AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ವರದಿಯಲ್ಲಿ ಏನಿದೆ ಅಂತಾ ನಾನು ನೋಡಿಲ್ಲ. ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ. ಜಾತಿಗಣತಿ ವರದಿ ನೋಡಿ ಪರಿಶೀಲನೆ ಮಾಡುತ್ತೇವೆ. ಡಿಸೆಂಬರ್ ಅಥವಾ ಜನವರಿಯೊಳಗೆ ವರದಿ ಸಲ್ಲಿಕೆಗೆ ಹೇಳಿದ್ದೇನೆ ಎಂದಿದ್ದಾರೆ.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
Malatesh Jaggin
| Updated By: ಗಂಗಾಧರ​ ಬ. ಸಾಬೋಜಿ

Updated on: Nov 22, 2023 | 2:56 PM

ಬೆಂಗಳೂರು, ನವೆಂಬರ್​​​ 22: ಜಾತಿಗಣತಿ ವರದಿಯಲ್ಲಿ ಏನಿದೆ ಅಂತಾ ನಾನು ನೋಡಿಲ್ಲ. ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ. ಜಾತಿಗಣತಿ ವರದಿ ನೋಡಿ ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಯಪ್ರಕಾಶ್ ಹೆಗ್ಡೆ ಅವಧಿ ಈ ತಿಂಗಳು ಮುಗಿಯುತ್ತದೆ. ಜಾತಿಗಣತಿ ವರದಿ ಕೊಡುವವರೆಗೆ ಮುಂದುವರಿಯಲು ಹೇಳಿದ್ದೇನೆ ಎಂದರು.

ಜಾತಿಗಣತಿ ವರದಿಗೆ ಒಕ್ಕಲಿಗ ಸಮುದಾಯ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಜಾತಿಗಣತಿ ವರದಿಯಲ್ಲಿ ಏನಿದೆ ಅಂತಾ ನೋಡಬೇಕಲ್ವಾ. ಡಿಸೆಂಬರ್ ಅಥವಾ ಜನವರಿಯೊಳಗೆ ವರದಿ ಸಲ್ಲಿಕೆಗೆ ಹೇಳಿದ್ದೇನೆ. ಒಕ್ಕಲಿಗರ ಸಂಘದವರು ಕೂಡ ನಿನ್ನೆ ಬಂದು ಮನವಿ ಕೊಟ್ಟಿದ್ದಾರೆ. ವರದಿ ಕೊಟ್ಟ ಮೇಲೆ ಒಕ್ಕಲಿಗರ ಮನವಿ ಪರಿಶೀಲನೆ ಮಾಡುತ್ತೇವೆ. ವರದಿಯನ್ನು ನಾನೇ ನೋಡಿಲ್ಲ, ಬೇರೆಯವರು ಹೇಗೆ ನೋಡುತ್ತಾರೆ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಎಲ್ಲರೂ ಕೂಡ ಆರೋಗ್ಯವಂತರಾಗಿ ಬದುಕಬೇಕು

ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ಫುಡ್ ಸೆಕ್ಯೂರಿಟಿ ಆ್ಯಕ್ಟ್​ ತಂದಿದ್ದು ಡಾ.ಮನ​ಮೋಹನ್ ಸಿಂಗ್. ಪ್ರಧಾನಿ ನರೇಂದ್ರ ಮೋದಿ ನಾನೇ ವಿಶ್ವಗುರು ಅಂತಾ ಹೇಳುತ್ತಾರೆ. ನ್ಯಾಷನಲ್ ಫ್ಯಾಮಿಲಿ ಹೆಲ್ತ್ ರಿಪೋರ್ಟ್ ಇದೆ. ಸಮಾಜದಲ್ಲಿ ಎಲ್ಲರೂ ಕೂಡ ಆರೋಗ್ಯವಂತರಾಗಿ ಬದುಕಬೇಕು. ಕೆಲವು ರೋಗ ನಮ್ಮ ಪ್ರಯತ್ನದಿಂದ ತಡೆಗಟ್ಟಲು ಸಾಧ್ಯತೆ ಇದೆ. ನಾವು ಪ್ರತಿಯೊಬ್ಬರೂ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ನಮ್ಮ ಸಮಾಜದಲ್ಲಿ ಬಡತನ ಹಾಗೂ ಅನಕ್ಷರತೆ ಇದೆ ಎಂದರು.

ಇದನ್ನೂ ಓದಿ: ಜಾತಿಗಣತಿ ವರದಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿದ್ದರಾಮಯ್ಯ

ಹಳ್ಳಿಗಳಲ್ಲಿ ಬಡವರು ರೊಟ್ಟಿ, ಖಾರ ತಿಂದು ಜೀವನ ಮಾಡ್ತಾರೆ. ಹಸಿವುಮುಕ್ತ ರಾಜ್ಯ ಮಾಡಬೇಕೆಂದು ಅನ್ನಭಾಗ್ಯ ಜಾರಿ ಮಾಡಿದೆವು. ಶಾಲೆಗಳಲ್ಲಿ ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಿಸಲಾಗಿದೆ. ಮೊಟ್ಟೆ ತಿನ್ನುವವರಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡ್ತೀವಿ ಎಂದು ತಿಳಿಸಿದರು.

ಇದನ್ನೂ ಓದಿ: ಜಾತಿ ಗಣತಿಯ ವರದಿ ಕಾಣೆ, ಜಯಪ್ರಕಾಶ್ ಹೆಗ್ಡೆಯಿಂದ ರಾಜ್ಯ ಸರ್ಕಾರಕ್ಕೆ ಪತ್ರ; ತಡವಾಗಿ ಬೆಳಕಿಗೆ

185 ಕೋಟಿ 75 ಲಕ್ಷ ರೂ. ಹಣ ಅನೀಮೀಯ ಮುಕ್ತ ಕರ್ನಾಟಕ ಮಾಡುತ್ತೇವೆ. ಮೊಟ್ಟೆ ತಿನ್ನೋರಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುತ್ತೇವೆ. ಅನೀಮಿಯ ಬರೋದು ಕಬ್ಬಿಣದ ಅಂಶ ಕಡಿಮೆ ಇದ್ದಾಗ ಮಾತ್ರ ಕಬ್ಬಿಣ ಅಂಶ ತರಕಾರಿ, ಮೊಟ್ಟೆ ಬೇರೆ ಬೇರೆ ಆಹಾರದಲ್ಲಿ ಜಾಸ್ತಿ ಸಿಗುತ್ತೆ. ಇವೆಲ್ಲ ಹೆಚ್ಚು ಬಳಸುವ ಕೆಲಸ ಆಗಬೇಕಿದೆ.

ಸುಮ್ಮನೇ ಕಾರ್ಯಕ್ರಮ ಮಾಡಿದರೆ ಆಗಲ್ಲ. ಅನೀಮಿಯ ಮುಕ್ತ ಆಗೋದ್ರಲ್ಲಿ ಕೆಲಸ ಮಾಡಿ. ಪ್ರಾಮಾಣಿಕ‌ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?