ನಾನು ಡಿಸಿಪಿ ಮಗ, ಮುಖ್ಯಮಂತ್ರಿ ನನ್ನ ಸಂಬಂಧಿ ಎಂದು ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಯುವಕನಿಂದ ಹಲ್ಲೆ

ತಡರಾತ್ರಿ 12 ಗಂಟೆಗೆ ಇಬ್ಬರು ಯುವತಿಯರು ಹಾಗೂ ಓರ್ವ ಯುವಕನನ್ನು ಅಪಾರ್ಟ್​ಮೆಂಟ್​ಗೆ ಕರೆದುಕೊಂಡು ಬಂದಿದನ್ನು ಪ್ರಶ್ನೆ ಮಾಡಿದಕ್ಕೆ ಓರ್ವ ಯುವಕ ಸೆಕ್ಯೂರಿಟಿ ಗಾರ್ಡ್​ ಮೇಲೆ ಹಲ್ಲೆ ನಡೆಸಿದ್ದಾನೆ. ನಾನು ಯಾರ್ ಗೊತ್ತಾ? ಡಿಸಿಪಿ ಮಗ. ಸಿಎಂ‌ ಸಿದ್ದರಾಮಯ್ಯ ನನ್ನ ಸಂಬಂಧಿ ಎಂದು ಹೇಳಿ ವರುಣ್, ಪುನೀತ್ ಮೇಲೆ ಹಲ್ಲೆ ನಡೆಸಿದ್ದಾನೆ.

ನಾನು ಡಿಸಿಪಿ ಮಗ, ಮುಖ್ಯಮಂತ್ರಿ ನನ್ನ ಸಂಬಂಧಿ ಎಂದು ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಯುವಕನಿಂದ ಹಲ್ಲೆ
ಯುವತಿಯರನ್ನು ಕರೆತಂದಿದನ್ನು ಪ್ರಶ್ನಿಸಿದಕ್ಕೆ ಸೆಕ್ಯೂರಿಟಿ ಮೇಲೆ ಹಲ್ಲೆ
Edited By: ಆಯೇಷಾ ಬಾನು

Updated on: Sep 21, 2024 | 1:55 PM

ಬೆಂಗಳೂರು, ಸೆ.21: ನಾನು ಡಿಸಿಪಿ ಮಗ, ಮುಖ್ಯಮಂತ್ರಿ (Siddaramaiah) ನನ್ನ ಸಂಬಂಧಿ ಅಂತಾ ಹೇಳಿ ಯುವಕನೋರ್ವ ಅಪಾರ್ಟ್​ಮೆಂಟ್​ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ (Assault) ನಡೆಸಿರುವ ಘಟನೆ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆಕ್ಯೂರಿಟಿ ಗಾರ್ಡ್ ಪುನೀತ್ ಮೇಲೆ ಯುವಕ ವರುಣ್ (21) ಹಲ್ಲೆ ನಡೆಸಿದ್ದಾನೆ.

ಹಲ್ಲೆಗೊಳಗಾದ ಪುನೀತ್ ಅವರು ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ದೊಡ್ಡಬೆಲೆಯ ಪ್ರಾವಿಡೆಂಟ್ ಸನ್​ವರ್ತ್​​ ಅಪಾರ್ಟ್​ಮೆಂಟ್​ಗೆ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಯುವಕ ವರುಣ್ ಅಪಾರ್ಟ್ಮೆಂಟ್​ಗೆ ಇಬ್ಬರು ಯುವತಿಯರು ಹಾಗೂ ಓರ್ವ ಯುವಕನನ್ನು ಕರೆತಂದಿದ್ದ. ಯುವತಿಯರನ್ನು ಕರೆದುಕೊಂಡು ಬಂದ ಹಿನ್ನೆಲೆ ಅನುಮಾನಗೊಂಡ ಸೆಕ್ಯೂರಿಟಿ ಗಾರ್ಡ್ ಪುನೀತ್, ರಾತ್ರಿ‌ 12 ಗಂಟೆ ನಂತರ ಅಪರಿಚಿತರಿಗೆ ಪ್ರವೇಶವಿಲ್ಲ ಎಂದು ಯುವಕನಿಗೆ ಖಡಕ್ ಆಗಿ ಹೇಳಿದ್ದಾರೆ.

ಇದರಿಂದ ಕೋಪಗೊಂಡ ವರುಣ್, ಹಲ್ಲೆ ನಡೆಸಿದ್ದಾನೆ. ನಾನು ಯಾರ್ ಗೊತ್ತಾ? ಡಿಸಿಪಿ ಮಗ. ಸಿಎಂ‌ ಸಿದ್ದರಾಮಯ್ಯ ನನ್ನ ಸಂಬಂಧಿ ಎಂದು ಹೇಳಿ ವರುಣ್, ಪುನೀತ್ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನು ಮತ್ತೊಂದೆಡೆ ಅಪಾರ್ಟ್ಮೆಂಟ್ ರೂಲ್ಸ್ ಪ್ರಕಾರ ನಡೆದರೂ ಹಲ್ಲೆ ಮಾಡಿದ್ದಾರೆ. ಕಿವಿ ಪರದೆ ಹರಿದು ಹೋಗುವ ಹಾಗೆ ಹಲ್ಲೆ ಮಾಡಲಾಗಿದೆ. ನನ್ನ ಕಿವಿ ಕೇಳಿಸುತ್ತಿಲ್ಲ ಎಂದು ಪುನೀತ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸೆಕ್ಯೂರಿಟಿ ಗಾರ್ಡ್ ‌ಮೇಲೆ ಕಪಾಳ ಮೋಕ್ಷ ಮಾಡುವ ವಿಡಿಯೋ ರಿಕಾರ್ಡ್ ಆಗಿದೆ. ಅಲ್ಲೇ‌ ಇದ್ದ ಸ್ಥಳೀಯರು ಹಲ್ಲೆ ವಿಡಿಯೋ ರಿಕಾರ್ಡ್ ಮಾಡಿದ್ದಾರೆ. ಅಲ್ಲದೆ ವರುಣ್ ಯುವತಿಯರನ್ನು ಕರೆದುಕೊಂಡು ಬಂದ ದೃಶ್ಯಗಳು ಕೂಡ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿವೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾಲೆ ಆವರಣದಲ್ಲಿ ಅಡಗಿದ್ದ 12 ಅಡಿ ಉದ್ದದ ಕಳಿಂಗ ಸರ್ಪ ಸೆರೆ

ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸ್

ಕುಂಬಳಗೋಡು ಪೊಲೀಸರು ಡಿಸಿಪಿ ಮಗ ಅಂತ ಹಲ್ಲೆ ಮಾಡಿದ್ದ ಯುವನನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಸಂಜೆ ವರುಣ್ ವಿರುದ್ಧ ಪುನೀತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ವರುಣ್​​ನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ವರುಣ್ ತಾನೊಬ್ಬ ಡಿಸಿಪಿ ಮಗ ಅಂತ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ. ವರುಣ್ ಡಿಸಿಪಿ ಮಗ ಅಂತ ಸುಳ್ಳು ಹೇಳಿದ್ದ. ವರುಣ್ ತಾಯಿ ವಿಜಯಲಕ್ಷ್ಮಿ ಮಾಜಿ ಪೊಲೀಸ್ ಅಧಿಕಾರಿ, ‌ಪ್ರಸ್ತುತ ಕೆ.ಎ.ಎಸ್ ಅಧಿಕಾರಿ. ಸಹಕಾರ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಅಗ್ನಿ ಅವಘಡ.. ರಾಮಯ್ಯ ಆಸ್ಪತ್ರೆ ವಿರುದ್ಧ ದೂರು

ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಬಂಧ ಮೃತನ ಪತ್ನಿ ದೂರು ದಾಖಲಿಸಿದ್ದಾಳೆ. ಆಸ್ಪತ್ರೆ ನಿರ್ಲಕ್ಷ್ಯದಿಂದಾಗಿ ತನ್ನ ಗಂಡ ಸಾವನ್ನಪ್ಪಿರುವುದಾಗಿ ಮೃತನ ಪತ್ನಿ ಆರೋಪಿಸಿದ್ದಾಳೆ. ಮೊನ್ನೆ ಆಸ್ಪತ್ರೆಯ ಬ್ಲಾಕ್ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಈ ವೇಳೆ. ವ್ಯಕ್ತಿಯೊಬ್ಬ ಮೃತಪಟ್ಟಿದ್ದ. ಆತ ಗುಣಮುಖರಾಗ್ತಿದ್ರು. ಆದ್ರೆ ಆಸ್ಪತ್ರೆ ನಿರ್ಲಕ್ಷ್ಯದಿಂದ ಅವರು ಮೃತಪಟ್ಟಿದ್ದಾರೆ ಅಂತಾ ದೂರು ದಾಖಲಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Sat, 21 September 24

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us