AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಮಿಯಾಪುರದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಸಾವು

ಹೈದರಾಬಾದ್​ನ ಮಿಯಾಪುರದಲ್ಲಿ ದುರಂತವೊಂದು ಸಂಭವಿಸಿದೆ. ಕಲಬುರಗಿಯ ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಮೃತರೆಲ್ಲ ಕಲಬುರಗಿ ಮೂಲದವರಾಗಿದ್ದು, ಮಿಯಾಪುರದಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಯೇ? ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೆ ಶರಣಾದರೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೈದರಾಬಾದ್: ಮಿಯಾಪುರದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಸಾವು
ಸಾಂದರ್ಭಿಕ ಚಿತ್ರ
Ganapathi Sharma
|

Updated on:Aug 21, 2025 | 1:41 PM

Share

ಹೈದರಾಬಾದ್, ಆಗಸ್ಟ್ 21: ಹೈದರಾಬಾದ್‌ನ ಮಿಯಾಪುರದಲ್ಲಿ ಕರ್ನಾಟಕದ (Karnataka) ಕಲಬುರಗಿಯ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಮಿಯಾಪುರದ ಮಕ್ತಾ ಮಹಬೂಬ್‌ಪೇಟೆಯಲ್ಲಿ ದುರಂತ ಸಂಭವಿಸಿದೆ. ಸ್ಥಳೀಯರಿಂದ ಮಾಹಿತಿ ದೊರೆತ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ನರಸಿಂಹ (60), ವೆಂಕಟಮ್ಮ (55), ಅನಿಲ್ (32), ಕವಿತಾ (24), ಮತ್ತು ಅಪ್ಪು (2) ಎಂದು ಗುರುತಿಸಲಾಗಿದೆ. ಕಲಬುರಗಿಯ ಲಕ್ಷ್ಮಯ್ಯ ಅವರ ಕುಟುಂಬವು ಕೆಲವು ಸಮಯದಿಂದ ಹೈದರಾಬಾದ್‌ನಲ್ಲಿ ವಾಸಿಸುತ್ತಿದೆ.

ನರಸಿಂಹ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಏತನ್ಮಧ್ಯೆ, ನರಸಿಂಹ, ಅವರ ಪತ್ನಿ ವೆಂಕಟಮ್ಮ ಅವರ ಎರಡನೇ ಮಗಳು ಮತ್ತು ಅಳಿಯ ತಮ್ಮ ಮಗುವಿನೊಂದಿಗೆ ಮಕ್ತಾ ಮಹಬೂಬ್‌ಪೇಟೆಯಲ್ಲಿ ವಾಸಿಸುತ್ತಿದ್ದಾರೆ. ನರಸಿಂಹ ಸೇರಿದಂತೆ ಇಡೀ ಕುಟುಂಬವು ಕೂಲಿ ಕೆಲಸಗಳನ್ನು ಮಾಡುವ ಮೂಲಕ ಜೀವನ ಸಾಗಿಸುತ್ತಿತ್ತು.

ಬುಧವಾರ ರಾತ್ರಿ ಅವರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಘಟನೆಯಲ್ಲಿ ನರಸಿಂಹ ಮತ್ತು ಅವರ ಪತ್ನಿ ವೆಂಕಟಮ್ಮ, ಅವರ ಎರಡನೇ ಮಗಳು ಮತ್ತು ಅಳಿಯ, ಮಗು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್ಥಿಕ ಸಮಸ್ಯೆಗಳಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡರೇ? ಅಥವಾ ಬೇರೆ ಯಾವುದೇ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸ್ ತನಿಖೆ ಮುಂದುವರೆದಿದೆ.

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ: ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​ ಭೇದಿಸಿದ ಪೊಲೀಸ್​
Image
ದೆಹಲಿಯಲ್ಲಿ ತ್ರಿವಳಿ ಕೊಲೆ; ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ
Image
ಬೆಂಗಳೂರುನಿಂದ ಕೊಪ್ಪಳಕ್ಕೆ ತೆರಳಿ ಶಾಸಕನ ವಿರುದ್ಧ ದೂರು
Image
ಗೆಳೆಯನ ಹೆಂಡತಿಯ ಬದಲಾಗಿ ತನ್ನ ಹೆಂಡತಿಯನ್ನು ಕೊಟ್ಟ ಯುವಕ!

ಇದನ್ನೂ ಓದಿ: ಗೆಳೆಯನ ಹೆಂಡತಿಯನ್ನು ತಾನಿಟ್ಟುಕೊಂಡು ತನ್ನ ಪತ್ನಿಯನ್ನು ಆತನಿಗೆ ಕೊಟ್ಟ ಸ್ನೇಹಿತ!

ಒಂದೇ ಕುಟುಂಬದ ಐದು ಸದಸ್ಯರ ಸಾವು ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Thu, 21 August 25