AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡ್ಮೂರು ದಿನದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತೇನೆ: ಸಂದೇಶ್ ನಾಗರಾಜ್

ನಾನು 2-3 ವರ್ಷದಿಂದ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ. ಹೀಗಾಗಿ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಎಂಎಲ್‌ಸಿ ಸಂದೇಶ್ ನಾಗರಾಜ್ ಹೇಳಿದ್ದಾರೆ.

ಎರಡ್ಮೂರು ದಿನದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತೇನೆ: ಸಂದೇಶ್ ನಾಗರಾಜ್
ಸಂದೇಶ್ ನಾಗರಾಜ್
TV9 Web
| Edited By: |

Updated on:Nov 12, 2021 | 12:57 PM

Share

ಮೈಸೂರು: ಎರಡ್ಮೂರು ದಿನದಲ್ಲಿ ಜೆಡಿಎಸ್‌ಗೆ ರಾಜೀನಾಮೆ ನೀಡುತ್ತೇನೆ. ಆನಂತರ ಬಿಜೆಪಿ ಪಕ್ಷ ಸೇರುತ್ತೇನೆ. ಬಿಜೆಪಿ ಸೇರಿದ ಬಳಿಕ ಜೆಡಿಎಸ್(JDS) ಪಕ್ಷ ಬಿಡಲು ಕಾರಣ ಏನು ಎಂದು ಸುದ್ದಿಗೋಷ್ಠಿ ಮಾಡಿ ತಿಳಿಸುತ್ತೇನೆ. ಹೆಚ್.ಡಿ.ಕುಮಾರಸ್ವಾಮಿಗೆ ನನ್ನ ಅಗತ್ಯವಿಲ್ಲ ಎಂದು ಅನಿಸುತ್ತಿದೆ. ನನ್ನ ಅಗತ್ಯವಿಲ್ಲದಿದ್ದಾಗ ಆ ಜಾಗದಲ್ಲಿ ನಾನು ಏಕೆ ಇರಬೇಕು. ನಾನು 2 ರಿಂದ 3 ವರ್ಷದಿಂದ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ. ಹೀಗಾಗಿ ಜೆಡಿಎಸ್ ತೊರೆದು ಬಿಜೆಪಿ (BJP) ಸೇರುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಎಂಎಲ್‌ಸಿ ಸಂದೇಶ್ ನಾಗರಾಜ್ ಹೇಳಿದ್ದಾರೆ.

ಕೇವಲ ದೈಹಿಕವಾಗಿ ಮಾತ್ರ ಜೆಡಿಎಸ್ ಪಕ್ಷದಲ್ಲಿ ಇದ್ದೇನೆ. 3 ವರ್ಷದಿಂದ ನಾನು ಜೆಡಿಎಸ್ ನಾಯಕರ ಸಂರ್ಪಕದಲ್ಲಿಲ್ಲ. ವಿಧಾನ ಪರಿಷತ್ ಒಳಗೂ ನಾನು ಬಿಜೆಪಿ ಪರವೇ ಬಿಲ್​ಗಳಿಗೆ ಕೈ ಎತ್ತಿದ್ದೇನೆ. ನನಗೆ ಬಿಜೆಪಿಯಿಂದ ಪರಿಷತ್ ಟಿಕೆಟ್ ಸಿಗುವ ವಿಶ್ವಾಸವಿದೆ. ಮೈಸೂರಿನ ಬಿಜೆಪಿ ಕಚೇರಿಯಲ್ಲೆ ಬಿಜೆಪಿ ಸೇರ್ಪಡೆಯಾಗುತ್ತೇನೆ ಜೆಡಿಎಸ್ ಎಂಎಲ್‌ಸಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

ಜೆಡಿಎಸ್​ ಪಕ್ಷ ಕಾಲಿಯಾಗುತ್ತಿದೆ ಎಂಬ ಮಾತಿಗೆ ಈ ಹಿಂದೆಯೇ ಹೆಚ್​.ಡಿ.ಕುಮಾರಸ್ವಾಮಿ ಪ್ರತಿ ಉತ್ತರವನ್ನು ನೀಡಿದ್ದಾರೆ. ಆದರೆ ಇತ್ತೀಚೆಗೆ ಈ ಆರೋಪ ನಿಜವೆಂಬಂತೆ ಒಬ್ಬರಿಂದ ಮತ್ತೊಬ್ಬರು ಪಕ್ಷ ತೊರೆಯುತ್ತಿದ್ದಾರೆ.

ಜೆಡಿಎಸ್ ಪಕ್ಷ ಬಿಟ್ಟು ಹೋಗುವುದು ಹೊಸದೇನಲ್ಲ: ಹೆಚ್​.ಡಿ.ಕುಮಾರಸ್ವಾಮಿ ಜೆಡಿಎಸ್ ಪಕ್ಷ ಬಿಟ್ಟು ಹೋಗುವುದು ಹೊಸದೇನಲ್ಲ. ಇದರಿಂದ ಜೆಡಿಎಸ್​ಗೆ ಯಾವುದೇ ಶಾಕ್ ಇಲ್ಲ ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ, ರಮೇಶ್ ಕುಮಾರ್ ಯಾವ ಪಕ್ಷದಲ್ಲಿದ್ರು ಅಂತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್​ಡಿಕೆ, ಜೆಡಿಎಸ್ ಪಕ್ಷ ನಿಂತಿರುವುದು ನಾಯಕರಿಂದ ಅಲ್ಲ. ನಮ್ಮ ಲಕ್ಷಾಂತರ ಕಾರ್ಯಕರ್ತರಿಂದ ಅಂತ ಹೇಳಿದರು.

ಜೆಡಿಎಸ್ ನಾಲ್ಕು ದಿನಗಳ ಕಾರ್ಯಾಗಾರವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದೇವೆ. ನಾಳೆ ಮತ್ತು ನಾಡಿದ್ದು ಅಲ್ಪಸಂಖ್ಯಾತರ ಕಾರ್ಯಾಗಾರ ಏರ್ಪಾಡು ಮಾಡಿದ್ದೇವೆ. ಸೋಮವಾರ ಎಸ್​ಸಿ, ಎಸ್​ಟಿ, ಓಬಿಸಿ ಕಾರ್ಯಾಗಾರ ಏರ್ಪಾಡು ಮಾಡಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು. 1.0 ಯಿಂದ 10.ಓ ತನಕ ನಿರಂತರ ಪಕ್ಷ ಸಂಘಟನೆಗೆ ಚಾಲನೆ ಕೊಟ್ಟಿದ್ದೇವೆ. ಇದು ಜೆಡಿಎಸ್​ನ ಆರಂಭಿಕ ಶೂರತ್ವ ಅಂತ ಹಲವರು ಭಾವನೆ ಇಟ್ಟುಕೊಂಡಿದ್ದಾರೆ. ಒಂದು ಕಡೆ ಸಂಘಟನೆ, ಇನ್ನೊಂದು ಕಡೆ ಜೆಡಿಎಸ್ ಮನೆ ಖಾಲಿ ಆಗುತ್ತಿದೆ ಎನ್ನುವ ದೊಡ್ಡ ಸುದ್ದಿಗಳು ಬರುತ್ತಿವೆ. ನಮಗೆ ಇದರಲ್ಲಿ ಯಾವುದೇ ಶಾಕ್ ಇಲ್ಲ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಎಪಿಎಸ್ ಡಿಯೋಲ್ ರಾಜೀನಾಮೆ ತಿರಸ್ಕರಿಸುವ ಮೂಲಕ ನವಜೋತ್ ಸಿಂಗ್ ಸಿಧುಗೆ ಖಡಕ್ ಸಂದೇಶ ರವಾನಿಸಿದ ಪಂಜಾಬ್ ಮುಖ್ಯಮಂತ್ರಿ

Babul Supriyo: ಬಿಜೆಪಿ ತೊರೆದು ಬೇರೆ ಪಕ್ಷ ಸೇರುತ್ತಾರಾ ಸಂಸದ ಬಾಬುಲ್ ಸುಪ್ರಿಯೋ?; ಅನುಮಾನಕ್ಕೆ ಕಾರಣವಾಯ್ತು ಫೇಸ್​ಬುಕ್ ಪೋಸ್ಟ್

Published On - 11:47 am, Fri, 12 November 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ