AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ನನಗೆ ಏನೂ ಗೊತ್ತಿಲ್ಲ: ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್ಸಿನ ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಮ್ಮ ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ತಿಳಿಸಿದ್ರು. ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆ ಆಗುವುದಿಲ್ಲ. ಜಿಲ್ಲಾ, ರಾಜ್ಯ, ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡೇ ಮಾಡ್ತಾರೆ‌. ನಾನು ಇದೇ ಜಿಲ್ಲೆಯ‌ ಜನಪ್ರತಿನಿಧಿ, ನನ್ನ ಗಮನಕ್ಕೆ ಬಂದಿಲ್ಲ. ಬಿಜೆಪಿ ಕೇಡರ್ ಬೇಸ್ […]

ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ನನಗೆ ಏನೂ ಗೊತ್ತಿಲ್ಲ: ಶೆಟ್ಟರ್
ಆಯೇಷಾ ಬಾನು
| Edited By: |

Updated on: Oct 06, 2020 | 2:32 PM

Share

ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್ಸಿನ ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಮ್ಮ ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ತಿಳಿಸಿದ್ರು.

ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆ ಆಗುವುದಿಲ್ಲ. ಜಿಲ್ಲಾ, ರಾಜ್ಯ, ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡೇ ಮಾಡ್ತಾರೆ‌. ನಾನು ಇದೇ ಜಿಲ್ಲೆಯ‌ ಜನಪ್ರತಿನಿಧಿ, ನನ್ನ ಗಮನಕ್ಕೆ ಬಂದಿಲ್ಲ. ಬಿಜೆಪಿ ಕೇಡರ್ ಬೇಸ್ ಪಾರ್ಟಿ ಸ್ಥಳೀಯ ನಾಯಕರೇ ಅವರನ್ನ ರಾಷ್ಟ್ರೀಯ ನಾಯಕರನ್ನ ಭೇಟಿ ಮಾಡಿಸಬೇಕು. ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ನಂಗೇ ಏನೂ ಗೊತ್ತಿಲ್ಲ ಎಂದರು.

ಇನ್ನು ಹು-ಧಾ ಐಪಿಎಸ್ ಅಧಿಕಾರಿಗಳ ಕೋಲ್ಡ್ ವಾರ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಈ ವಿಚಾರ ನನ್ನ ಗಮನಕ್ಕೂ ಬಂದಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಹೀಗಾಗಿ ನಾನು ಅಧಿಕಾರಿಗಳಿಬ್ಬರ ಜೊತೆ ಮಾತನಾಡುತ್ತೇನೆ. ಅಲ್ಲದೇ ಗೃಹ ಸಚಿವರ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More