ಹೈದರಾಬಾದ್ ವಿವಿ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಪ್ರೇಮ ವೈಫಲ್ಯ ಕಾರಣ: ಸಿ.ಟಿ.ರವಿ

ಇಂದು ರಾಜ್ಯ ರೈತಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಟಿ ರವಿ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪ್ರತಿಪಕ್ಷಗಳು ಹೇಗೆ ಹೊಟ್ಟೆಕಿಚ್ಚು ಪಡುತ್ತಿವೆ ಎಂಬ ಬಗ್ಗೆ ವಿವರಿಸಿದರು. ಅದಕ್ಕೆ ಉದಾಹರಣೆಯಾಗಿ ಈ ರೋಹಿತ್​ ವೇಮುಲಾ ಆತ್ಮಹತ್ಯೆ ಪ್ರಕರಣವನ್ನೂ ಉಲ್ಲೇಖಿಸಿದ್ದಾರೆ.

ಹೈದರಾಬಾದ್ ವಿವಿ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಪ್ರೇಮ ವೈಫಲ್ಯ ಕಾರಣ: ಸಿ.ಟಿ.ರವಿ
ಸಿಟಿ ರವಿ
Follow us
| Updated By: Lakshmi Hegde

Updated on:Jun 21, 2021 | 1:57 PM

ಬೆಂಗಳೂರು: ಹೈದರಾಬಾದ್​ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್​ ವೇಮುಲಾ ಆತ್ಮಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ವಿವಿಯಲ್ಲಿ ಪಿಎಚ್​ಡಿ ಸಂಶೋಧಕರಾಗಿದ್ದ ರೋಹಿತ್​ ವೇಮುಲ 2016ರ ಜನವರಿಗೆ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಸಾವಿಗೆ ಕಾರಣ ಕಂಡು ಹಿಡಿಯುವ ಸಂಬಂಧ ತನಿಖೆಗಳೂ ನಡೆದಿದ್ದವು. ಇಂದು ಈ ರೋಹಿತ್ ವೇಮುಲ ಸಾವಿನ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತೆ ಮಾತನಾಡಿದ್ದಾರೆ. ರೋಹಿತ್​ ವೇಮುಲ ಸತ್ತಿದ್ದು ಪ್ರೀತಿಯಲ್ಲಿ ವಿಫಲವಾಗಿದ್ದಕ್ಕೆ ಎಂದು ಹೇಳಿದ್ದಾರೆ.

ಇಂದು ರಾಜ್ಯ ರೈತಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಟಿ ರವಿ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪ್ರತಿಪಕ್ಷಗಳು ಹೇಗೆ ಹೊಟ್ಟೆಕಿಚ್ಚು ಪಡುತ್ತಿವೆ ಎಂಬ ಬಗ್ಗೆ ವಿವರಿಸಿದರು. ಅದಕ್ಕೆ ಉದಾಹರಣೆಯಾಗಿ ಈ ರೋಹಿತ್​ ವೇಮುಲಾ ಆತ್ಮಹತ್ಯೆ ಪ್ರಕರಣವನ್ನೂ ಉಲ್ಲೇಖಿಸಿದ್ದಾರೆ. ಹೈದರಾಬಾದ್​ನಲ್ಲಿ ರೋಹಿತ್​ ವೇಮುಲಾ ಪ್ರೀತಿ ವಿಚಾರದಲ್ಲಿ ನಿರಾಸೆಯುಂಟಾಗಿ ಆತ್ಮಹತ್ಯೆ ಮಾಡಿಕೊಂಡರು. ಆ ಸಾವಿನ ಕೇಸ್​​ನ್ನೂ ನರೇಂದ್ರ ಮೋದಿ ತಲೆಗೆ ಕಟ್ಟಲು ಪ್ರಯತ್ನ ಪಟ್ಟರು. ಅಂದರೆ ಪ್ರಧಾನಿ ಮೋದಿ ವಿರುದ್ಧ ಅದೆಷ್ಟರ ಮಟ್ಟಿಗೆ, ದ್ವೇಷ ಹೊಟ್ಟೆಕಿಚ್ಚು ಇದೆ ಎಂಬುದನ್ನು ಯೋಚನೆ ಮಾಡಿ. ಆದರೆ ನಂತರ ಅದು ಫೇಲ್​ ಆಯ್ತು ಎಂದು ಹೇಳಿದರು.

ರೋಹಿತ್​ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ದಿನದಿನಕ್ಕೂ ಒಂದೊಂದು ಟ್ವಿಸ್ಟ್​ ಸಿಗುತ್ತಿತ್ತು. ಆತನನ್ನು ಹಾಸ್ಟೆಲ್​​ನಿಂದ ಹೊರಹಾಕಿದ್ದಕ್ಕೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವೇಮುಲಾ ಸ್ನೇಹಿತರು ಹೇಳಿದ್ದರು. ಆದರೆ ಸಾವಿನ ಬಗ್ಗೆ ತನಿಖೆ ನಡೆಸಲು ಮಾನವಸಂಪನ್ಮೂಲ ಇಲಾಖೆ ನೇಮಿಸಿದ್ದ ತನಿಖಾ ಆಯೋಗ ಈ ಆರೋಪವನ್ನು ತಳ್ಳಿಹಾಕಿತ್ತು. ವೇಮುಲಾ ಆತ್ಮಹತ್ಯೆ ಮಾಡಿಕೊಳ್ಳಲು ಆತನ ವೈಯಕ್ತಿಕ ಸಮಸ್ಯೆಗಳೇ ಕಾರಣ ಎಂದಿತ್ತು. ಆದರೆ ರೋಹಿತ್​ ವೇಮುಲಾ ಒಬ್ಬ ದಲಿತ ಎಂಬ ಕಾರಣಕ್ಕೆ ಆತನನ್ನು ಹೀಗೆ ನಡೆಸಿಕೊಳ್ಳಲಾಗಿದೆ. ಈ ದೇಶದಲ್ಲಿ ದಲಿತರಿಗೆ ರಕ್ಷಣೆ, ಹಕ್ಕುಗಳಿಗೆ ಬೆಲೆಯಿಲ್ಲ. ಕೇಂದ್ರ ಸರ್ಕಾರ ದಲಿತ ವಿರೋಧಿ  ಎಂಬಿತ್ಯಾದಿ ಆರೋಪಗಳು ಕೇಳಿಬಂದಿದ್ದವು.    ವಿಚಾರವನ್ನಿಟ್ಟುಕೊಂಡು ಆಗಷ್ಟೇ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದ ಮೋದಿ ಸರ್ಕಾರವನ್ನು ದೂಷಿಸುವ ಕೆಲಸಗಳೂ ನಡೆದಿದ್ದವು.

ಇದನ್ನೂ ಓದಿ: ಎಲ್​​ಜೆಪಿ ಸಂಸದ ಪ್ರಿನ್ಸ್ ರಾಜ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಮಹಿಳೆಯಿಂದ ದೆಹಲಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ

Published On - 1:42 pm, Mon, 21 June 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ