಾಗಿದ್ದಾರೆ.

ನಾಲ್ಕು ದಿನದ ಹಿಂದೆ ಶರಣಾ ನಾಯ್ಕ್ ಮೇಲೆ ಹಲ್ಲೆ ಮಾಡಿದ್ದರಿಂದ ಶಿವಾಜಿ ಮೇಲೆ ಎಫ್​ಐಆರ್ ದಾಖಲಾಗಿತ್ತು. ನಿನ್ನೆ ಪೊಲೀಸ್​ ಠಾಣೆಯಲ್ಲಿ ಬೇಲ್ ತೆಗೆದುಕೊಂಡಿರುವ ಶಿವಾಜಿ ನಾಯಕ್​ ಈಗ ಕೇಸ್ ನೀಡಿದಕ್ಕೆ ಮತ್ತೆ ಶರಣಾ ನಾಯ್ಕ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ನ್ಯಾಯಕ್ಕಾಗಿ ಅರಸೀಕೆರೆ ಪೊಲೀಸ್ ಠಾಣೆ ಮುಂದೆ ಶರಣಾ ನಾಯ್ಕ್ ಕುಟುಂಬಸ್ಥರು ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ನಾಲ್ಕು ದಿನದ ಹಿಂದೆ ಕ್ಷುಲ್ಲಕ ಕಾರಣಕ್ಕೆ ಕಬ್ಬಿಣದ ಹಾರೆಯಿಂದ ಹಲ್ಲೆ ಮಾಡಿರುವ ಪಿ. ಟಿ. ಶಿವಾಜಿ: ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ.ಶಿವಾಜಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀಪುರದಲ್ಲಿ ಹಾರೆಯಿಂದ ಶರಣ ನಾಯ್ಕ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದ ನಿವಾಸಿ ಹಲ್ಲೆಗೊಳಗಾದ ವ್ಯಕ್ತಿ. ಗಾಯಾಳು ಶರಣ ನಾಯ್ಕ್ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡಾದಲ್ಲಿ ಘಟನೆ ನಡೆದಿದ್ದು, ಮನೆ ಜಾಗದ ಸಲುವಾಗಿ ಶರಣ ನಾಯ್ಕ್​ ಅವರ ಮೇಲೆ ಹಲ್ಲೆ ನಡೆದಿದೆ. ಘಟನೆ ವೀಡಿಯೋದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತು. ಆರಂಭದಲ್ಲಿ ದೈಹಿಕವಾಗಿ ಹಲ್ಲೆ ನಡೆಸಿ, ವ್ಯಕ್ತಿಯನ್ನು ಸುಮ್ಮನಾಗಿಸಲು ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ.ಶಿವಾಜಿ ಯತ್ನಿಸುತ್ತಾರೆ. ಆ ವೇಳೆ ವೃದ್ಧನನ್ನು ನೆಲದ ಮೇಲೆ ಕೆಡವಿ, ಧಮ್ಕಿ ಹಾಕಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮನೆಯ ಹೆಣ್ಣು ಮಕ್ಕಳು ಅಡ್ಡ ಬಂದರೂ ಕೇರ್​ ಮಾಡದೆ ಶಿವಾಜಿ ಆರ್ಭಟು ತೋರಿದ್ದಾರೆ. ಬಳಿಕ, ಅಷ್ಟೇ ಸಾಲದು ಅಂತಾ ಅಲ್ಲೆ ಇದ್ದ ಹಾರೆಯನ್ನು ತೆಗೆದುಕೊಂಡು ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪಿಟಿ ಪರಮೇಶ್ವರ್ ನಾಯ್ಕ್ ಸೋದರನಿಂದ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ: ಶಾಸಕ ಪರಮೇಶ್ವರ್ ಹೇಳಿದ್ದೇನು?

ಗಂಡನಿಗೆ ಅಕ್ರಮ ಸಂಬಂಧದ ವಿಷಯ ತಿಳಿಸಿದ್ದಕ್ಕಾಗಿ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮಹಿಳೆ, ಪ್ರಿಯಕರ ಬಂಧನ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ