AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ, ಅವರೂ ಸಹ ಆಹ್ವಾನ ನೀಡಿಲ್ಲ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ

ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ಅವರೂ ಕೂಡ ನನ್ನನ್ನು ಪಕ್ಷ ಸೇರ್ಪಡೆ ಆಗುವಂತೆ ಆಹ್ವಾನ ನೀಡಿಲ್ಲ. ನಾನು ಕೂಡ ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ ಎಂದು ಬಿಜೆಪಿ ಮಾಜಿ ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ.

ನಾನು ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ, ಅವರೂ ಸಹ ಆಹ್ವಾನ ನೀಡಿಲ್ಲ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ
ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ರನ್ನು ಭೇಟಿ ಮಾಡಿದ ರೇಣುಕಾಚಾರ್ಯ
Anil Kalkere
| Edited By: |

Updated on: Aug 25, 2023 | 5:27 PM

Share

ಬೆಂಗಳೂರು, ಆಗಸ್ಟ್​ 25: ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ಅವರೂ ಕೂಡ ನನ್ನನ್ನು ಪಕ್ಷ ಸೇರ್ಪಡೆ ಆಗುವಂತೆ ಆಹ್ವಾನ ನೀಡಿಲ್ಲ. ನಾನು ಕೂಡ ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ ಎಂದು ಬಿಜೆಪಿ ಮಾಜಿ ಶಾಸಕ M.P.ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಭೇಟಿ ವೇಳೆ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ರಾಜಕೀಯೇತರ ಹಲವು ವಿಚಾರಗಳನ್ನು ಜೊತೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ನಾನು ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್​ಗೆ ಪ್ರಬಲ ಆಕಾಂಕ್ಷಿ. ದಾವಣಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮೊದಲೇ ಹೇಳಿದ್ದೇನೆ ಎಂದರು.

ಬರದ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ಭೇಟಿ ಮಾಡಿದ ರೇಣುಕಾಚಾರ್ಯ 

ಬರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಬಂದಿದ್ದೇನೆ. ಡಿಕೆ ಶಿವಕುಮಾರ್​ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಭೇಟಿಯಾಗಿದ್ದೆ. ಹೀಗಾಗಿ ಇಂದು ​ ಭೇಟಿಯಾಗಿ ಮಾತನಾಡಿದ್ದೇನೆ ಎಂದು ಹೇಳಿದರು. ಅದೇ ರೀತಿಯಾಗಿ ಇಂದು ವರಮಹಾಲಕ್ಷ್ಮಿ ಪೂಜೆ ಹಿನ್ನೆಲೆ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಮತ್ತು ಕೃಷ್ಣ ಬೈರೇಗೌಡರನ್ನೂ ಭೇಟಿಯಾಗಿರುವೆ. ಹೊನ್ನಾಳಿ ಕ್ಷೇತ್ರವನ್ನ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಮನವಿ ಮಾಡಿರುವೆ. ಭೇಟಿ ಮಾಡಬಾರದಂತ ಏನಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Shobha Karandlaje: ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ರಸ್ತೆ ಬದಿ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ

ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳನ್ನು ಪ್ರಧಾನಮಂತ್ರಿ ಮೋದಿ ಅಭಿನಂದಿಸಲಿದ್ದಾರೆ. ಬಿಜೆಪಿ-ಕಾಂಗ್ರೆಸ್ ಕ್ರೆಡಿಟ್ ಫೈಟ್ ಬಗ್ಗೆ ನಾನು ಮಾತನಾಡುವುದಿಲ್ಲ.

ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಸಚಿವ ಎಂ.ಬಿ.ಪಾಟೀಲ್​ ಕಿಡಿ 

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಕೊರತೆ ಉಂಟಾಗಿದೆ. ಬರ ಎಂದು ಘೋಷಣೆಗೆ ಕೇಂದ್ರದ ಕೆಲ ನಿಯಮಗಳು ಅಡ್ಡಿಯಾಗಿವೆ. ರಾಜ್ಯದಲ್ಲಿ ಬರ ಘೋಷಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರದ ಬಳಿ ಹೋಗಲಿ ಎಂದರು.

ಇದನ್ನೂ ಓದಿ: ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ

ಪ್ರಧಾನಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಒತ್ತಾಯಿಸಲಿ. ಬರ ಘೋಷಣೆಗೆ ಕೇಂದ್ರ ಸರ್ಕಾರದಿಂದ ಕೆಲ ಮಾನದಂಡಗಳು ಇವೆ. ಬರ ಘೋಷಣೆ ವಿಚಾರವಾಗಿ ಸಿಎಂ, ಕಂದಾಯ ಸಚಿವರು ಮಾತಾಡಿದ್ದಾರೆ. ಎ‌‌ನ್​ಡಿಆರ್​​ಎಫ್ ನಿಯಮದ ಪ್ರಕಾರ ಕೇಂದ್ರ ಸಹಾಯಕ್ಕೆ ಬರಬೇಕಿದೆ. ಬೊಮ್ಮಾಯಿ ರಾಜಕೀಯ ಮಾಡೋದನ್ನು ಬಿಟ್ಟು ರೈತರಿಗೆ ಸಹಾಯ ಮಾಡಲಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!