AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ

ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ
ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌
Follow us
ಆಯೇಷಾ ಬಾನು
|

Updated on: Mar 22, 2021 | 12:37 PM

ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಹಾಗೂ ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ ಹಾಕಿ ಜೀವಬೆದರಿಕೆ ಹಾಕಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌ಗೆ ದೂರು ದಾಖಲಿಸಿದ್ದಾರೆ. ಶಿವುಸಾಗರ್ ಎಂಬಾತನಿಂದ ಜೀವಬೆದರಿಕೆ ಇದೆ. ಅವನ ವಿರುದ್ಧ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಲಕ್ಷ್ಮೀಕಾಂತ್‌ ದೂರು ನೀಡಿದ್ದಾರೆ.

ಕುಮಾರಸ್ವಾಮಿ ಹಾಗೂ ಹಾಪ್ ಕಾಮ್ಸ್ ದೇವರಾಜ್ ಬಗ್ಗೆ ಮಾತನಾಡ ಬೇಡಿ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹಾಪ್ ಕಾಮ್ಸ್ ದೇವರಾಜ್, ಕುಮಾರಸ್ವಾಮಿ ಅವರ ಆಪ್ತ ಹೀಗಾಗಿ ಇವರಿಬ್ಬರ ಬಗ್ಗೆ ಮಾತನಾಡುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ. ಪೊಲೀಸರಿಗೆ ಸಿಗುವ ಲೈವ್ ಲೊಕೇಷನ್ ಇವರಿಗೆ ಹೇಗೆ ಸಿಕ್ತು. ತಪ್ಪು ಮಾಡಿದವರ ವಿರುದ್ಧ ನಾನು ಧ್ವನಿ ಎತ್ತಿದ್ದೇ ತಪ್ಪಾ? ಹೀಗಾಗಿ ಜೀವಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಲಕ್ಷ್ಮೀಕಾಂತ್‌ ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಲೆ ಬೆದರಿಕೆ ಹಾಕಿದ್ದೇಕೆ? ಲಕ್ಷ್ಮೀಕಾಂತ್‌, ಮಾರ್ಚ್ 16 ರಂದು ತನ್ನ ಫೇಸ್​ಬುಕ್ ಖಾತೆಯಲ್ಲಿ JDS ಪಕ್ಷದ ಯುವ ಘಟಕ ಮತ್ತು ಪಕ್ಷದ ಮುಖಂಡರ ಕುರಿತು ಕಾರ್ಯಕರ್ತರಿಗೆ ಸ್ಪಂದಿಸದೆ ಹೋರಾಟವನ್ನು ರೂಪಿಸದಿರುವ ಕುರಿತು ವಿಮರ್ಶಕನಾಗಿ ವಿಡಿಯೋ ಮಾಡಿ ಅಪ್​ಲೋಡ್ ಮಾಡಿದ್ದರು. ಈ ವಿಡಿಯೋ ನೋಡಿದ ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಇದನ್ನೂ ಓದಿ: ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ