AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮನ್ನು ನೋಡಲು ಬಸ್ಸಿನಿಂದ ನೆಗೆದು ಹಲ್ಲುದುರಿಸಿಕೊಂಡೆ, ದಯವಿಟ್ಟು ಹಲ್ಲು ಕಟ್ಟಿಸಿಕೊಡಿ: ಶಾಸಕರಿಗೆ ಪತ್ರ ಬರೆದ ಅಭಿಮಾನಿ

ಶಾಸಕರನ್ನು ನೋಡಲು ಹೋಗಿ ಹಲ್ಲುಉದುರಿಸಿಕೊಂಡ ಅಭಿಮಾನಿಯೊಬ್ಬರು, ದಯಮಾಡಿ ಹಲ್ಲುಕಟ್ಟಿಸಿಕೊಡಿ ಸ್ವಾಮಿ ಎಂದು ಅದೇ ಶಾಸಕರಿಗೆ ಮನವಿ ಪತ್ರ ಬರೆದಿದ್ದಾರೆ. ಇಂಥದ್ದೊಂದು ಅಪರೂಪದ ಪ್ರಕರಣಕ್ಕೆ ಹಾಸನ ಜಿಲ್ಲೆ ಸಾಕ್ಷಿಯಾಗಿದೆ.

ನಿಮ್ಮನ್ನು ನೋಡಲು ಬಸ್ಸಿನಿಂದ ನೆಗೆದು ಹಲ್ಲುದುರಿಸಿಕೊಂಡೆ, ದಯವಿಟ್ಟು ಹಲ್ಲು ಕಟ್ಟಿಸಿಕೊಡಿ: ಶಾಸಕರಿಗೆ ಪತ್ರ ಬರೆದ ಅಭಿಮಾನಿ
ಎದೆಯ ಮೇಲೆ CM ಕುಮಾರಸ್ವಾಮಿ ಎಂದು ಹಚ್ಚೆ ಹಾಕಿಸಿಕೊಂಡಿರುವ ಜೆಡಿಎಸ್ ಅಭಿಮಾನಿ ಅಣ್ಣಪ್ಪ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 30, 2021 | 10:39 PM

Share

ಹಾಸನ: ಪ್ರೀತಿ ಕುರುಡು ಅನ್ನುತ್ತಾರೆ. ಪ್ರೀತಿಯಲ್ಲಿ ಮುಳುಗಿದವರಿಗೆ ತಮ್ಮ ಲೋಕ ಹೊರತುಪಡಿಸಿ ಮತ್ತೊಂದು ಲೋಕವಿದೆ ಎಂಬ ಪರಿಜ್ಞಾನವೂ ಇರುವುದಿಲ್ಲ. ಅಭಿಮಾನ ಮೈದುಂಬಿದಾಗ ರಾಜಕೀಯ ಕಾರ್ಯಕರ್ತರೂ ಹೆಚ್ಚೂಕಡಿಮೆ ಹೀಗೆಯೇ ಆಗಿರುತ್ತಾರೆ. ಇಂಥದ್ದೊಂದು ಅಪರೂಪದ ಪ್ರಕರಣಕ್ಕೆ ಹಾಸನ ಜಿಲ್ಲೆ ಸಾಕ್ಷಿಯಾಗಿದೆ. ಶಾಸಕರನ್ನು ನೋಡಲು ಹೋಗಿ ಹಲ್ಲುಉದುರಿಸಿಕೊಂಡ ಅಭಿಮಾನಿಯೊಬ್ಬರು, ದಯಮಾಡಿ ಹಲ್ಲುಕಟ್ಟಿಸಿಕೊಡಿ ಸ್ವಾಮಿ ಎಂದು ಅದೇ ಶಾಸಕರಿಗೆ ಮನವಿ ಪತ್ರ ಬರೆದಿದ್ದಾರೆ.

ಶ್ರವಣಬೆಳಗೊಳ ಕ್ಷೇತ್ರದ ಕೊನ್ನಘಟ್ಟದ ಗ್ರಾಮದ ಅಣ್ಣಪ್ಪ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಅವರಿಗೆ ಹೀಗೊಂದು ಪತ್ರ ಬರೆದಿದ್ದಾರೆ. ಹಾಸನ ಜಿಲ್ಲೆಯ ಹಲವು ವಾಟ್ಸಾಪ್​ ಗ್ರೂಪ್​ಗಳಲ್ಲಿ ಹರಿದಾಡುತ್ತಿರುವ ಈ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

‘ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೆನೆ. ನನ್ನ ಪಕ್ಷಕ್ಕಾಗಿ ನನ್ನ ಪ್ರಾಣವನ್ನೂ ಕೊಡಲು ತಯಾರಿದ್ದೇನೆ. ಕೆಲ ವರ್ಷಗಳ ಹಿಂದೆ ನಾನು ಬಸ್ಸಿನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ನೀವು ನಿಂತುಕೊಂಡಿದ್ದನ್ನು ನೋಡಿದೆ. ನಿಮ್ಮನ್ನು ಭೇಟಿಯಾಗುವ ಆತುರದಲ್ಲಿ ಬಸ್ಸಿನಿಂದ ನೆಗೆದೆ. ನಿಮಗೂ ಈ ವಿಷಯ ಗೊತ್ತಿದೆ. ನಾನು ಕೆಳಗೆ ಬಿದ್ದಾಗ ನನ್ನ ಹಲ್ಲುಗಳು ಮುರಿದವು. ಆದ್ದರಿಂದ ನನಗೆ ಹಲ್ಲು ಕಟ್ಟಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇನೆ’ ಎಂದು ಅಣ್ಣಪ್ಪ ಮನವಿ ಪತ್ರ ಬರೆದಿದ್ದಾರೆ.

ಜೆಡಿಎಸ್ ಪಕ್ಷದ ಕಟ್ಟಾ ಅಭಿಮಾನಿಯಾಗಿರುವ ಅಣ್ಣಪ್ಪ ತಮ್ಮ ಎದೆಯ ಮೇಲೆ CM ಕುಮಾರಸ್ವಾಮಿ ಎಂದು ಹಚ್ಚೆಯನ್ನೂ ಹಾಕಿಸಿಕೊಂಡಿದ್ದಾರೆ. ತಮ್ಮ ಊರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕರು ಬಂದಿದ್ದಾಗ ಹಲ್ಲು ಕಟ್ಟಿಸಿಕೊಡುವಂತೆ ಮನವಿ ಮಾಡಿದ್ದಾರೆ.

JDS-Letter

ಅಣ್ಣಪ್ಪ ಬರೆದಿರುವ ಪತ್ರ

ಇದನ್ನೂ ಓದಿ: ಹಲ್ಲುಗಳು ಹಳದಿಯಾಗಿದೆ ಎಂಬ ಚಿಂತೆ ಯಾಕೆ? ಬಿಳಿಬಿಳಿ ಸ್ವಚ್ಛ ಹಲ್ಲಿಗಾಗಿ ಮನೆಯಲ್ಲೇ ಹೀಗೆ ಮಾಡಬಹುದು

ಇದನ್ನೂ ಓದಿ: ಪ್ರಿಯ ಕಿನ್ನರಿ.. ಹಲ್ಲು ಮುರಿದು ಹೋಗಿದ್ದಕ್ಕೆ ಪ್ರತಿಯಾಗಿ ಉಡುಗೊರೆ ಕೊಡು.. ಎಲ್ಲರ ಮನಗೆದ್ದ ಚೆಂದದ ಪತ್ರ!

Published On - 10:29 pm, Tue, 30 March 21

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​