ಸೋಮಶೇಖರ್ ಜಾಮೂನು ತಿಂದಿದ್ದು ನಿಜ ಆದರೆ ವಿಷ ಕುಡಿಯುವ ಪ್ರಶ್ನೆ ಎಲ್ಲಿಂದ ಬಂತು? ಕೆಎಸ್ ಈಶ್ವರಪ್ಪ

ಸೋಮಶೇಖರ್ ಅವರನ್ನು ಪಕ್ಷ ಬಿಟ್ಟುಹೋಗಿ ಅಂತ ತಾನು ಯಾವತ್ತೂ ಹೇಳಿಲ್ಲ ಅವರು ಪಕ್ಷಕ್ಕೆ ಬಂದಾಗ ಜಾಮೂನು ತಿಂದಿದ್ದು ನಿಜ, ಯಾಕೆಂದರೆ ಅವರು ಬಿಜೆಪಿ ಸರ್ಕಾರದಲ್ಲಿ ಸಚಿವರಾದರು, ಎಲ್ಲ ಸವಲತ್ತುಗಳನ್ನು ಅನುಭವಿಸಿದರು ಮತ್ತು ಮತ್ತೊಮ್ಮೆ ಶಾಸಕರೂ ಅಗಿದ್ದಾರೆ ಎಂದು ಈಶ್ವರಪ್ಪ ಹೇಳಿದರು,

ಸೋಮಶೇಖರ್ ಜಾಮೂನು ತಿಂದಿದ್ದು ನಿಜ ಆದರೆ ವಿಷ ಕುಡಿಯುವ ಪ್ರಶ್ನೆ ಎಲ್ಲಿಂದ ಬಂತು? ಕೆಎಸ್ ಈಶ್ವರಪ್ಪ
|

Updated on: Nov 08, 2023 | 6:27 PM

ಬೆಂಗಳೂರು: 2019 ರಲ್ಲಿ ಬಿಜೆಪಿಗೆ ವಲಸೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ವಿಷಯದಲ್ಲಿ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪನವರಿಗೆ (KS Eshwarappa) ಅಸಹನೆ ಹೆಚ್ಚುತ್ತಿರುವುದು ಸ್ಪಷ್ಟವಾಗಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಪಕ್ಷ ಮತ್ತು ಅದರ ನಾಯಕರ ವಿರುದ್ಧ ಪದೇಪದೆ ಟೀಕೆಗಳನ್ನು ಮಾಡುತ್ತಿರುವ ಯಶವಂತಪುರದ ಶಾಸಕ ಎಸ್ ಟಿ ಸೋಮಶೇಖರ್ (SR Somashekhar) ಮೇಲೆ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಪಕ್ಷಕ್ಕೆ ಬರಮಾಡಿಕೊಳ್ಳುವಾಗ ಜಾಮೂನು ತಿನ್ನಿಸುತ್ತಾರೆ ಕಳಿಸುವಾಗ ವಿಷ ಕುಡಿಸುತ್ತಾರೆ ಅಂತ ಹೇಳಿರುವುದಕ್ಕೆ ವ್ಯಗ್ರರಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಸೋಮಶೇಖರ್ ಅವರನ್ನು ಪಕ್ಷ ಬಿಟ್ಟುಹೋಗಿ ಅಂತ ತಾನು ಯಾವತ್ತೂ ಹೇಳಿಲ್ಲ ಅವರು ಪಕ್ಷಕ್ಕೆ ಬಂದಾಗ ಜಾಮೂನು ತಿಂದಿದ್ದು ನಿಜ, ಯಾಕೆಂದರೆ ಅವರು ಬಿಜೆಪಿ ಸರ್ಕಾರದಲ್ಲಿ ಸಚಿವರಾದರು, ಎಲ್ಲ ಸವಲತ್ತುಗಳನ್ನು ಅನುಭವಿಸಿದರು ಮತ್ತು ಮತ್ತೊಮ್ಮೆ ಶಾಸಕರೂ ಅಗಿದ್ದಾರೆ ಎಂದರು. ಆದರೆ ವಿಷದ ಮಾತು ಎಲ್ಲಿಂದ ಬಂತು? ಅವರೇನು ಪಕ್ಷ ಬಿಟ್ಟಿಹೋಗಿದ್ದಾರೆಯೇ? ಬಿಜೆಪಿ ಬಿಟ್ಟು ಹೋಗುವಾಗ ವಿಷ ಕುಡಿಸುತ್ತಾರೆ ಅಂತ ಅವರು ಹೇಗೆ ಹೇಳುತ್ತಾರೆ? ಬಸವರಾಜ ಬೊಮ್ಮಾಯಿ (Basavaraj Bommai) ಸಹ ಬೇರೆ ಪಕ್ಷದಿಂದ ಬಂದವರು, ಆದರೆ ಪಕ್ಷ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ಗೌರವಿಸಿತು ಎಂದು ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ