AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ವರದಿಯಲ್ಲಿ ಏನಿದೆ ಅಂತಾ ನಾನು ನೋಡಿಲ್ಲ. ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ. ಜಾತಿಗಣತಿ ವರದಿ ನೋಡಿ ಪರಿಶೀಲನೆ ಮಾಡುತ್ತೇವೆ. ಡಿಸೆಂಬರ್ ಅಥವಾ ಜನವರಿಯೊಳಗೆ ವರದಿ ಸಲ್ಲಿಕೆಗೆ ಹೇಳಿದ್ದೇನೆ ಎಂದಿದ್ದಾರೆ.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
Malatesh Jaggin
| Updated By: ಗಂಗಾಧರ​ ಬ. ಸಾಬೋಜಿ

Updated on: Nov 22, 2023 | 2:56 PM

ಬೆಂಗಳೂರು, ನವೆಂಬರ್​​​ 22: ಜಾತಿಗಣತಿ ವರದಿಯಲ್ಲಿ ಏನಿದೆ ಅಂತಾ ನಾನು ನೋಡಿಲ್ಲ. ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ. ಜಾತಿಗಣತಿ ವರದಿ ನೋಡಿ ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಯಪ್ರಕಾಶ್ ಹೆಗ್ಡೆ ಅವಧಿ ಈ ತಿಂಗಳು ಮುಗಿಯುತ್ತದೆ. ಜಾತಿಗಣತಿ ವರದಿ ಕೊಡುವವರೆಗೆ ಮುಂದುವರಿಯಲು ಹೇಳಿದ್ದೇನೆ ಎಂದರು.

ಜಾತಿಗಣತಿ ವರದಿಗೆ ಒಕ್ಕಲಿಗ ಸಮುದಾಯ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಜಾತಿಗಣತಿ ವರದಿಯಲ್ಲಿ ಏನಿದೆ ಅಂತಾ ನೋಡಬೇಕಲ್ವಾ. ಡಿಸೆಂಬರ್ ಅಥವಾ ಜನವರಿಯೊಳಗೆ ವರದಿ ಸಲ್ಲಿಕೆಗೆ ಹೇಳಿದ್ದೇನೆ. ಒಕ್ಕಲಿಗರ ಸಂಘದವರು ಕೂಡ ನಿನ್ನೆ ಬಂದು ಮನವಿ ಕೊಟ್ಟಿದ್ದಾರೆ. ವರದಿ ಕೊಟ್ಟ ಮೇಲೆ ಒಕ್ಕಲಿಗರ ಮನವಿ ಪರಿಶೀಲನೆ ಮಾಡುತ್ತೇವೆ. ವರದಿಯನ್ನು ನಾನೇ ನೋಡಿಲ್ಲ, ಬೇರೆಯವರು ಹೇಗೆ ನೋಡುತ್ತಾರೆ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಎಲ್ಲರೂ ಕೂಡ ಆರೋಗ್ಯವಂತರಾಗಿ ಬದುಕಬೇಕು

ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ಫುಡ್ ಸೆಕ್ಯೂರಿಟಿ ಆ್ಯಕ್ಟ್​ ತಂದಿದ್ದು ಡಾ.ಮನ​ಮೋಹನ್ ಸಿಂಗ್. ಪ್ರಧಾನಿ ನರೇಂದ್ರ ಮೋದಿ ನಾನೇ ವಿಶ್ವಗುರು ಅಂತಾ ಹೇಳುತ್ತಾರೆ. ನ್ಯಾಷನಲ್ ಫ್ಯಾಮಿಲಿ ಹೆಲ್ತ್ ರಿಪೋರ್ಟ್ ಇದೆ. ಸಮಾಜದಲ್ಲಿ ಎಲ್ಲರೂ ಕೂಡ ಆರೋಗ್ಯವಂತರಾಗಿ ಬದುಕಬೇಕು. ಕೆಲವು ರೋಗ ನಮ್ಮ ಪ್ರಯತ್ನದಿಂದ ತಡೆಗಟ್ಟಲು ಸಾಧ್ಯತೆ ಇದೆ. ನಾವು ಪ್ರತಿಯೊಬ್ಬರೂ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ನಮ್ಮ ಸಮಾಜದಲ್ಲಿ ಬಡತನ ಹಾಗೂ ಅನಕ್ಷರತೆ ಇದೆ ಎಂದರು.

ಇದನ್ನೂ ಓದಿ: ಜಾತಿಗಣತಿ ವರದಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿದ್ದರಾಮಯ್ಯ

ಹಳ್ಳಿಗಳಲ್ಲಿ ಬಡವರು ರೊಟ್ಟಿ, ಖಾರ ತಿಂದು ಜೀವನ ಮಾಡ್ತಾರೆ. ಹಸಿವುಮುಕ್ತ ರಾಜ್ಯ ಮಾಡಬೇಕೆಂದು ಅನ್ನಭಾಗ್ಯ ಜಾರಿ ಮಾಡಿದೆವು. ಶಾಲೆಗಳಲ್ಲಿ ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಿಸಲಾಗಿದೆ. ಮೊಟ್ಟೆ ತಿನ್ನುವವರಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡ್ತೀವಿ ಎಂದು ತಿಳಿಸಿದರು.

ಇದನ್ನೂ ಓದಿ: ಜಾತಿ ಗಣತಿಯ ವರದಿ ಕಾಣೆ, ಜಯಪ್ರಕಾಶ್ ಹೆಗ್ಡೆಯಿಂದ ರಾಜ್ಯ ಸರ್ಕಾರಕ್ಕೆ ಪತ್ರ; ತಡವಾಗಿ ಬೆಳಕಿಗೆ

185 ಕೋಟಿ 75 ಲಕ್ಷ ರೂ. ಹಣ ಅನೀಮೀಯ ಮುಕ್ತ ಕರ್ನಾಟಕ ಮಾಡುತ್ತೇವೆ. ಮೊಟ್ಟೆ ತಿನ್ನೋರಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುತ್ತೇವೆ. ಅನೀಮಿಯ ಬರೋದು ಕಬ್ಬಿಣದ ಅಂಶ ಕಡಿಮೆ ಇದ್ದಾಗ ಮಾತ್ರ ಕಬ್ಬಿಣ ಅಂಶ ತರಕಾರಿ, ಮೊಟ್ಟೆ ಬೇರೆ ಬೇರೆ ಆಹಾರದಲ್ಲಿ ಜಾಸ್ತಿ ಸಿಗುತ್ತೆ. ಇವೆಲ್ಲ ಹೆಚ್ಚು ಬಳಸುವ ಕೆಲಸ ಆಗಬೇಕಿದೆ.

ಸುಮ್ಮನೇ ಕಾರ್ಯಕ್ರಮ ಮಾಡಿದರೆ ಆಗಲ್ಲ. ಅನೀಮಿಯ ಮುಕ್ತ ಆಗೋದ್ರಲ್ಲಿ ಕೆಲಸ ಮಾಡಿ. ಪ್ರಾಮಾಣಿಕ‌ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ