AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ದನದ ಮಾಂಸ ತಿನ್ತೀನಿ.. ಅದು ನನ್ನ ಆಹಾರ, ನನ್ನ ಹಕ್ಕು – ಮಾಜಿ ಸಿಎಂ ಸಿದ್ದರಾಮಯ್ಯ

ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳುವುದಕ್ಕೆ ನೀನ್ಯಾರು? ಎಂದು ಅಧಿವೇಶನದಲ್ಲಿಯೇ ನಾನು ಕೇಳಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ನಾನು ದನದ ಮಾಂಸ ತಿನ್ತೀನಿ.. ಅದು ನನ್ನ ಆಹಾರ, ನನ್ನ ಹಕ್ಕು - ಮಾಜಿ ಸಿಎಂ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 28, 2020 | 3:19 PM

Share

ಬೆಂಗಳೂರು: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ನಿನ್ನೆ (ಡಿ. 27) ಹನುಮ ಜಯಂತಿಯಂದು ಮೈಸೂರಿನಲ್ಲಿ ಸ್ನೇಹಿತನ ಮನೆಗೆ ಹೋಗಿ ಬಾಡೂಟ ಸವಿದಿದ್ದ ಸಿದ್ದು, ಇಂದು ಬೆಂಗಳೂರಿನಲ್ಲಿ ನಾನು ದನದ ಮಾಂಸ ತಿನ್ನುತ್ತೇನೆ ಎಂದು ಹೇಳಿದ್ದಾರೆ.

ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳುವುದಕ್ಕೆ ನೀನ್ಯಾರು? ಎಂದು ಅಧಿವೇಶನದಲ್ಲಿಯೇ ನಾನು ಕೇಳಿದ್ದೇನೆ. ನಮ್ಮವರು ಇದನ್ನು ಗಟ್ಟಿಯಾಗಿ ಹೇಳಲ್ಲ. ಕೆಲ ವಿಚಾರಗಳ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು ಎಂದು ಅವರು ಹೇಳಿದ್ರು.

ಗೋವನ್ನು ನಾವು ಪೂಜಿಸುತ್ತೇವೆ ಎಂಬುದು ಸರಿ. ಆದರೆ ವಯಸ್ಸಾದ ಹಸು, ಗಂಡು ಕರು ಏನ್ ಮಾಡೋದು ಹೇಳಿ? ಕಾಂಗ್ರೆಸ್‌ನವರು ಕೂಡ ಈ ವಿಚಾರದ ಬಗ್ಗೆ ಹೇಳಬೇಕು. ಬೇರೆ ಜಾತಿಯವರು ಏನೋ ಅನ್ಕೊಳ್ತಾರೆಂದು ಸುಮ್ಮನಾಗ್ತಾರೆ. ಮೌನಕ್ಕೆ ಶರಣಾಗುವುದನ್ನು ಬಿಡಬೇಕು. ನಮ್ಮ ಸಿದ್ಧಾಂತವನ್ನ ನಾವು ಹೇಳಬೇಕು ಎಂದು ಸಿದ್ದರಾಮಯ್ಯ ಇತರರಿಗೆ ತಿಳಿಸಿದ್ದಾರೆ.

1964ರಲ್ಲಿಯೇ ಗೋಹತ್ಯೆ ನಿಷೇಧ ಕಾನೂನು ತಂದಿದ್ದೆವು. ಕಾನೂನು ಜಾರಿಯಾದಾಗ ಬಿಜೆಪಿಯವರು ಇದ್ದರಾ? ಬಿಜೆಪಿಗಿಂತ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್​ನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾದರೆ ಬಡವರು, ರೈತರು, ಕಾರ್ಮಿಕರು, ಹಿಂದುಳಿದವರು, ದಲಿತರಿಗೆ ಹಿನ್ನಡೆಯಾದಂತೆ ಎಂದು ಸ್ವಪಕ್ಷದ ಬಗ್ಗೆ ಹಿರಿಮೆಯ ಮಾತನಾಡಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ಸುಗ್ರೀವಾಜ್ಞೆಗೆ ಅನುಮೋದನೆ​

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ