AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ

ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ
ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌
ಆಯೇಷಾ ಬಾನು
|

Updated on: Mar 22, 2021 | 12:37 PM

Share

ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಹಾಗೂ ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ ಹಾಕಿ ಜೀವಬೆದರಿಕೆ ಹಾಕಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌ಗೆ ದೂರು ದಾಖಲಿಸಿದ್ದಾರೆ. ಶಿವುಸಾಗರ್ ಎಂಬಾತನಿಂದ ಜೀವಬೆದರಿಕೆ ಇದೆ. ಅವನ ವಿರುದ್ಧ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಲಕ್ಷ್ಮೀಕಾಂತ್‌ ದೂರು ನೀಡಿದ್ದಾರೆ.

ಕುಮಾರಸ್ವಾಮಿ ಹಾಗೂ ಹಾಪ್ ಕಾಮ್ಸ್ ದೇವರಾಜ್ ಬಗ್ಗೆ ಮಾತನಾಡ ಬೇಡಿ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹಾಪ್ ಕಾಮ್ಸ್ ದೇವರಾಜ್, ಕುಮಾರಸ್ವಾಮಿ ಅವರ ಆಪ್ತ ಹೀಗಾಗಿ ಇವರಿಬ್ಬರ ಬಗ್ಗೆ ಮಾತನಾಡುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ. ಪೊಲೀಸರಿಗೆ ಸಿಗುವ ಲೈವ್ ಲೊಕೇಷನ್ ಇವರಿಗೆ ಹೇಗೆ ಸಿಕ್ತು. ತಪ್ಪು ಮಾಡಿದವರ ವಿರುದ್ಧ ನಾನು ಧ್ವನಿ ಎತ್ತಿದ್ದೇ ತಪ್ಪಾ? ಹೀಗಾಗಿ ಜೀವಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಲಕ್ಷ್ಮೀಕಾಂತ್‌ ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಲೆ ಬೆದರಿಕೆ ಹಾಕಿದ್ದೇಕೆ? ಲಕ್ಷ್ಮೀಕಾಂತ್‌, ಮಾರ್ಚ್ 16 ರಂದು ತನ್ನ ಫೇಸ್​ಬುಕ್ ಖಾತೆಯಲ್ಲಿ JDS ಪಕ್ಷದ ಯುವ ಘಟಕ ಮತ್ತು ಪಕ್ಷದ ಮುಖಂಡರ ಕುರಿತು ಕಾರ್ಯಕರ್ತರಿಗೆ ಸ್ಪಂದಿಸದೆ ಹೋರಾಟವನ್ನು ರೂಪಿಸದಿರುವ ಕುರಿತು ವಿಮರ್ಶಕನಾಗಿ ವಿಡಿಯೋ ಮಾಡಿ ಅಪ್​ಲೋಡ್ ಮಾಡಿದ್ದರು. ಈ ವಿಡಿಯೋ ನೋಡಿದ ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಇದನ್ನೂ ಓದಿ: ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ