AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಡೆತ್​ ಬಗ್ಗೆ ಅಡಿಟಿಂಗ್​ ಆಗಲಿ, ಆಸ್ಪತ್ರೆಗಳ ಬೆಡ್​ ರಿಯಾಲಿಟಿ ಚೆಕ್​ಗೆ ನಾನೇ ಬರುತ್ತೇನೆ: ಡಿ.ಕೆ.ಶಿವಕುಮಾರ್​

ಕರ್ನಾಟಕ ರಾಜ್ಯದಲ್ಲಿ ಲಾಕ್​ಡೌನ್ ಮಾಡುವುದು ವೇಡ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಳೆದ ಬಾರಿ ಲಾಕ್​ಡೌನ್ ಆದಾಗ ಜನರಿಗೆ ಏನು ಕೊಟ್ಟಿದ್ದೀರಿ? ಯಾವೆಲ್ಲ ನೆರವು ನೀಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ಡೆತ್​ ಬಗ್ಗೆ ಅಡಿಟಿಂಗ್​  ಆಗಲಿ, ಆಸ್ಪತ್ರೆಗಳ ಬೆಡ್​ ರಿಯಾಲಿಟಿ ಚೆಕ್​ಗೆ ನಾನೇ ಬರುತ್ತೇನೆ: ಡಿ.ಕೆ.ಶಿವಕುಮಾರ್​
ಡಿ.ಕೆ. ಶಿವಕುಮಾರ್
Lakshmi Hegde
|

Updated on:Apr 20, 2021 | 3:33 PM

Share

ಬೆಂಗಳೂರು: ರಾಜ್ಯದಲ್ಲಿ ಕೊವಿದ್​ ಹೆಚ್ಚುತ್ತಿರುವ ಬೆನ್ನಲ್ಲೇ ಆಕ್ಸಿಜನ್​ ಮತ್ತು ಬೆಡ್​ಗಳ ಕೊರತೆ ಬಗ್ಗೆ ಬಲವಾಗಿ ಮಾತು ಕೇಳಿಬರುತ್ತಿದೆ. ಏನೂ ಸಮಸ್ಯೆ ಇಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ರಾಜ್ಯದ ಎಷ್ಟು ಆಸ್ಪತ್ರೆಗಳಲ್ಲಿ ಬೆಡ್​ ಇದೆ ನೋಡೋಣ. ನಾನು ರಿಯಾಲಿಟಿ ಚೆಕ್​ ಮಾಡುವುದಕ್ಕೆ ಬರುತ್ತೇನೆ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಏನೂ ಸಮಸ್ಯೆಯಿಲ್ಲ ಎಂದು ಸಚಿವರು ಪ್ರತಿನಿತ್ಯ ಮಾಧ್ಯಮಗಳಿಗೆ ಹೇಳಿಕೆ ಕೊಡುತ್ತಿದ್ದಾರೆ. ಆದರೆ ವಾಸ್ತವ ಏನು ಎಂಬುದನ್ನು ನೋಡಬೇಕು. ಸರ್ಕಾರ ಮೊದಲೇ ಸೂಕ್ತ ಕ್ರಮ ಕೈಗೊಂಡಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ನೋಡಿ ಜನರು ನಗುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ 25 ಸಾವಿರ ನಿಗದಿಪಡಿಸಲಾಗಿದೆ. ಶವಸಂಸ್ಕಾರ ಗೌರವಯುತವಾಗಿ ನಡೆಯಬೇಕು. ಟೋಕನ್ ತೆಗೆದುಕೊಂಡು, 25 ಸಾವಿರ ರೂ.ನೀಡಿ ಶವಸಂಸ್ಕಾರ ಮಾಡಬೇಕಾ? ಕೊರೊನಾ ಡೆತ್ ಬಗ್ಗೆ ಆಡಿಟಿಂಗ್ ಆಗಬೇಕು. ಆಗಷ್ಟೇ ರಾಜ್ಯದ ಜನರಿಗೆ ಸ್ಪಷ್ಟ ಮಾಹಿತಿ ಸಿಗುತ್ತದೆ. ರಾಜ್ಯದಲ್ಲಿ ಬೆಡ್ ಸಿಗದೆ ಸತ್ತವರೆಷ್ಟು? ಎಂಬುದೂ ತಿಳಿಯುತ್ತದೆ ಎಂದು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಐದಾರು ಸಚಿವರಯ, ಅಧಿಕಾರಿಗಳು ಮಾತ್ರ ಸರ್ಕಾರವಲ್ಲ. ಸರ್ಕಾರ ಎಂದರೆ ಗ್ರಾಮ ಪಂಚಾಯಿತಿಯೂ ಸೇರಿರುತ್ತದೆ. ಪಿಎಂ ಕೇರ್​ನಿಂದ ಎಷ್ಟು ಫಂಡ್​ ಬಂತು ಲೆಕ್ಕ ಕೊಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಲಾಕ್​ಡೌನ್ ಬೇಡ ಕರ್ನಾಟಕ ರಾಜ್ಯದಲ್ಲಿ ಲಾಕ್​ಡೌನ್ ಮಾಡುವುದು ವೇಡ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಳೆದ ಬಾರಿ ಲಾಕ್​ಡೌನ್ ಆದಾಗ ಜನರಿಗೆ ಏನು ಕೊಟ್ಟಿದ್ದೀರಿ? ಯಾವೆಲ್ಲ ನೆರವು ನೀಡಿದ್ದೀರಿ? ಎಂದು ಪ್ರಶ್ನಿಸಿದ ಅವರು, ಈ ಬಾರಿ ಲಾಕ್​ಡೌನ್ ಮಾಡಿದರೆ ಜನರಿಗೆ ಏನು ನೆರವು ನೀಡುತ್ತೀರಿ? ಫುಡ್ ಕಿಟ್ ಕೊಡುತ್ತೀರಾ, ಆರ್ಥಿಕ ಸಹಾಯ ಮಾಡುತ್ತೀರಾ? ರಾಜ್ಯ ಸರ್ಕಾರ ಯಾವೆಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಕೇಳಿದ್ದಾರೆ. ಕೊರೊನಾ ಹೆಚ್ಚಳಕ್ಕೆ ಜನರೇ ಹೊಣೆ ಎಂದು ಸಚಿವ ಡಾ.ಸುಧಾಕರ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್, ಜನರೇ ಕಾರಣ ಅನ್ನೋದಾದರೆ, ಆರೋಗ್ಯ ಸಚಿವರಾಗಿ ನೀವೇಕೆ ಇದ್ದೀರಿ? ನೀವೇನು ಮಾಡುತ್ತಿದ್ದೀರಿ? ಜನರಿಗೆ ಆಳ್ವಿಕೆ ಮಾಡಲು ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Employees Provident Fund | UAN ಸಂಖ್ಯೆಯ ಗೊಡವೆ ಇಲ್ಲದೆ ಪಿಎಫ್ ಖಾತೆಯಲ್ಲಿ ಬ್ಯಾಲೆನ್ಸ್ ಚೆಕ್ ಮಾಡುವ ಉಪಾಯ ಇಲ್ಲಿದೆ!

ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ 27 ವರ್ಷದ ಯುವಕ ಬಲಿ

Published On - 3:31 pm, Tue, 20 April 21

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ