AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ವಾಲ್ಮೀಕಿ ಮಂದಿರದಲ್ಲಿ 23 ಸಾವಿರ ಶ್ಲೋಕಗಳ ಕೆತ್ತನೆ: ಬಸವರಾಜ ಬೊಮ್ಮಯಿ

ದಾವಣಗೆರೆಯಲ್ಲಿ ನಡೆದ ವಾಲ್ಮೀಕಿ‌ ಜಾತ್ರೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಾಲ್ಮೀಕಿ ಸಮಾಜದ ಮೀಸಲಾತಿ ಹೆಚ್ಚಳಕ್ಕೆ ಅಗತ್ಯ ಇರುವ ಒಂಬತ್ತನೇ ಪರಿಚ್ಚೇದನಕ್ಕೆ ಸೇರ್ಪಡೆ ಮಾಡಿಸುತ್ತೇವೆ. ನಾನು ಸಿಎಂ ಆಗಿದ್ದಾಗ ಕೇಂದ್ರಕ್ಕೆ ಶಿಪಾರಸ್ಸು ಮಾಡಿದ್ದು, ಕಾಂಗ್ರೆಸ್ ಸರ್ಕಾರದಿಂದ ಕೇಂದ್ರಕ್ಕೆ ಬೇಕಾದ ಶಿಪಾರಸ್ಸು ಮಾಡಿಸಿ ಎಂದರು.

ಅಯೋಧ್ಯೆಯ ವಾಲ್ಮೀಕಿ ಮಂದಿರದಲ್ಲಿ 23 ಸಾವಿರ ಶ್ಲೋಕಗಳ ಕೆತ್ತನೆ: ಬಸವರಾಜ ಬೊಮ್ಮಯಿ
ಬಸವರಾಜ ಬೊಮ್ಮಾಯಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi|

Updated on: Feb 09, 2024 | 2:53 PM

Share

ದಾವಣಗೆರೆ, ಫೆ.9: ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ (Valmiki Mandir) ನಿರ್ಮಾಣ ಆಗಲಿದೆ. ವಾಲ್ಮೀಕಿ ಮಂದಿರ ನಿರ್ಮಾಣದಲ್ಲಿ 23 ಸಾವಿರ ಶ್ಲೋಕಗಳನ್ನು ಕೆತ್ತನೆ ಮಾಡಿಸಲಾಗುವುದು. ಈ ವಿಚಾರ ಪ್ರಧಾ‌ನಿ ನರೇಂದ್ರ ಮೋದಿ (Narendra Modi) ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಗಮನಕ್ಕೆ ತರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದರು.

ವಾಲ್ಮೀಕಿ‌ ಜಾತ್ರೆ ಪ್ರಯುಕ್ತ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದ ಸಾಹಿತಿ‌ ಬಿಎಲ್ ವೇಣು ಅವರಿಗೆ ವಾಲ್ಮೀಕಿ ಗುರುಪೀಠದಿಂದ ‌ಕೊಡಮಾಡಿದ ಒಂದು ಲಕ್ಷ ರೂಪಾಯಿ ನಗದು ಒಳಗೊಂಡ ವೀರ ರಾಜಾ ಮದಕರಿ‌ ನಾಯಕ ಪ್ರಶಸ್ತಿ ಪ್ರದಾನ ಮಾಡಿದರು.

ಇದನ್ನೂ ಓದಿ: ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ಸಿದ್ದರಾಮಯ್ಯ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಾರೆ: ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ

ಬಳಿಕ ಮಾತನಾಡಿದ ಅವರು, ಮುಂದಿನ ಅವಧಿಗೂ ಪ್ರಧಾನಿ ನರೇಂದ್ರ ಮೋದಿ ಅವರೇ ಮುಂದುವರೆಯಲಿದ್ದಾರೆ. ವಾಲ್ಮೀಕಿ ಸಮಾಜಕ್ಕೆ ಶೇ 7.5 ಮೀಸಲಾತಿ ಹೆಚ್ಚಾಗುತ್ತದೆ. ಮೀಸಲಾತಿ ಹೆಚ್ಚಳಕ್ಕೆ ಅಗತ್ಯ ಇರುವ ಒಂಬತ್ತನೇ ಪರಿಚ್ಚೇದನಕ್ಕೆ ಸೇರ್ಪಡೆ ಮಾಡಿಸುತ್ತೇವೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರಕ್ಕೆ ಶಿಪಾರಸ್ಸು ಮಾಡಿದ್ದೆ. ಹಾಲಿ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರಕ್ಕೆ ಬೇಕಾದ ಶಿಪಾರಸ್ಸು ಮಾಡಿಸಿ. ಅಧಿಕಾರ ಎಂಬುದು ಶಾಶ್ವತವಲ್ಲ. ನಾನು ಸಿಎಂ ಆಗಿದ್ದಾಗ ಇಂದೇ ಕೊನೆಯ ದಿನ ಎಂದು ಕೆಲಸ ಮಾಡಿದ್ದೆ ಎಂದರು.

ವಾಲ್ಮೀಕಿ ಬರೆದ ರಾಮಾಯಣ ಜಗತ್ತಿನ 10 ಶ್ರೇಷ್ಠ ಕೃತಿಗಳಲ್ಲಿ ಒಂದು. ಚಿತ್ರದುರ್ಗದ ಮದಕರಿ ಪರಂಪರೆ ಹಿನ್ನೆಲೆ ವಾಲ್ಮೀಕಿ ಜನಾಂಗಕ್ಕೆ ಇದೆ. ಇಂದು ದೇಶ ಒಂದಾಗಿ ಉಳಿಯಲು ಮೂಲ‌ ಕಾರಣ ವಾಲ್ಮೀಕಿ ಕುಲಕ್ಕೆ ಇದೆ. ವಾಲ್ಮೀಕಿ ಜನಾಂಗ ಮೊದಲು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇರಲಿಲ್ಲ. ಕೇಂದ್ರಕ್ಕೆ ಶಿಪಾರಸ್ಸು ಮಾಡಿದ್ದು ರಾಮಕೃಷ್ಣ ಹೆಗಡೆ. ಕೇಂದ್ರದಲ್ಲಿ ಚಂದ್ರಶೇಖರ ನೇತೃತ್ವದ ಸರ್ಕಾರ ಇತ್ತು. ಇದನ್ನೆ ಒತ್ತಾಯ ಮಾಡಿ ಪಟ್ಟಿಗೆ ಸೇರಿದ್ದು ಮಾಜಿ ಪ್ರಧಾನಿ ‌ಎಚ್ ಡಿ ದೇವೇಗೌಡರು. ಇದೀಗ ವಾಲ್ಮೀಕಿ‌ ಮೀಸಲಾತಿ ಹೆಚ್ಚಾಗ ಬೇಕು. ಇದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ