AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ, ಅವರೂ ಸಹ ಆಹ್ವಾನ ನೀಡಿಲ್ಲ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ

ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ಅವರೂ ಕೂಡ ನನ್ನನ್ನು ಪಕ್ಷ ಸೇರ್ಪಡೆ ಆಗುವಂತೆ ಆಹ್ವಾನ ನೀಡಿಲ್ಲ. ನಾನು ಕೂಡ ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ ಎಂದು ಬಿಜೆಪಿ ಮಾಜಿ ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ.

ನಾನು ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ, ಅವರೂ ಸಹ ಆಹ್ವಾನ ನೀಡಿಲ್ಲ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ
ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ರನ್ನು ಭೇಟಿ ಮಾಡಿದ ರೇಣುಕಾಚಾರ್ಯ
Anil Kalkere
| Edited By: |

Updated on: Aug 25, 2023 | 5:27 PM

Share

ಬೆಂಗಳೂರು, ಆಗಸ್ಟ್​ 25: ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ಅವರೂ ಕೂಡ ನನ್ನನ್ನು ಪಕ್ಷ ಸೇರ್ಪಡೆ ಆಗುವಂತೆ ಆಹ್ವಾನ ನೀಡಿಲ್ಲ. ನಾನು ಕೂಡ ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ ಎಂದು ಬಿಜೆಪಿ ಮಾಜಿ ಶಾಸಕ M.P.ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಭೇಟಿ ವೇಳೆ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ರಾಜಕೀಯೇತರ ಹಲವು ವಿಚಾರಗಳನ್ನು ಜೊತೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ನಾನು ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್​ಗೆ ಪ್ರಬಲ ಆಕಾಂಕ್ಷಿ. ದಾವಣಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮೊದಲೇ ಹೇಳಿದ್ದೇನೆ ಎಂದರು.

ಬರದ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ಭೇಟಿ ಮಾಡಿದ ರೇಣುಕಾಚಾರ್ಯ 

ಬರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಬಂದಿದ್ದೇನೆ. ಡಿಕೆ ಶಿವಕುಮಾರ್​ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಭೇಟಿಯಾಗಿದ್ದೆ. ಹೀಗಾಗಿ ಇಂದು ​ ಭೇಟಿಯಾಗಿ ಮಾತನಾಡಿದ್ದೇನೆ ಎಂದು ಹೇಳಿದರು. ಅದೇ ರೀತಿಯಾಗಿ ಇಂದು ವರಮಹಾಲಕ್ಷ್ಮಿ ಪೂಜೆ ಹಿನ್ನೆಲೆ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಮತ್ತು ಕೃಷ್ಣ ಬೈರೇಗೌಡರನ್ನೂ ಭೇಟಿಯಾಗಿರುವೆ. ಹೊನ್ನಾಳಿ ಕ್ಷೇತ್ರವನ್ನ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಮನವಿ ಮಾಡಿರುವೆ. ಭೇಟಿ ಮಾಡಬಾರದಂತ ಏನಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Shobha Karandlaje: ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ರಸ್ತೆ ಬದಿ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ

ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳನ್ನು ಪ್ರಧಾನಮಂತ್ರಿ ಮೋದಿ ಅಭಿನಂದಿಸಲಿದ್ದಾರೆ. ಬಿಜೆಪಿ-ಕಾಂಗ್ರೆಸ್ ಕ್ರೆಡಿಟ್ ಫೈಟ್ ಬಗ್ಗೆ ನಾನು ಮಾತನಾಡುವುದಿಲ್ಲ.

ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಸಚಿವ ಎಂ.ಬಿ.ಪಾಟೀಲ್​ ಕಿಡಿ 

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಕೊರತೆ ಉಂಟಾಗಿದೆ. ಬರ ಎಂದು ಘೋಷಣೆಗೆ ಕೇಂದ್ರದ ಕೆಲ ನಿಯಮಗಳು ಅಡ್ಡಿಯಾಗಿವೆ. ರಾಜ್ಯದಲ್ಲಿ ಬರ ಘೋಷಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರದ ಬಳಿ ಹೋಗಲಿ ಎಂದರು.

ಇದನ್ನೂ ಓದಿ: ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ

ಪ್ರಧಾನಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಒತ್ತಾಯಿಸಲಿ. ಬರ ಘೋಷಣೆಗೆ ಕೇಂದ್ರ ಸರ್ಕಾರದಿಂದ ಕೆಲ ಮಾನದಂಡಗಳು ಇವೆ. ಬರ ಘೋಷಣೆ ವಿಚಾರವಾಗಿ ಸಿಎಂ, ಕಂದಾಯ ಸಚಿವರು ಮಾತಾಡಿದ್ದಾರೆ. ಎ‌‌ನ್​ಡಿಆರ್​​ಎಫ್ ನಿಯಮದ ಪ್ರಕಾರ ಕೇಂದ್ರ ಸಹಾಯಕ್ಕೆ ಬರಬೇಕಿದೆ. ಬೊಮ್ಮಾಯಿ ರಾಜಕೀಯ ಮಾಡೋದನ್ನು ಬಿಟ್ಟು ರೈತರಿಗೆ ಸಹಾಯ ಮಾಡಲಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?